ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೃತಸರ ದುರಂತ: ರೈಲ್ವೆ ಹಳಿ ಬದಿ ಕಾಂಕ್ರೀಟ್ ತಡೆಗೋಡೆ ನಿರ್ಮಾಣ

|
Google Oneindia Kannada News

ನವದೆಹಲಿ, ನವೆಂಬರ್ 20: ರೈಲು ಅಪಘಾತಗಳನ್ನು ತಡೆಯಲು ಅಪಾಯಕಾರಿ ಸ್ಥಳಗಳಲ್ಲಿ ರೈಲು ಹಳಿಗಳ ಬದಿ ಕಾಂಕ್ರೀಟ್ ತಡೆಗೋಡೆಯನ್ನು ನಿರ್ಮಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಪಂಜಾಬ್‌ನ ಅಮೃತಸರದಲ್ಲಿ ದಸರಾ ವೇಳೆ ರಾವಣ ದಹನ ವೀಕ್ಷಿಸುತ್ತಿದ್ದ 60 ಮಂದಿಯ ಮೇಲೆ ರೈಲು ಹರಿದ ಘಟನೆಯ ಹಿನ್ನೆಲೆಯಲ್ಲೇ ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಪ್ಪಿಸಲು ರೈಲ್ವೆ ಇಲಾಖೆ ಈ ನಿರ್ಣಯ ಕೈಗೊಂಡಿದೆ.

ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18' ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18'

ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಸುಮಾರು 3 ಸಾವಿರ ಕಿ.ಮೀ ಉದ್ದದ ಗೋಡೆ ನಿರ್ಮಾಣ ಮಾಡುವ ಆಲೋಚನೆ ಇದ್ದು ಇದಕ್ಕೆ 2500 ಕೋಟಿ ರೂ ವೆಚ್ಚವಾಗಲಿದೆ.

Railways to build concrete walls along tracks to prevent accidents

ಜನರ ಜೀವ ಉಳಿಸಲು ಹೋಗಿ ತಾನೇ ಬಲಿಯಾದ 'ರಾವಣ' ಜನರ ಜೀವ ಉಳಿಸಲು ಹೋಗಿ ತಾನೇ ಬಲಿಯಾದ 'ರಾವಣ'

ಅಮೃತಸರ ದುರ್ಘಟನೆ ಬಳಿಕ ಗೋಡೆ ನಿರ್ಮಾಣ ನಿರ್ಧಾರವನ್ನು ರೈಲ್ವೆ ಸಚಿವ ಪೀಯುಷ್ ಗೋಯೆಲ್ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಗೋಡೆ ನಿರ್ಮಾಣದಿಂದ ಜನರು ರೈಲ್ವೆ ಹಳಿಗಳತ್ತ ಬರುವುದು ತಪ್ಪುತ್ತದೆ ಹಾಗೆಯೇ ಪ್ರಾಣಿಗಳು ರೈಲಿಗೆ ಸಿಲುಕುವ ಪ್ರಮಾಣವೂ ಕಡಿಮೆಯಾಗುತ್ತದೆ.

English summary
With brick walls failing to solve the problem of accidents, the Railways has decided to deal with the menace once and for all by building concrete walls along the tracks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X