ದೇಶದಾದ್ಯಂತ ಆಚರಣೆಗೊಂಡ ಸಂಭ್ರಮದ ರಕ್ಷಾ ಬಂಧನ
ನವದೆಹಲಿ, ಆಗಸ್ಟ್ 8: ಭ್ರಾತೃತ್ವದ ಸಂದೇಶ ಸಾರುವ ರಕ್ಷಾಬಂಧನ ಹಬ್ಬವನ್ನು ಭಾರತದಾದ್ಯಂತ ಸಂಭ್ರಮದಿಂದ ಆಚರಸಿಯಾಗಿದೆ. ನಿನ್ನೆ(ಆಗಸ್ಟ್ 7), ಅಂದರೆ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲ್ಪಡುವ ಈ ಹಬ್ಬ ಭಾರತೀಯ ಸಂಸ್ಕೃತಿಯ ಶ್ರೀಮಂತ ಆಚರಣೆಗಳಲ್ಲೊಂದು.
ಸಹೋದರ-ಸಹೋದರಿಯರ ನಡುವಿನ ಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ, ದುಷ್ಟ ಶಕ್ತಿಗಳಿಂದ ತಂಗಿ-ಅಕ್ಕನನ್ನು ರಕ್ಷಿಸಲು ಸಹೋದರ ಅಭಯ ನೀಡುವ ಈ ವಿಭಿನ್ನ ಆಚರಣೆಯ ದಿನ ಹೆಂಗೆಳೆಯರೆಲ್ಲ ತಮ್ಮ ಸಹೋದರರಿಗೆ ರಕ್ಷೆ ಕಟ್ಟುವ ಮೂಲಕ ಅವರ ಬಗೆಗಿನ ತಮ್ಮ ಪ್ರೀತಿ-ಅಕ್ಕರೆಯನ್ನು ವ್ಯಕ್ತಪಡಿಸುತ್ತಾರೆ.
ಭಾರತದೊಂದಿಗೆ ನೇಪಾಳದ ಕೆಲವೆಡೆಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ. ದೇಶಕಾಯುವ ಸೈನಿಕರಿಗೆ ರಾಖಿ ಕಟ್ಟಿ ನೀವೇ ನಮ್ಮ ನಿಜವಾದ ರಕ್ಷಕರು ಎಂದ ಲಲನೆಯರು, ಮರಕ್ಕೆ ರಕ್ಷೆ ಕಟ್ಟುವ ಮೂಲಕ ವೃಕ್ಷೋರಕ್ಷತಿ ರಕ್ಷಿತಃ ಎಂದ ಜಾರ್ಖಂಡ್ ನ ಬುಡಕಟ್ಟು ಮಹಿಳೆಯರು, ಚೀನೀ ರಾಖಿಗಳನ್ನು ನಿಷೇಧಿಸಿ, ತಾವೇ ರಾಖಿ ತಯಾರಿಸಿದ ಕಾಶ್ಮೀರದ ಹುಡುಗಿಯರು ಹೀಗೇ ದೇಶದ ವಿವಿಧೆಡೆಗಳಲ್ಲಿ ರಾಖಿ ಹಬ್ಬವನ್ನು ಒಬ್ಬೊಬ್ಬರು ಒಂದೊಂದು ರೀತಿ ಆಚರಿಸಿದರು.
ಚಿಕ್ಕ ಚಿಕ್ಕ ಮಕ್ಕಳು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಟ್ಟಿ ಖುಷಿಪಟ್ಟರೆ, ಬ್ರಹ್ಮಕುಮಾರಿಯರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಖಿ ಕಟ್ಟಿ ಶುಭಹಾರೈಸಿದರು. ದೇಶದ ತುಂಬ ಭ್ರಾತೃತ್ವದ ಸಂಭ್ರಮ ಹುಟ್ಟಿಸಿದ ರಕ್ಷಾಬಂಧನ ಝಲಕು ಇಲ್ಲಿದೆ. (ಚಿತ್ರಕೃಪೆ: ಪಿಟಿಐ)

ಚಿಣ್ಣರಿಂದ ರಾಖಿ ಕಟ್ಟಿಸಿಕೊಂಡ ಪ್ರಧಾನಿ ಮೋದಿ
ನವದೆಹಲಿಯಲ್ಲಿ ಆಗಸ್ಟ್ 7 ರಂದು ಮೋದಿಯವರಿಗೆ ಪುಟ್ಟ ಪುಟ್ಟ ಮಕ್ಕಳು ರಾಖಿ ಕಟ್ಟಿ ಸಂಭ್ರಮಿಸಿದರು. ಪ್ರಧಾನಿ ಮೋದಿ ಸಹ ತಮ್ಮ ದಿನನಿತ್ಯದ ಬ್ಯುಸಿ ಶೆಡ್ಯೂಲ್ ನಡುವಲ್ಲೂ ಈ ಚಿಣ್ಣರೊಂದಿಗೆ ರಾಖಿ ಹಬ್ಬದ ಸಂಭ್ರಮ ಅನುಭವಿಸಿದರು. ಭಾರತದ ಭವಿಷ್ಯದ ನಾಗರಿಕರಿಗೆ ಶುಭಹಾರೈಸಿ, ಆಶೀರ್ವದಿಸಿದರು.

