ಬಿಜೆಪಿ ತೊರೆಯುತ್ತೇನೆಂದು ರಾಜನಾಥ್ ಸಿಂಗ್ ಹೇಳಿದ್ದು ನಿಜಾನಾ?
ನವದೆಹಲಿ, ಜೂನ್ 07: ಕೇಂದ್ರ ಸಂಪುಟ ಸಮಿತಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಡೆಗಣಿಸಿದ್ದ ಕಾರಣ ಅವರು ಪಕ್ಷ ತೊರೆಯುತ್ತೇನೆಂದು ಬೆದರಿಕೆ ಒಡ್ಡಿದ್ದರು, ಆದ್ದರಿಂದ ಅವರನ್ನು ಎಲ್ಲಾ ಸಂಪುಟ ಸಮಿತಿಗೂ ನಂತರ ಸೇರಿಸಿಕೊಳ್ಳಲಾಯಿತು ಎಂಬ ವದಂತಿಯನ್ನು ರಾಜನಾಥ್ ಸಿಂಗ್ ಅವರ ಕಚೇರಿಯ ಮೂಲಗಳು ಅಲ್ಲಗಳೆದಿವೆ.
"ಪಕ್ಷ ತೊರೆಯುವ ಮಾತನ್ನು ರಾಜನಾಥ್ ಸಿಂಗ್ ಅವರು ಆಡಿಯೇ ಇಲ್ಲ. ಈ ವದಂತಿ ಶುದ್ಧ ಸುಳ್ಳು" ಎಂದು ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ.
ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 8 ಸಂಪುಟ ಸಮಿತಿಯನ್ನು ರಚಿಸಿದ್ದು, ಈ ಎಲ್ಲಾ ಸಮಿತಿಯಲ್ಲೂ ಪ್ರಧಾನಿ ನಂತರದ ಹುದ್ದೆಯನ್ನು ಗೃಹಸಚಿವ ಅಮಿತ್ ಶಾ ಅವರೇ ಪಡೆದಿದ್ದಾರೆ.

ಕಳೆದ ಸರ್ಕಾರದ ಅವಧಿಯಲ್ಲಿ ರಾಜನಾಥ್ ಸಿಂಗ್ ಅವರು ನಿಭಾಯಿಸುತ್ತಿದ್ದ ಹುದ್ದೆಗಳನ್ನು ಇದೀಗ ಅಮಿತ್ ಶಾ ಅವರೇ ಪಡೆದಿರುವುದು ಲಕ್ನೋ ಸಂಸದ ರಾಜನಾಥ್ ಸಿಂಗ್ ಅವರಿಗೆ ಮುಜುಗರವನ್ನುಂಟು ಮಾಡಿತ್ತು ಎಂಬ ವದಂತಿ ಹಬ್ಬಿತ್ತು. ಸಂಪುಟ ನೇಮಕಾತಿ ಸಮಿತಿ, ಅಕಮಡೇಷನ್ ಸಮಿತಿ, ಆರ್ಥಿಕ ವ್ಯವಹಾರಗಳ ಸಮಿತಿ, ಸಂಸದೀಯ ವ್ಯವಹಾರಗಳ ಸಮಿತಿ, ರಾಜಕೀಯ ವ್ಯವಹಾರಗಳ ಸಮಿತಿ, ಭದ್ರತಾ ಸಮಿತಿ, ಹೂಡಿಕೆ ಹಾಗೂ ಅಭಿವೃದ್ಧಿ ಸಮಿತಿ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಸಮಿತಿಗಳಲ್ಲಿ ಕೇವಲ ಎರಡು ಸಮಿತಿಗಳಲ್ಲಿ ಮಾತ್ರ ರಾಜನಾಥ್ ಸಿಂಗ್ ಅವರ ಹೆಸರು ಕೇಳಿಬಂದಿತ್ತು. ಇದೀಗ ಎಲ್ಲಾ ಸಮಿತಿಗಳಲ್ಲೂ ಅವರ ಹೆಸರನ್ನು ಸೇರಿಸಲು ಪ್ರಧಾನಿ ಮುಂದಾಗಿರುವುದು, ವಂದಂತಿಗೆ ಮತ್ತಷ್ಟು ಪುಷ್ಠಿ ನೀಡಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications