ಪೂರ್ವ ಲಡಾಖ್ ಗಡಿ ಸಂಘರ್ಷ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರವಿಲ್ಲ: ರಾಜನಾಥ್ ಸಿಂಗ್

ನವದೆಹಲಿ, ಡಿಸೆಂಬರ್ 31: ಪೂರ್ವ ಲಡಾಖ್‌ನ ಗಡಿ ಸಂಘರ್ಷ ವಿಚಾರವಾಗಿ ಯಾವುದೇ ಏಕಪಕ್ಷೀಯ ನಿರ್ಧಾರವನ್ನು ಭಾರತ ತೆಗೆದುಕೊಳ್ಳುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಭಾರತ ಗಡಿ ವಾಸ್ತವ ರೇಖೆ(ಎಲ್ಎಸಿ)ಬಳಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ, ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಸಿಗುವ ಆಶಾವಾದ ವ್ಯಕ್ತಪಡಿಸಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್.

ಕಳೆದ ಮೇ ಆರಂಭದಿಂದ ಪೂರ್ವ ಲಡಾಕ್ ನ ಗಡಿಭಾಗದಲ್ಲಿ ಭಾರತ ಮತ್ತು ಚೀನಾ ದೇಶಗಳ ಮಿಲಿಟರಿ ಪಡೆಗಳು ನಿಯೋಜನೆಗೊಂಡಿದ್ದು ಈಗಾಗಲೇ ಹಲವು ಸುತ್ತಿನ ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆಗಳು ನಡೆದಿವೆ, ಆದರೆ ಯಾವುದೇ ಶಾಶ್ವತ ವಾಸ್ತವ ಪರಿಹಾರಕ್ಕೆ ಬರುವಲ್ಲಿ ವಿಫಲವಾಗಿವೆ.

 Rajnath Singh Says India Cannot Accept Any Unilateral Change Of LAC

ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು, ಭಾರತ ಯಾವತ್ತಿಗೂ ಶಾಂತಿಯ ಪರವಾಗಿದೆ, ಹಾಗೆಂದು ಆತ್ಮ ಗೌರವದ ವಿಷಯ ಬಂದಾಗ ಯಾವತ್ತಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಇನ್ನಷ್ಟು ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆ ಸಾಧ್ಯವಿದೆ ಎಂದು ಹೇಳಿದ್ದಾರೆ.

ಪೂರ್ವ ಲಡಾಕ್ ನಲ್ಲಿ ಶೂನ್ಯ ತಾಪಮಾನದಲ್ಲಿ ಹಲವು ಪರ್ವತ ಪ್ರದೇಶಗಳಲ್ಲಿ ಯಾವುದೇ ಕ್ಷಣದಲ್ಲಿ ಚೀನಾ ಸೇನೆ ಎದುರಾದರೆ ಯುದ್ಧ ಮಾಡಲು ಸುಮಾರು 50 ಸಾವಿರ ಭಾರತೀಯ ಸೈನಿಕರು ಹಗಲಿರುಳು ಕಾಯುತ್ತಿದ್ದಾರೆ. ಚೀನಾ ಕೂಡ ಸರಿಸುಮಾರು ಅಷ್ಟೇ ಸಂಖ್ಯೆಯಲ್ಲಿ ಸೇನಾಪಡೆ ಯೋಧರನ್ನು ನಿಯೋಜಿಸಿದೆ.

ಪೂರ್ವ ಲಡಾಕ್ ಗಡಿಯಲ್ಲಿನ ಪರಿಸ್ಥಿತಿ ಹಿಂದಿನಂತೆಯೇ ಮುಂದುವರಿದಿದೆ. ಏಕಪಕ್ಷೀಯ ಬದಲಾವಣೆಯನ್ನು ಭಾರತ ತೆಗೆದುಕೊಳ್ಳುವುದಿಲ್ಲ ಎಂದರು.

ಪೂರ್ವ ಲಡಾಕ್ ನ ಪಾಂಗೊಂಗ್ ಲೇಕ್ ಪ್ರದೇಶದಲ್ಲಿ ಎರಡೂ ದೇಶಗಳ ಮಧ್ಯೆ ಕಳೆದ ಮೇ 5ರಿಂದ ಮುಖಾಮುಖಿ ನಡೆಯುತ್ತಿದೆ. ನಂತರ ಮೇ 9ರಂದು ಉತ್ತರ ಸಿಕ್ಕಿಮ್ ನಲ್ಲಿ ಕೂಡ ಇಂತಹದ್ದೇ ಘಟನೆ ನಡೆಯಿತು. ಎರಡೂ ದೇಶಗಳ ಮಧ್ಯೆ ಈಗಾಗಲೇ 8 ಸುತ್ತಿನ ಮಾತುಕತೆ ನಡೆದಿದ್ದು ಯಾವುದೇ ಫಲ ಕಂಡುಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+