ಬ್ರಹ್ಮಕುಮಾರಿಯರಿಂದ ರಕ್ಷೆ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ನವದೆಹಲಿಯಲ್ಲಿ ಬ್ರಹ್ಮಕುಮಾರಿಯರು ತಿಲಕ ಇಟ್ಟು, ರಕ್ಷೆ ಕಟ್ಟುವ ಮೂಲಕ ರಕ್ಷಾಬಂಧನದ ಶುಭಕೋರಿದರು.

ರಕ್ಷಾಬಂಧನ ಆಚರಿಸಿದ ರಾಜೆ
ಜೈಪುರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ರಾಖಿ ಕಟ್ಟುವ ಮೂಲಕ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ರಕ್ಷಾಬಂಧನ ಆಚರಿಸಿದರು.

ಕೇಜ್ರಿವಾಲ್ ಗೂ ರಕ್ಷಾಬಂಧನದ ಸಂಭ್ರಮ
ದೆಹಲಿಯಲ್ಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ರಾಖಿ ಕಟ್ಟಿ, ರಕ್ಷಾಬಂಧನ ಆಚರಿಸಿದ ಶಾಲಾಮಕ್ಕಳು.

ಟಿಎಂಸಿ ರಾಖಿ!
ಪಶ್ಚಿಮ ಬಂಗಾಳದಲ್ಲಿ ವ್ಯಕ್ತಿಯೊಬ್ಬ ತೃಣಮೂಲ ಕಾಂಗ್ರೆಸ್ ಚಿಹ್ನೆ ಮತ್ತು ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭಾವಚಿತ್ರವುಳ್ಳ ರಾಖಿ ಕಟ್ಟಿಕೊಂಡು ಸಂಭ್ರಮಿಸಿದ್ದು ಹೀಗೆ

ರಕ್ಷಕರಿಗೆ ರಕ್ಷಕರಿಂದ 'ರಕ್ಷೆ'!
ಗಡಿ ಭದ್ರತಾ ಪಡೆ(ಬಿಎಸ್ ಎಫ್)ಯ ಮಹಿಳಾ ಸಿಬ್ಬಂದಿಗಳು, ತಮ್ಮ ಪುರುಷ ಸಹೋದ್ಯೋಗಿಗಳಿಗೆ ತಿಲಕ ಇಟ್ಟು ರಾಖಿ ಕಟ್ಟಿದ್ದು ಹೀಗೆ. ಪಶ್ಚಿಮ ಬಂಗಾಳದ ಬಲುರ್ಘಾಟ್ ಎಂಬ ಪ್ರದೇಶದಲ್ಲಿ.

ರಕ್ಷಾಬಂಧನ ಆಚರಣೆಗೆ ವಯಸ್ಸಿನ ಹಂಗಿಲ್ಲ
ಜಮ್ಮುವಿನ ವೃದ್ಧಾಶ್ರಮವೊಂದರಲ್ಲಿ ವಾಸವಾಗಿರುವ ವೃದ್ಧೆಯೊಬ್ಬರು ವ್ಯಕ್ತಿಯೊಬ್ಬರಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದು ಹೀಗೆ.

ಸೈನಿಕರಿಗೆ ರಾಖಿ
ಭುವನೇಶ್ವರದಲ್ಲಿ ಭಾರತೀಯ ಸೇನೆಯ ಸೈನಿಕರಿಗೆ ಯುವತಿಯರು ರಾಖಿ ಕಟ್ಟುವ ಮೂಲಕ ರಕ್ಷಾಬಂಧನದ ಶುಭಕೋರಿದರು.

ಅಣ್ಣನಿಗಾಗಿ ಕಾಯುತ್ತ...
ಜೈಲಿನಲ್ಲಿರುವ ತಮ್ಮ ಸಹೋದರರಿಗೆ ರಾಖಿ ಕಟ್ಟುವುದಕ್ಕಾಗಿ ಮಳೆಯನ್ನೂ ಲೆಕ್ಕಿಸದೆ ಅಲಹಾಬಾದ್ ನ ನೈನಿ ಸೆಂಟ್ರಲ್ ಜೈಲಿನ ಮುಂದೆ ಸಾಲು ಸಾಲಾಗಿ ನಿಂತಿದ್ದ ಮಹಿಳೆಯರು ಕಂಡಿದ್ದು ಹೀಗೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications