ಡಾವೋಸ್ ನಲ್ಲಿ ಮೆಚ್ಚುಗೆ ಗಳಿಸಿದ ಮೋದಿ ಮೇಲೆ ರಾಹುಲ್ ಟೀಕಾಸ್ತ್ರ
ನವದೆಹಲಿ, ಜನವರಿ 23 : ಸ್ವಿಟ್ಜರ್ಲೆಂಡ್ ನ ಡಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕಾನಾಮಿಕ್ ಫೋರಂನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಐತಿಹಾಸಿಕ ಭಾಷಣಕ್ಕೆ ಎಲ್ಲೆಡೆಯಿಂದ ಮೆಚ್ಚುಗೆಯ ಮಾತುಗಳು ಬರುತ್ತಿರುವ ಹೊತ್ತಿನಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಒಂದು ಕಾಮೆಂಟ್ ಟೀಕೆಗೆ ಗುರಿಯಾಗಿದೆ.
"ನಿಮಗೆ ಉತ್ತಮ ಆರೋಗ್ಯಕರ ವಾತಾವರಣ, ಶಾಂತಿ, ನೆಮ್ಮದಿ, ಸಂಪತ್ತು, ಸಮೃದ್ಧಿ ಬೇಕಿದ್ದರೆ ಭಾರತಕ್ಕೆ ಬನ್ನಿ. ನಾವು ನಿಮಗೆ ಕೆಂಪು ಹಾಸು ಹಾಸುತ್ತೇವೆ" ಎಂದು ನರೇಂದ್ರ ಮೋದಿಯವರು ವಿಶ್ವ ನಾಯಕರಿಗೆ ಕರೆ ನೀಡಿರುವ ಸಂದರ್ಭದಲ್ಲಿ, ಭಾರತದ ಸಂಪತ್ತನ್ನು ಒಂದಿಷ್ಟು ಶ್ರೀಮಂತರು ಲೂಟಿ ಹೊಡೆಯುತ್ತಿದ್ದಾರೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ರಾಹುಲ್ ಹೇಳಿರುವುದೇನೆಂದರೆ, "ಆತ್ಮೀಯ ಪಿಎಂ, ಸ್ವಿಟ್ಜರ್ಲೆಂಡ್ ಗೆ ಸ್ವಾಗತ. ಇಡೀ ದೇಶದ ಶೇ.73ರಷ್ಟು ಸಂಪತ್ತು ಶೇ.1ರಷ್ಟು ಶ್ರೀಮಂತರ ಪಾಲು ಏಕೆ ಆಗುತ್ತಿದೆ ಎಂದು ಡಾವೋಸ್ ಗೆ ಹೇಳಿ" ಎಂದು ವ್ಯಂಗ್ಯವಾಡಿದ್ದಾರೆ. ಭಾರತದಲ್ಲಿ ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚಾಗುತ್ತಿದೆ ಎಂದು ಆಕ್ಸ್ ಫಾಮ್ ನಡೆಸಿರುವ ಸಮೀಕ್ಷೆಯ ವರದಿಯನ್ನು ಅವರು ಲಗತ್ತಿಸಿದ್ದಾರೆ.

ವರ್ಲ್ಡ್ ಎಕಾನಾಮಿಕ್ ಫೋರಂನಲ್ಲಿ ಮಾಡಿದ ಅದ್ಭುತ ಭಾಷಣಕ್ಕಾಗಿ ಮೆಚ್ಚುಗೆಗೆ ಪಾತ್ರರಾದ ನರೇಂದ್ರ ಮೋದಿಯವರು ಭಾರತದಲ್ಲಿನ ಆರ್ಥಿಕ ಅಸಮಾನತೆ ಬಗ್ಗೆಯೂ ಹೇಳಿ ಎಂದು ರಾಹುಲ್ ಗಾಂಧಿಯವರು ಸಲಹೆ ನೀಡಿದ್ದಾರೆ.
Dear PM,
— Office of RG (@OfficeOfRG) January 23, 2018
Welcome to Switzerland! Please tell DAVOS why 1% of India’s population gets 73% of its wealth? I’m attaching a report for your ready reference. https://t.co/lLSNOig5pE
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಅವರು, ಶ್... ರಾಹುಲ್ ಜಿ, ಏಕೆ ಮೋದಿಯವರನ್ನು ಡಿಸ್ಟರ್ಬ್ ಮಾಡುತ್ತೀರಿ, ಅವರು ಭಾರತಕ್ಕೆ ಬಂಡವಾಳ ತರಲು ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ನಿಮ್ಮ ಪ್ರಶ್ನೆಗೆ ನಾನು ಉತ್ತರ ನೀಡುತ್ತೇನೆ. ಸ್ವಾತಂತ್ರ್ಯ ಬಂದಂದಿನಿಂದ ನಿಮ್ಮ ಪೂರ್ವಜರು ಮಾಡಿರುವ ದುರಾಡಳಿತದಿಂದಾಗಿ ಶೇ.73ರಷ್ಟು ಸಂಪತ್ತು ಶೇ.1ರಷ್ಟು ಜನರ ಪಾಲಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ವರ್ಲ್ಡ್ ಎಕಾನಾಮಿಕ್ ಫೋರಂನಲ್ಲಿ ಭಾಷಣ ಮಾಡಿರುವ ಮೊದಲ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು, ಜಾಗತಿಕ ತಾಪಮಾನ, ಭಯೋತ್ಪಾದನೆ ಸೇರಿದಂತೆ ವಿಶ್ವ ಇಂದು ಹಲವಾರು ಬಗೆಯ ಸವಾಲುಗಳನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications