ಇನ್ನು ಮುಂದೆ ರೈಲಿನಲ್ಲೂ ಗೋಲ್ಡ್ ಕ್ಲಾಸ್ ಪ್ರಯಾಣ ಸಾಧ್ಯ
Recommended Video

ನವದೆಹಲಿ, ನವೆಂಬರ್ 06 : ರೈಲ್ವೆ ಇಲಾಖೆಯ ಮೊತ್ತ ಮೊದಲ ಗೋಲ್ಡ್ ಕ್ಲಾಸ್ ವಿಭಾಗವನ್ನು ನವೆಂಬರ್ 6ರ ಸೋಮವಾರ ದೆಹಲಿಯಲ್ಲಿ ಲೋಕಾರ್ಪಣೆ ಮಾಡಲಾಗುತ್ತಿದೆ. ಈ ಮುಂಚೆ ಎ.ಸಿ 3 ಟೈರ್ ರೈಲ್ವೆಯ ಉನ್ನತ ಪ್ರಯಾಣ ಸೇವೆಯಾಗಿತ್ತು.
ದೆಹಲಿ- ಕತ್ಗೋದಾಮ್ ನಡುವಿನ ಶತಾಬ್ಧಿ ಎಕ್ಸ್ಪ್ರೆಸ್ ರೈಲು ಗೋಲ್ಡ್ ಕ್ಲಾಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಮೊದಲ ಭಾರತೀಯ ರೈಲು ಎಂಬ ಹಿರಿಮೆ ಪಡೆದುಕೊಂಡಿದೆ.

ಗೋಲ್ಡ್ ಕ್ಲಾಸ್ ಪ್ರಯಾಣಿಕರಿಗೆ ಮನರಂಜನೆ, ಸುಗ್ರಾಸ ಭೊಜನ, ಅತ್ಯಾಧುನಿಕ ಒಳಾಂಗಣ ವಿನ್ಯಾಸ, ಸುಖಾಸನ ವ್ಯವಸ್ಥೆ, ಎ.ಸಿ, ಸ್ವಯಂಚಾಲಿತ ಡೋರ್ ವ್ಯವಸ್ಥೆ ಕಲ್ಪಿಸಲಾಗಿದೆ. ಶೌಚಾಲಯಗಳಿಗೂ ಆಧುನಿಕತೆಯ ಸ್ಪರ್ಷ ನೀಡಿದ್ದು, ಸ್ವಯಂ ಚಾಲಿತ ಫ್ಲಷ್ ವ್ಯವಸ್ಥೆ, ದುರ್ಗಂದ ನಿವಾರಕ, ನೈರ್ಮಲ್ಯ ಕಾಪಾಡಲು ವಿಶೇಷ ಆಟೋಮ್ಯಾಟಿಕ್ ವ್ಯವಸ್ಥೆ ಬಳಸಲಾಗಿದೆ.
ಗೋಲ್ಡ್ ಕ್ಲಾಸ್ ನಲ್ಲಿ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಹಾಗೂ ಸಿ.ಆರ್.ಎಫ್ ಜವಾನರನ್ನೂ ನೇಮಿಸಲಾಗಿದೆ.
ಭಾರತದ ರೈಲುಗಳ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾರ್ನ್ (SWARN) ಪ್ರಾಜೆಕ್ಟ್ ನ ಅಡಿಯಲ್ಲಿ ಇದನ್ನು ನಿರ್ಮಾಣ ಮಾಡಲಾಗಿದ್ದು, ಮುಂದೆ ಭಾರತದ ಇನ್ನಷ್ಟು ಶತಾಬ್ದಿ, ರಾಜಧಾನಿ ರೈಲುಗಳ ಗುಣಮಟ್ಟ ಸುಧಾರಿಸುವ ಯೋಜನೆ ಹಾಕಿಕೊಳ್ಳಲಾಗಿದೆ. 30 ರೈಲುಗಳ ಗುಣಮಟ್ಟ ಸುಧಾರಣೆಗೆಂದು ಸ್ವಾರ್ನ್ ಗೆ 25 ಕೋಟಿ ಮಂಜೂರು ಮಾಡಲಾಗಿದೆ.
ಸ್ವಾರ್ನ್ ಯೋಜನೆಯಡಿ ಬರುವ 30 ರೈಲುಗಳ ಸಮಯಪಾಲನೆಯ ಬಗ್ಗೆಯೂ ಗಮನಹರಿಸಲಾಗಿದ್ದು, ರೈಲುಗಳು ಸಮಯಕ್ಕೆ ಸರಿಯಾಗಿ ನಿಗದಿತ ನಿಲ್ದಾಣಗಳನ್ನು ತಲುಪಲು ಆಧುನಿಕ ತಂತ್ರಜ್ಞಾನ ಸಹಾಯ ಪಡೆಯುವ ಜೊತೆಗೆ ರೈಲುಗಳ ವೇಗಮಿತಿ ಹೆಚ್ಚಿಸುವತ್ತಲೂ ಗಮನ ಹರಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications