ರಾಮ್ ನಾಥ್ ಕೋವಿಂದ್ ಗೆ ಟ್ವಿಟ್ಟಿಗರ ಅಭಿನಂದನೆ
ನವದೆಹಲಿ, ಜುಲೈ 20: ನಿರೀಕ್ಷೆಯಂತೇ ಭಾರತದ 14 ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಆಯ್ಕೆಯಾಗಿದ್ದಾರೆ. ಜುಲೈ 17 ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು(ಜುಲೈ 20) ಬಿಡುಗಡೆಯಾಗಿದ್ದು, ದಲಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಗೆ ಎಲ್ಲೆಡೆಯಿಂದ ಅಭಿನಂದನೆಯ ಮಹಾಪೂರ ಹರಿದುಬರುತ್ತಿದೆ.
20 ವರ್ಷದ ಹಿಂದೆ ರಾಮ್ ನಾಥ್ ಕೋವಿಂದ್ ಅವರ ಮಗನ ಮದುವೆಯಲ್ಲಿ ಮೋದಿ ಮತ್ತು ಕೋವಿಂದ್ ಇದ್ದ ಚಿತ್ರವನ್ನು ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡುವ ಮೂಲಕ, ಪ್ರಧಾನಿ ನರೇಂದ್ರ ಮೋದಿ ನೂತನ ರಾಷ್ಟ್ರಪತಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಜೊತೆಗೆ ಪರಾಜಿತ ಅಭ್ಯರ್ಥಿ ಕಾಂಗ್ರೆಸ್ ನ ಮೀರಾ ಕುಮಾರ್ ಅವರ ಪ್ರಚಾರ ಕಾರ್ಯ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿವ ಅವರ ಬದ್ಧತೆಯನ್ನು ಕೊಂಡಾಡಿ, ಅವರಿಗೂ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಭರ್ಜರಿ ಗೆಲುವಿನೊಂದಿಗೆ 14ನೇ ರಾಷ್ಟ್ರಪತಿಯಾಗಿ ರಾಮ್ ನಾಥ್ ಕೋವಿಂದ್ ಆಯ್ಕೆ
ಜೊತೆಗೆ ಹಲವು ಗಣ್ಯರು ಕೋವಿಂದ್ ಅವರನ್ನು ಅಭಿನಂದಿಸಿದ್ದಾರೆ.
|
ಇಪ್ಪತ್ತು ವರ್ಷದ ನಂತರ
ಇಪ್ಪತ್ತು ವರ್ಷದ ನಂತರ ಮತ್ತು ಈಗ... ನಿಮ್ಮನ್ನು ರಾಷ್ಟ್ರಪತಿಯಾಗಿ ನೋಡುವುದು ಯಾವಾಗಲೂ ಸಂತಸದ ವಿಷಯ ಎಂದು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದಾರೆ.
|
ಮೌಲ್ಯಗಳನ್ನು ಎತ್ತಿಹಿಡಿಯುತ್ತಾರೆ
ಭಾರತದ 14 ನೇ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ನಮ್ಮ ಸಂವಿಧಾನದ ಮೌಲ್ಯಗಳನ್ನು ಅವರು ಸಮರ್ಥವಾಗಿ ಎತ್ತಿಹಿಡಿಯಲಿದ್ದಾರೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಟ್ವೀಟ್ ಮಾಡಿದ್ದಾರೆ.
|
ಹೃದಯದಲ್ಲಿದೆ ಗೌರವದ ಸ್ಥಾನ
ಶೇ.65 ಎಂಪಿ, ಎಂಎಲ್ ಎ ಗಳು ರಾಮ್ ನಾಥ್ ಕೋವಿಂದ್ ಅವರಿಗೆ ಮತ ಹಾಕಿದ್ದಾರೆ. ಇದರರ್ಥ ನಮ್ಮೆಲ್ಲ ಹೃದಯದಲ್ಲೂ ಅವರಿಗೆ ಬಹಳ ಗೌರವದ ಸ್ಥಾನವಿದೆ ಎಂಬುದು ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ ಹರ್ಷ ವರ್ಧನ್ ಟ್ವೀಟ್ ಮಾಡಿದ್ದಾರೆ.
|
ಅತ್ಯುನ್ನತ ಸಾಂವಿಧಾನಿಕ ಹುದ್ದೆ
ರಾಷ್ಟ್ರದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾದ ರಾಮ್ ನಾಥ್ ಕೋವಿಂದ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಟ್ವೀಟ್ ಮಾಡಿದ್ದಾರೆ.
|
ಅವರ ಅನುಭವ ನಮಗೆ ದಾರಿದೀಪ
ರಾಷ್ಟ್ರಪತಿಯಾಗಿ ಆಯ್ಕೆಯಾದ ಕೋವಿಂದ್ ಅವರಿಗೆ ಅಭಿನಂದನೆಗಳು. ಅವರ ಜ್ಞಾನ ಮತ್ತು ಅನುಭವ ಭಾರತಕ್ಕೆ ಉಪಯುಕ್ತವಾಗುವುದು ಖಂಡಿತ ಎಂದು ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಟ್ವೀಟ್ ಮಾಡಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications