ಲೋಕಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ ಸಮಿತಿ ಹೊಣೆ ರಾಜನಾಥ್ ಹೆಗಲಿಗೆ
Recommended Video

lok sabha election 2019: ಬಿಜೆಪಿ ಪ್ರಣಾಳಿಕೆ ಸಮಿತಿ ಹೊಣೆ ರಾಜನಾಥ್ ಹೆಗಲಿಗೆ | Oneindia Kannada
ನವದೆಹಲಿ, ಜನವರಿ 07: 2019 ರ ಲೋಕಸಭಾ ಚುನಾವಣೆಗೆ ಈಗಾಗಲೇ ಬಿರುಸಿನ ತಯಾರಿ ಆರಂಭಿಸಿರುವ ಬಿಜೆಪಿ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಪ್ರಣಾಳಿಕೆ ಸಮಿತಿ ಮುಖ್ಯಸ್ಥರನ್ನಾಗಿ ನೇಮಿಸಿದೆ.
ಭಾನುವಾರ, ಲೋಕಸಭಾ ಚುನಾವಣೆಯ ತಯಾರಿಗಾಗಿ ಒಟ್ಟು 20 ಸದಸ್ಯರ ತಂಡವೊಂದನ್ನು ದೆಹಲಿಯಲ್ಲಿ ಅಮಿತ್ ಶಾ ನೇಮಿಸಿದರು.
ಸಂಕಲ್ಪ ಪತ್ರ(ಪ್ರಣಾಳಿಕೆ) ಸಮಿತಿಯ ಅಧ್ಯಕ್ಷರನ್ನಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ನೇಮಿಸಲಾಯಿತು.

ಸಮಿತಿಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ರವಿ ಶಂಕರ್ ಪ್ರಸಾದ್, ಪಿಯೂಶ್ ಗೋಯೆಲ್, ಮುಖ್ತಾರ್ ಅಬ್ಬಾಸ್ ನಖ್ವಿ, ಮತ್ತು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇದ್ದಾರೆ.
ಮಾಧ್ಯಮ ಸಮಿತಿಯ ಹೊಣೆಯನ್ನು ಕೇಂದ್ರ ಕಾನೂನು ಸಚಿವ ರವಿ ಶಂಖರ್ ಪ್ರಸಾದ್ ಹೂರಲಿದ್ದಾರೆ.












Click it and Unblock the Notifications