ವಾಯುಪಡೆಗೆ ಯುದ್ಧ ವಿಮಾನ ಉಡುಗೊರೆ ಕೊಟ್ಟ ರಾಜೀವ್ ಚಂದ್ರಶೇಖರ್
ನವದೆಹಲಿ, ಫೆಬ್ರವರಿ 14 : 1947ರಲ್ಲಿ ಪಾಕಿಸ್ತಾನದೊಂದಿಗೆ ನಡೆದ ಕದನದಲ್ಲಿ ಜಮ್ಮು ಕಾಶ್ಮೀರವನ್ನು ಭಾರತದೊಂದಿಗೆ ಉಳಿಯುವಂತೆ ಮಾಡಿದರಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಡಿಸಿ 3 ಡಕೋಟ ಯುದ್ಧ ವಿಮಾನವನ್ನು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಭಾರತೀಯ ವಾಯುಪಡೆಗೆ ಉಡುಗೊರೆಯಾಗಿ ನೀಡಿದ್ದಾರೆ.
ದೆಹಲಿಯ ಆಕಾಶ್ ಏರ್ ಫೋರ್ಸ್ ಮೆಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಏರ್ ಚೀಫ್ ಮಾರ್ಷಲ್ ಬಿರೇಂದ್ರ ಸಿಂಗ್ ಧನೋವಾ ಅವರೊಂದಿಗೆ ಉಡುಗೊರೆ ಒಪ್ಪಂದಕ್ಕ ರಾಜೀವ್ ಚಂದ್ರಶೇಖರ್ ಸಹಿ ಹಾಕಿದರು. ರಾಜೀವ್ ಚಂದ್ರಶೇಖರ್ ಅವರ ತಂದೆ ವಾಯುದಳದಲ್ಲಿ ಏರ್ ಕಮಾಂಡರ್ ಆಗಿದ್ದ ಎಂಕೆ. ಚಂದ್ರಶೇಖರ್ ಅವರು ಖುದ್ದು ಈ ಸಂದರ್ಭದಲ್ಲಿ ಖುದ್ದು ಉಪಸ್ಥಿತರಿದ್ದರು. ಎಂಕೆ. ಅವರು ಡಕೋಟದ ಫೈಲಟ್ ಆಗಿ ಕಾರ್ಯ ನಿರ್ವಹಿಸಿದ್ದರು.
ಡಿಸಿ3 ಡಕೋಟ ವಿಮಾನ ಸಂಖ್ಯೆ ವಿಪಿ ೯೦೫ಗೆ ಪರಶುರಾಮ ಎಂಬ ಹೆಸರಿಡಲಾಗಿದೆ. ಇದೇ ವಿಮಾನ 1947 ರ ಅಕ್ಟೋಬರ್ 27 ರಂದು ಜಮ್ಮು ಕಾಶ್ಮೀರದ ಶ್ರೀನಗರಕ್ಕೆ ಒಂದು ಸಿಖ್ ರೆಜಿಮೆಂಟ್ ಅನ್ನು ಸಾಗಿಸಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜೀವ್ ಚಂದ್ರಶೇಖರ್, ಡಕೋಟ ನ್ನ ಬಾಲ್ಯದ ಒಂದು ಭಾಗವಾಗಿತ್ತು. ನ್ನ ತಂದೆ ಈ ವಿಮಾನವನ್ನು ದೇಶದೆಲ್ಲೆಡೆ ಹಾರಿಸಿದ್ದರು. ಇಂದು ಡಿಸಿ 3 ಡಕೋಟವನ್ನು ಭಾರತೀಯ ವಾಯುಸೇನೆಗೆ ಉಡುಗೊರೆಯಾಗಿ ನೀಡುವ ಮೂಲಕ ನನ್ನ ತಂದೆಯ ಕನಸು ಸಾಕಾರಗೊಳ್ಲುವಲ್ಲಿ ನಾನು ಸಹಾಯ ಮಾಡಿದಂತಾಗಿದೆ ಎಂದು ಹೇಳಿದರು.

ವಿಮಾನಕ್ಕೆ ಚಿರಂಜೀವಿ ಸೈನಿಕನಾಗರುವ ವಿಷ್ಣುವಿನ 6 ನೇ ಅವತಾರವಾದ ಪರಶುರಾಮ ಎಂದು ಹೆಸರಿಡಲಾಗಿದೆ ಎಂದು ತಿಳಿಸಿದರು. ಗುಜರಿ ಸೇರಿದ್ದ ವಿಮಾನವನ್ನು ಉಡುಗೊರೆಯಾಗಿ ನೀಡುವ ಮೂಲಕ ಡಕೋಟ ವನ್ನು ಚಲಾಯಿಸಿದ ಎಲ್ಲ ವಾಯುಸೇನೆ ಸೈನಿಕರು ಮತ್ತವರ ಕುಟುಂಬದವರಿಗೆ ಸಮರ್ಪಿಸುತ್ತೇನೆ ಎಂದು ನಿವೃತ್ತ ಏರ್ ಕಮಾಂಡರ್ ಎಂಕೆ. ಚಂದ್ರಶೇಖರ್ ಹೇಳಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications