ಭಾರತೀಯ ರೈಲ್ವೆಯಿಂದ ಸದ್ಯದಲ್ಲೇ ಹೋಂ ಡಿಲಿವರಿ ಸೇವೆ
ನವದೆಹಲಿ, ಆಗಸ್ಟ್ 21: ಭಾರತೀಯ ರೈಲ್ವೆ ದೇಶಾದ್ಯಂತ ಸರಕುಗಳನ್ನು ಮನೆ ಬಾಗಿಲಿಗೆ ತಲುಪಿಸಲು ಇಂಡಿಯಾ ಪೋಸ್ಟ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ. ನಿಮ್ಮ ಯಾವುದೇ ಸರಕುಗಳನ್ನು ಮನೆ ಬಾಗಿಲಿಗೆ ತಲುಪಿಸಲು ಶೀಘ್ರದಲ್ಲಿಯೇ ಭಾರತೀಯ ಅಂಚೆ ವಿಭಾಗ ಸೇವೆಗಳನ್ನು ಬಳಸಲಿದೆ.
ಕೋವಿಡ್ -19 ಲಾಕ್ಡೌನ್ ಸಮಯದಲ್ಲಿ ನಾಗ್ಪುರದಿಂದ ಮುಂಬೈಗೆ ಎರಡು ವೆಂಟಿಲೇಟರ್ಗಳನ್ನು ಕಳುಹಿಸಲು ಮೊದಲ ಮತ್ತು ಕೊನೆಯ ಮೈಲಿ ಸಂಪರ್ಕವನ್ನು ನೀಡುವಲ್ಲಿ ಪೈಲಟ್ ಯೋಜನೆಯಲ್ಲಿ ರೈಲ್ವೆ ಈಗಾಗಲೇ ಯಶಸ್ವಿಯಾಗಿದೆ.
ಸೆಂಟ್ರಲ್ ರೈಲ್ವೆ ಮತ್ತು ಇಂಡಿಯಾ ಪೋಸ್ಟ್ನ ಜಂಟಿ ಸೇವೆಯಾದ 'ಇಂಡಿಯನ್ ಪೋಸ್ಟಲ್ ರೈಲ್ವೆ ಪಾರ್ಸೆಲ್ ಸರ್ವಿಸ್' ಅನ್ನು ಲಾಕ್ ಡೌನ್ ಸಮಯದಲ್ಲಿ ನಾಗ್ಪುರದಿಂದ ಮುಂಬೈಗೆ ಎರಡು ವೆಂಟಿಲೇಟರ್ಗಳನ್ನು ಕಳುಹಿಸಲು ಬಳಸಲಾಗಿದೆ. ಮನೆಯಿಂದ ಮನೆಗೆ ಸರಕುಗಳನ್ನು ತಲುಪಿಸಲು ಇಪ್ಪತ್ನಾಲ್ಕು ಗಂಟೆ ಬೇಕಾಯಿತು ಎಂದು ರೈಲು ವಿಭಾಗದ ಅಧ್ಯಕ್ಷ ವಿ.ಕೆ. ಯಾದವ್ ಹೇಳಿದ್ದಾರೆ

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ಇದು ಮನೆಯಿಂದ ಮನೆಗೆ ಸರಕುಗಳನ್ನು ತಲುಪಿಸುವ ಸೇವೆಯಾಗಿದೆ. ಇದಕ್ಕಾಗಿ ಮಧ್ಯ ರೈಲ್ವೆ ಪ್ರಾಯೋಗಿಕ ಯೋಜನೆಯನ್ನು ನಡೆಸಿದ್ದು ಮತ್ತು ಇದೀಗ ನಾವು ಅದನ್ನು ದೇಶಾದ್ಯಂತ ಈ ಸೇವೆ ಆರಂಭಿಸಲು ಬಯಸುತ್ತೇವೆ. ಅಂಚೆ ಸೇವೆಯ ಬೆಂಬಲದೊಂದಿಗೆ ನಾವು ಇದನ್ನು ಮಾಡಲು ಬಯಸುತ್ತೇವೆ. ಅವರು ಈ ಕೆಲಸವನ್ನು ಕಡಿಮೆ ದೂರದವರೆಗೆ ಮಾಡುತ್ತಾರೆ, ರೈಲ್ವೆ ಒಂದು ತುದಿಯಿಂದ ಇನ್ನೊಂದು ತುದಿಗೆ ದೂರದವರೆಗೆ ಇದನ್ನು ಮಾಡಬಹುದು ಎಂದಿದ್ದಾರೆ.
ಕೇಂದ್ರ ರೈಲ್ವೆ ನಿರ್ವಹಿಸುತ್ತಿರುವ ವಿಶೇಷ ಪಾರ್ಸೆಲ್ ರೈಲುಗಳನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ರೈಲ್ವೆ ಮತ್ತು ಮಹಾರಾಷ್ಟ್ರ ಅಂಚೆ ವೃತ್ತವು ಇಂಡಿಯಾ ಪೋಸ್ಟ್ ರೈಲ್ವೆ ಪಾರ್ಸೆಲ್ ಸೇವೆಯನ್ನು ನೀಡುವ ಮೂಲಕ ಒಟ್ಟಿಗೆ ಕಾರ್ಯನಿರ್ವಹಿಸಿವೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications