ಲೋಕಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ ಸಮಿತಿ ಹೊಣೆ ರಾಜನಾಥ್ ಹೆಗಲಿಗೆ
Recommended Video
ನವದೆಹಲಿ, ಜನವರಿ 07: 2019 ರ ಲೋಕಸಭಾ ಚುನಾವಣೆಗೆ ಈಗಾಗಲೇ ಬಿರುಸಿನ ತಯಾರಿ ಆರಂಭಿಸಿರುವ ಬಿಜೆಪಿ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಪ್ರಣಾಳಿಕೆ ಸಮಿತಿ ಮುಖ್ಯಸ್ಥರನ್ನಾಗಿ ನೇಮಿಸಿದೆ.
ಚುನಾವಣೆ ಫಲಿತಾಂಶವು ಮೋದಿ ಆಡಳಿತದ ಮೌಲ್ಯಮಾಪನ ಅಲ್ಲ: ರಾಜ್ ನಾಥ್ ಸಿಂಗ್
ಭಾನುವಾರ, ಲೋಕಸಭಾ ಚುನಾವಣೆಯ ತಯಾರಿಗಾಗಿ ಒಟ್ಟು 20 ಸದಸ್ಯರ ತಂಡವೊಂದನ್ನು ದೆಹಲಿಯಲ್ಲಿ ಅಮಿತ್ ಶಾ ನೇಮಿಸಿದರು.
"ಮಂದಿರ,ಗೋವು ಕಾಂಗ್ರೆಸ್ಸಿಗೆ ಚುನಾವಣೆ ಸರಕು,ಬಿಜೆಪಿಗೆ ಅವಿಭಾಜ್ಯ ಸಂಸ್ಕೃತಿ"
ಸಂಕಲ್ಪ ಪತ್ರ(ಪ್ರಣಾಳಿಕೆ) ಸಮಿತಿಯ ಅಧ್ಯಕ್ಷರನ್ನಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ನೇಮಿಸಲಾಯಿತು.
ಸಮಿತಿಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ರವಿ ಶಂಕರ್ ಪ್ರಸಾದ್, ಪಿಯೂಶ್ ಗೋಯೆಲ್, ಮುಖ್ತಾರ್ ಅಬ್ಬಾಸ್ ನಖ್ವಿ, ಮತ್ತು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇದ್ದಾರೆ.
ಮದುಮಗನೇ ಇಲ್ಲದ ಮೆರವಣಿಗೆಯಂತಾಗಿದೆ ಕಾಂಗ್ರೆಸ್ ಎಂದ ರಾಜ್ ನಾಥ್
ಮಾಧ್ಯಮ ಸಮಿತಿಯ ಹೊಣೆಯನ್ನು ಕೇಂದ್ರ ಕಾನೂನು ಸಚಿವ ರವಿ ಶಂಖರ್ ಪ್ರಸಾದ್ ಹೂರಲಿದ್ದಾರೆ.