ಟ್ವಿಟ್ಟರ್ನಲ್ಲಿ ರಾಹುಲ್, ಕೇಜ್ರಿವಾಲ್ ಸೀಟು ಹಂಚಿಕೆ ಯೂ-ಟರ್ನ್ ಜಟಾಪಟಿ
ನವದೆಹಲಿ, ಏ.16: ಮಾತುಕತೆ ಮೂಲಕ ಸೀಟು ಹಂಚಿಕೆ ಮಾಡಿಕೊಳ್ಳಬೇಕಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟ್ಟರ್ನಲ್ಲಿ ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದಾರೆ.
ಬಿಜೆಪಿ ಸೋಲಿಸಲು ಆಪ್ನೊಂದಿಗೆ ಮೈತ್ರಿ ಬಹುತೇಕ ಅಂತ್ಯವಾಗಿತ್ತು. ಆದರೆ ಅರವಿಂದ್ ಕೇಜ್ರಿವಾಲ್ ಯೂ-ಟರ್ನ್ ಹೊಡೆದಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ಪ್ರತ್ಯುತ್ತರ ನೀಡಿರುವ ಕೇಜ್ರಿವಾಲ್, ಮಹಾಮೈತ್ರಿ ಎನ್ನುವುದು ರಾಹುಲ್ಗೆ ಕೇವಲ ಪ್ರದರ್ಶನಕ್ಕೆ ಆದರೆ ನೈಜವಾಗಿ ದೇಶದೆಲ್ಲೆಡೆ ಬಿಜೆಪಿಗೆ ಕಾಂಗ್ರೆಸ್ ಸಹಾಯ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
कौन सा U-टर्न?अभी तो बातचीत चल रही थी
— Arvind Kejriwal (@ArvindKejriwal) April 15, 2019
आपका ट्वीट दिखाता है कि गठबंधन आपकी इच्छा नहीं मात्र दिखावा है।मुझे दुःख है आप बयान बाज़ी कर रहे हैं
आज देश को मोदी-शाह के ख़तरे से बचाना अहं है।दुर्भाग्य कि आप UP और अन्य राज्यों में भी मोदी विरोधी वोट बाँट कर मोदी जी की मदद कर रहे हैं https://t.co/9jnYXJFA0S
ಆಪ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಮೋದಿ-ಷಾ ಸೋಲಿಸಲು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಕೇಜ್ರಿವಾಲ್ ಹೇಳಿದ್ದರು.
ಆದರೆ ಸೋಮವಾರ ಸಂಜೆ ಟ್ವೀಟ್ ಮಾಡಿರುವ ರಾಹುಲ್, ದೆಹಲಿಯಲ್ಲಿ 4 ಸೀಟನ್ನು ಆಪ್ಗೆ ಬಿಟ್ಟುಕೊಡಲು ಕಾಂಗ್ರೆಸ್ ಸಿದ್ಧವಾಗಿತ್ತು ಆದರೆ ಕೇಜ್ರಿವಾಲ್ ಯೂ-ಟರ್ನ್ ಹೊಡೆದಿದ್ದಾರೆ. ಈಗಲೂ ಮಾತುಕತೆಗೆ ಕಾಂಗ್ರೆಸ್ ಬಾಗಿಲು ತೆರೆದಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸಮುಯ ಮೀರುತ್ತಿದೆ. ಇದಕ್ಕೆ ಮರು ಟ್ವೀಟ್ ಮಾಡಿರುವ ಕೇಜ್ರಿವಾಲ್ ಮಹಾಮೈತ್ರಿ ಬಗ್ಗೆ ಕಾಂಗ್ರೆಸ್ಗೆ ಆಸಕ್ತಿ ಇಲ್ಲ ಎನ್ನುವುದು ಈ ಟ್ವೀಟ್ನಿಂದ ತಿಳಿಯುತ್ತದೆ ಸುಖಾಸುಮ್ಮನೆ ಹೇಳಿಕೆ ನೀಡಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ.