ರಾತ್ರಿಯಿಡಿ ಗುಡುಗು ಸಹಿತ ಮಳೆ: ಕೊನೆಗೂ ತಂಪಾಯ್ತು ದೆಹಲಿಯ ಇಳೆ

ನವದೆಹಲಿ, ಜೂನ್ 16: ಬಿಸಿಲಿನ ಶಾಖದಿಂದ ಹೈರಾಣಾಗಿದ್ದ ರಾಷ್ಟ್ರ ರಾಜಧಾನಿ ಜನರಿಗೆ ವರುಣ ತಂಪೆರೆದಿದ್ದಾನೆ. ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ರಾತ್ರಿಯಿಡಿ ಭಾರೀ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಗುರುವಾರ ನಸುಕಿನವರೆಗೆ ಮಳೆ ಮತ್ತು ಗುಡುಗು ಸಹಿತ ಮಳೆ ಸುರಿದಿದೆ. ಇದರಿಂದ ಜನರಿಗೆ ಬಿಸಿಗಾಳಿಯಿಂದ ಕೊಂಚ ಮುಕ್ತಿ ಸಿಕ್ಕಂತಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಅದರ ಮುನ್ಸೂಚನೆಯಲ್ಲಿ ಬುಧವಾರ ರಾತ್ರಿ ಉತ್ತರ ದೆಹಲಿ, ವಾಯುವ್ಯ ದೆಹಲಿ, ಪಶ್ಚಿಮ ದೆಹಲಿ (ಬವಾನಾ) ನ ಕೆಲವು ಸ್ಥಳಗಳಲ್ಲಿ ಮತ್ತು ಸೋನಿಪತ್, ಖಾರ್ಖೋಡಾ (ಹರಿಯಾಣ) ಅದರ ಪಕ್ಕದ ಪ್ರದೇಶಗಳಲ್ಲಿ ಗುಡುಗು ಸಹಿತ ಲಘು ಮಳೆ ಮತ್ತು ಬಿರುಗಾಳಿ ಸಂಭವಿಸಲಿದೆ ಎಂದು ಹೇಳಿತ್ತು. ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು IMD ಹೇಳಿದೆ.

ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ 44 ರಿಂದ 47 ಡಿಗ್ರಿ ಸೆಲ್ಸಿಯಸ್ ನಡುವೆ ವ್ಯತ್ಯಾಸಗೊಳ್ಳಲಿದೆ ಎಂದು ಹೇಳಿದೆ. ಇದಕ್ಕಾಗಿ ಹವಾಮಾನ ಇಲಾಖೆಯು 'ಆರೆಂಜ್ ಅಲರ್ಟ್' ಅನ್ನು ಸಹ ನೀಡಿದೆ.

ದೆಹಲಿಗರು ಹೇಳುವುದೇನು?

ದೆಹಲಿಗರು ಹೇಳುವುದೇನು?

ಒಂದು ವಾರದ ಹಿಂದೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಳೆಗಾಲದಲ್ಲಿ ರಸ್ತೆಗಳು ಮತ್ತು ಫುಟ್‌ಪಾತ್‌ಗಳಲ್ಲಿ ಜಲಾವೃತವಾಗುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು, ಅವರು ಹೇಳಿಕೆಯಂತೆ ಯಾವುದೇ ಕ್ರಮಗಳನ್ನು ಕೈಗೊಳ್ಳಲಾಗಿಲ್ಲ ಎಂದು ದೆಹಲಿಗರು ಹೇಳಿಕೊಂಡಿದ್ದಾರೆ.

ಕಾಂಕ್ರೀಟ್ ಸಿಮೆಂಟ್ ರಸ್ತೆ ನಿರ್ಮಿಸಲು ಸೂಚನೆ

ಕಾಂಕ್ರೀಟ್ ಸಿಮೆಂಟ್ ರಸ್ತೆ ನಿರ್ಮಿಸಲು ಸೂಚನೆ

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿದ್ದ ಉನ್ನತ ಮಟ್ಟದ ಸಭೆಯಲ್ಲಿ, ಸಕ್ಸೇನಾ ಮತ್ತು ಕೇಜ್ರಿವಾಲ್ ಅವರು ಜಲಾವೃತ ಮತ್ತು ಪ್ರವಾಹಕ್ಕೆ ಒಳಗಾಗುವ ಸ್ಥಳಗಳಲ್ಲಿ ಬಿಟುಮೆನ್ ಬದಲಿಗೆ ಕಾಂಕ್ರೀಟ್ ಸಿಮೆಂಟ್ ರಸ್ತೆಗಳನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಎಲ್ಜಿ ಕಚೇರಿ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮನೆ ನೀರು ಹರಿವಿಗೆ ವ್ಯವಸ್ಥೆ

ಮನೆ ನೀರು ಹರಿವಿಗೆ ವ್ಯವಸ್ಥೆ

ಸಕ್ಸೇನಾ ಅವರು 6-8 ಇಂಚು ವ್ಯಾಸದ ಸಿಂಕ್ ಹೋಲ್‌ಗಳನ್ನು ರಚಿಸುವ ಕಾರ್ಯವನ್ನು ಏಕಕಾಲದಲ್ಲಿ ಪ್ರಾರಂಭಿಸಲು ಸೂಚಿಸಿದರು. ಅನಗತ್ಯ ರಂಧ್ರವಿರುವ ಪೈಪ್‌ಗಳನ್ನು ಮುಚ್ಚಲಾಗುತ್ತದೆ ಮತ್ತು ಮೇಲ್ಮೈ ಹರಿವನ್ನು ವೇಗಗೊಳಿಸಲಾಗುತ್ತದೆ. ಅಂತರ್ಜಲ ಮರುಪೂರಣಕ್ಕೆ ಸಹಾಯ ಮಾಡಲಾಗುತ್ತದೆ. ನೀರು ಹರಿಯುವ ಸ್ಥಳಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ ಎಂದಿದ್ದಾರೆ.

ಒಳಚರಂಡಿ ಮಾಸ್ಟರ್ ಪ್ಲಾನ್ ಅಂತಿಮಗೊಳಿಸಲು ಸೂಚನೆ

ಒಳಚರಂಡಿ ಮಾಸ್ಟರ್ ಪ್ಲಾನ್ ಅಂತಿಮಗೊಳಿಸಲು ಸೂಚನೆ

ಸಭೆಯಲ್ಲಿ ಚರಂಡಿಯ ಹೂಳು ನಾಲೆಗೆ ಸೇರದಂತೆ ಕೂಡಲೇ ಎತ್ತುವಳಿ ಮಾಡಲು ತೀರ್ಮಾನಿಸಲಾಯಿತು. ತಜ್ಞರು ಮತ್ತು ಡೊಮೇನ್-ನಿರ್ದಿಷ್ಟ ಏಜೆನ್ಸಿಗಳ ಸಹಾಯದಿಂದ ವರ್ಷಗಳಿಂದ ಬಾಕಿ ಉಳಿದಿರುವ ಒಳಚರಂಡಿ ಮಾಸ್ಟರ್ ಪ್ಲಾನ್ ಅನ್ನು ಅಂತಿಮಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಯಿತು.

Recommended Video

      HD Devegowda ಭಾರತದ ಮುಂದಿನ ಪ್ರೆಸಿಡೆಂಟ್ ಆಗ್ತಾರಾ? | *Politics | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+