ಇಡಿ ವಿಚಾರಣೆಗೆ ರಾಹುಲ್, ಪ್ರಿಯಾಂಕಾ: ಕಾಂಗ್ರೆಸ್ ಪ್ರತಿಭಟನೆ
ನವದೆಹಲಿ, ಜೂ. 13: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ರಾಹುಲ್ ಗಾಂಧಿ ಸೋಮವಾರ ಹಾಜರಾದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಡಿ ಕಚೇರಿಗೆ ರಾಹುಲ್ ಗಾಂಧಿ ಅವರೊಂದಿಗೆ ಬಂದರು. ಈ ಹಿನ್ನಲೆಯಲ್ಲಿ ಇಡಿ ಕಚೇರಿ ಬಳಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದಿಂದ ರಾಹುಲ್ ಗಾಂಧಿಯವರಿಗೆ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನೆಲೆ ಅವರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು.
ರಾಹುಲ್ ಅವರ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ದಿಗ್ವಿಜಯ ಸಿಂಗ್, ಪಿ ಚಿದಂಬರಂ, ಜೈರಾಮ್ ರಮೇಶ್, ಸಚಿನ್ ಪೈಲಟ್, ಮುಕುಲ್ ವಾಸ್ನಿಕ್, ಗೌರವ್ ಗೊಗೊಯ್ ಮತ್ತು ರಾಜೀವ್ ಶುಕ್ಲಾ ಬಂದು ಸೇರಿದ್ದಾರೆ. ಈ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ರಾಹುಲ್ ವಿಚಾರಣೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿ ಮೆರವಣಿಗೆ, ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರು. ಆದರೂ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಾರಿ ನಿರ್ದೇಶನಾಲಯ ದುರ್ಬಳಕೆ
ರಾಹುಲ್ ವಿಚಾರಣೆ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ವಿವಿಧೆಡೆ ಕಾಂಗ್ರೆಸ್ ಪ್ರತಿಭಟನೆಗೆ ತಯಾರಿ ನಡೆಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಜಾರಿ ನಿರ್ದೇಶನಾಲಯ ಬಳಸಿಕೊಂಡು ಅಭಿವ್ಯಕ್ತಿಯನ್ನು ಹತ್ತಿಕ್ಕಿ ಸೇಡಿನ ರಾಜಕೀಯ ಮಾಡುತ್ತಿದೆ. ರಾಹುಲ್ ಹಾಗೂ ಪ್ರಿಯಾಂಕ ವಿರುದ್ಧ ಆರೋಪಗಳು ಸುಳ್ಳು ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೂನ್ 23ಕ್ಕೆ ವಿಚಾರಣೆಗೆ ಸೋನಿಯಾ ಗಾಂಧಿ
ಇದೇ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಕೇಂದ್ರ ಸಂಸ್ಥೆ ಸಮನ್ಸ್ ನೀಡಿದೆ. ಅವರು ಕೋವಿಡ್ ಪಾಸಿಟಿವ್ ಆದ ಕಾರಣ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಸಮಯವನ್ನು ಕೋರಿದರು. ಸದ್ಯ ಅವರಿಗೆ ಇಡಿ ಜೂನ್ 23ಕ್ಕೆ ಹೊಸ ಸಮನ್ಸ್ ನೀಡಿದೆ. ಭಾನುವಾರ ಕೋವಿಡ್ ಕಾರಣದಿಂದ ಸೋನಿಯಾ ಗಾಂಧಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೋನಿಯಾ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ನಮ್ಮನ್ನು ಹಿಮ್ಮೆಟ್ಟಿಸಲು ಯಾರಿಂದಲೂ ಸಾಧ್ಯವಿಲ್ಲ
ಈ ಹಿನ್ನೆಲೆಯಲ್ಲಿ ಮಾತನಾಡಿದ ಕಾಂಗ್ರೆಸ್ನ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ್ ಅವರು ಕೇಂದ್ರ ಸರ್ಕಾರವು ನಮಗೆ ಎಚ್ಟು ಹೆದರಿದೆ ಎಂದು ಸಾಬೀತಾಗಿದೆ. ಇದೊಂದು ಹೇಡಿ ಸರ್ಕಾರವಾಗಿದೆ. ನಮ್ಮನ್ನು ಹಿಮ್ಮೆಟ್ಟಿಸಲು ಯಾರಿಂದಲೂ ಸಾಧ್ಯವಿಲ್ಲ, ಆಂಗ್ಲರು ಅಥವಾ ಈಗಿನ ಹೊಸ ದಬ್ಬಾಳಿಕೆ ಆಡಳಿತಗಾರರಿಗೆ ಸಾಧ್ಯವಿಲ್ಲ. ನಾವು ಇಡಿ ಕಚೇರಿಯವರೆಗೆ ಮೆರವಣಿಗೆ ಮಾಡುತ್ತೇವೆ. ನಾವು ಗಾಂಧಿ ಮಾರ್ಗವನ್ನು ಆರಿಸುತ್ತೇವೆ, ನಾವು ಬಡವರ ಹಕ್ಕುಗಳಿಗಾಗಿ ಹೋರಾಡುತ್ತೇವೆ. 136 ವರ್ಷಗಳ ಕಾಲ ಕಾಂಗ್ರೆಸ್ ಸಾಮಾನ್ಯ ಜನರ ಧ್ವನಿಯಾಗಿದೆ ಎಂದು ಅವರು ಹೇಳಿದರು.
|
ಎಷ್ಟು ಗಂಟೆ ನಡೆಯಲಿದೆ ವಿಚಾರಣೆ
ರಾಹುಲ್ ಗಾಂಧಿ ಅವರ ವಿಚಾರಣೆ ಸುಮಾರು ಐದಾರು ಗಂಟೆ ನಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿ ಬಂದಿದೆ. ಇದಕ್ಕೂ ಮುನ್ನ ಕಾರ್ಯಕರ್ತರು ಜಿಂದಾಬಾದ್ ಘೋಷಣೆಯೊಂದಿಗೆ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಕಚೇರಿ ತನಕ ಕರೆದುಕೊಂಡು ಬಂದರು. ಸುಮಾರು 11.30 ಕ್ಕೆ ವಿಚಾರಣೆ ಆರಂಭವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Recommended Video
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications