ವಿವಾದಿತ ಅಧಿಕಾರಿ ರಾಕೇಶ್ ಆಸ್ತಾನಾಗೆ ಹೆಚ್ಚುವರಿ ಅಧಿಕಾರ
ನವದೆಹಲಿ, ಆಗಸ್ಟ್ 1: ಸಿಬಿಐನಲ್ಲಿ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ಅವರೊಂದಿಗೆ ಜಗಳವಾಡುವ ಮೂಲಕ ವಿವಾದಕ್ಕೀಡಾದ ಬಳಿಕ ನಾಗರಿಕ ವಿಮಾನಯಾನ ಭದ್ರತಾ ಇಲಾಖೆಗೆ ವರ್ಗಾವಣೆಯಾಗಿದ್ದ ತನಿಖಾ ಸಂಸ್ಥೆಯ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಾ ಅವರಿಗೆ ಮಾದಕ ವಸ್ತು ನಿಯಂತ್ರಣ ಬ್ಯೂರೋದ ಹೆಚ್ಚುವರಿ ಅಧಿಕಾರ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ನೇಮಕಾತಿ ಸಮಿತಿಯು ಆಸ್ತಾನಾ ಅವರನ್ನು ಮಾದಕವಸ್ತು ನಿಯಂತ್ರಣ ಬ್ಯೂರೋದ (ಎನ್ಸಿಬಿ) ಮಹಾ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ನೇಮಕ ಮಾಡಿದೆ.
1984ರ ಗುಜರಾತ್ ಕೇಡರ್ನ ಐಪಿಎಸ್ ಅಧಿಕಾರಿ ಆಸ್ತಾನಾ ಅವರು ಹೊಸ ಅಧಿಕಾರಿ ನೇಮಕವಾಗುವವರೆಗೆ ಅಥವಾ ಮುಂದಿನ ಆರು ತಿಂಗಳವರೆಗೆ ಈ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಎನ್ಸಿಬಿಯ ಮುಖ್ಯಸ್ಥರಾಗಿದ್ದ ಅಭಯ್ ಅವರನ್ನು ಜುಲೈ 4ರಂದು ಹೈದರಾಬಾದ್ ಮೂಲದ ಸರ್ದಾರ್ ವಲ್ಲಭಭಾಯ್ ಪಟೇಲ್ ನ್ಯಾಷನಲ್ ಪೊಲೀಸ್ ಅಕಾಡೆಮಿಯ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು. ಆಗಿನಿಂದ ಈ ಹುದ್ದೆ ಖಾಲಿ ಉಳಿದಿತ್ತು.
ಸಿಬಿಐನ ಎರಡನೆ ಉನ್ನತ ಅಧಿಕಾರಿಯಾಗಿದ್ದ ಆಸ್ತಾನಾ ಮತ್ತು ಉನ್ನತ ಅಧಿಕಾರಿ ಅಲೋಕ್ ವರ್ಮಾ ಅವರ ನಡುವೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಭಾರಿ ಜಗಳ ನಡೆದಿತ್ತು. ಇದು ರಾಷ್ಟ್ರಮಟ್ಟದಲ್ಲಿ ಸಿಬಿಐನ ಗೌರವವನ್ನು ಮಣ್ಣುಪಾಲು ಮಾಡಿತ್ತು. ಬಳಿಕ ಆಸ್ತಾನಾ ಅವರನ್ನು ಸಿಎಎಸ್ನ ಮಹಾ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿತ್ತು. ಅಲೋಕ್ ವರ್ಮಾ ಅವರನ್ನು ಅಗ್ನಿಶಾಮಕ ದಳ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. ಆದರೆ, ಅವರು ಅದಕ್ಕೆ ಒಪ್ಪಿಕೊಳ್ಳದೆ ರಾಜೀನಾಮೆ ನೀಡಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications