ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಜೊತೆ ನೇರ ಫೈಟ್ ಇರೋ ಜಾಗದಲ್ಲಿ ಅಣ್ಣತಂಗಿ ಇಬ್ಬರೂ ಇಲ್ಲ: ಕೇಜ್ರಿವಾಲ್ ಲೇವಡಿ

|
Google Oneindia Kannada News

ನವದೆಹಲಿ, ಮೇ 8: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕನಸು ಭಗ್ನವಾದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ವಿರುದ್ದ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಪ್ರಿಯಾಂಕಾ ಸುಮ್ಮನೇ ತಮ್ಮ ಸಮಯವನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಪ್ರಿಯಾಂಕಾ ಯಾಕೆ ಪ್ರಚಾರಕ್ಕೆ ಹೋಗಲಿಲ್ಲ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ಪೊಲೀಸ್ ವರದಿ: ಕೇಜ್ರಿವಾಲ್ ಕಪಾಳಮೋಕ್ಷದ ಹಿಂದೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತನದ್ದೇ ಕಿತಾಪತಿ ಪೊಲೀಸ್ ವರದಿ: ಕೇಜ್ರಿವಾಲ್ ಕಪಾಳಮೋಕ್ಷದ ಹಿಂದೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತನದ್ದೇ ಕಿತಾಪತಿ

ಪಕ್ಷದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಕೇಜ್ರಿವಾಲ್, ಉತ್ತರಪ್ರದೇಶದಲ್ಲಿ, ಪ್ರಿಯಾಂಕಾ ಎಸ್ಪಿ - ಬಿಎಸ್ಪಿ ವಿರುದ್ದ ಪ್ರಚಾರವನ್ನು ನಡೆಸುತ್ತಿದ್ದಾರೆ. ಇನ್ನು ದೆಹಲಿಯಲ್ಲಿ ನಮ್ಮ ಪಕ್ಷದ ವಿರುದ್ದ ಪ್ರಚಾರ ನಡೆಸುತ್ತಿದ್ದಾರೆಂದು ಕೇಜ್ರಿವಾಲ್ ಹೇಳಿದ್ದಾರೆ.

Rahul and Priyanka not going for campaign where BJP is the straight opponent: Arvind Kejriwal

ಅಣ್ಣತಂಗಿ ಇಬ್ಬರೂ ಎಲ್ಲಿ ಬಿಜೆಪಿ ವಿರುದ್ದ ಕಾಂಗ್ರೆಸ್ಸಿಗೆ ನೇರ ಸ್ಪರ್ಧೆಯಿದೆಯೋ ಅಲ್ಲಿ ಪ್ರಚಾರಕ್ಕೆ ಹೋಗುತ್ತಿಲ್ಲ ಎಂದಿರುವ ಕೇಜ್ರಿವಾಲ್, ಪ್ರಿಯಾಂಕಾ ಸುಮ್ಮನೆ ಟೈಮ್ ವೇಸ್ಟ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸೋಲಿಸಲು ಆಪ್‌ನೊಂದಿಗೆ ಮೈತ್ರಿ ಬಹುತೇಕ ಫೈನಲ್ ಆಗಿತ್ತು, ಆದರೆ ಅರವಿಂದ್ ಕೇಜ್ರಿವಾಲ್ ಯುಟರ್ನ್ ಹೊಡೆದಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕೇಜ್ರಿವಾಲ್, ಮಹಾಮೈತ್ರಿ ಎನ್ನುವುದು ರಾಹುಲ್‌ ಗಾಂಧಿಗೆ ಕೇವಲ ಪ್ರದರ್ಶನಕ್ಕೆ, ಆದರೆ ನೈಜವಾಗಿ ದೇಶದೆಲ್ಲೆಡೆ ಬಿಜೆಪಿಗೆ ಕಾಂಗ್ರೆಸ್ ಸಹಾಯ ಮಾಡುತ್ತಿದೆ ಎಂದು ತಿರುಗೇಟು ನೀಡಿದ್ದರು.

English summary
AICC President Rahul Gandhi and Priyanka not going for campaign where BJP is the straight opponent: Delhi CM Arvind Kejriwal
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X