ತಂದೆ ಮಗನ ಭಾವನಾತ್ಮಕ ನಂಟಿಗೆ ಜೀವ ತುಂಬಿದ ಚಿತ್ರ
ನವದೆಹಲಿ, ಅಕ್ಟೋಬರ್, 08: ಒಂದು ಫೋಟೋ ತಂದೆ ಮಗನ ನಡುವಿನ ಬಾಂಧವ್ಯವನ್ನು ಹೇಳುವಂತಿತ್ತು. ಗುರುವಾರ ರಾತ್ರಿ 9 ಗಂಟೆ ವೇಳೆಗೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಸುದ್ದಿ ದೇಶಾದ್ಯಂತ ಹರಡಿತು.
ಕೇಂದ್ರ ಸಚಿವರಾಗಿ, ಬಿಜೆಪಿ ಮುಖಂಡರಾಗಿ ಸರಳ, ಸಜ್ಜನ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರ ಸಾವಿನ ಸುದ್ದಿಯನ್ನು ಸ್ವತಃ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ವ್ಯಕ್ತಪಡಿಸಿರುವ ರೀತಿ ಮನ ಮಿಡಿಯುವಂತಿತ್ತು.
पापा....अब आप इस दुनिया में नहीं हैं लेकिन मुझे पता है आप जहां भी हैं हमेशा मेरे साथ हैं।
— युवा बिहारी चिराग पासवान (@iChiragPaswan) October 8, 2020
Miss you Papa... pic.twitter.com/Qc9wF6Jl6Z
ಟ್ವಿಟರ್ ನಲ್ಲಿ ಪೋಸ್ಟ್ ಆಗಿದ್ದ ಇದೊಂದು ಫೋಟೋ ತಂದೆ ಮಗನ ನಡುವಿನ ನಂಟನ್ನು ಸಾರಿ ಹೇಳುವಂತಿತ್ತು. ಪುಟ್ಟ ಕಂದನನ್ನು ಕೈಯಲ್ಲಿ ಎತ್ತಿ ಹಿಡಿದ ತಂದೆಯ ಪ್ರೀತಿಗೆ ಇದೊಂದು ಭಾವಚಿತ್ರ ಭಾವನೆಗಳಿಗೆ ಜೀವ ತುಂಬುವಂತಿತ್ತು. ಚಿರಾಗ್ ಪಾಸ್ವಾನ್ ಅವರ ಟ್ವಿಟರ್ ಖಾತೆಯ ವಾಲ್ ಪೋಸ್ಟ್ ನಲ್ಲಿ ಕಂಡು ಬಂದ ಇದೊಂದು ಫೋಟೋ ತಂದೆ ಅಗಲಿಕೆಯಲ್ಲಿ ಮಗನ ಮನಸ್ಸು ಎಷ್ಟು ನೊಂದಿರುವುದು ಎಂಬುದನ್ನು ಸಾರಿ ಸಾರಿ ಹೇಳುವಂತಿತ್ತು.

ಅಪ್ಪಾ ಐ ಮಿಸ್ ಯು:
"ಅಪ್ಪಾ.. ಇಂದು ನೀವು ವಾಸ್ತವವಾಗಿ ಈ ಜಗತ್ತಿನಲ್ಲಿ ಇಲ್ಲ. ಆದರೆ ನನಗೆ ಗೊತ್ತಿದೆ. ನೀವು ಎಲ್ಲೇ ಇದ್ದರೂ ನನ್ನ ಜೊತೆಯಲ್ಲೇ ಇರುತ್ತೀರಾ ಎಂಬ ವಿಶ್ವಾಸವಿದೆ. Miss You Papa". ಫೋಟೋದ ಮೇಲಿನ ಇದೊಂದು ಸಾಲು ತಂದೆ ಸಾವಿನ ನೋವಿಗೆ ಸಾಕ್ಷಿಯಾಯಿತು. ರಾಮ್ ವಿಲಾಸ್ ಪಾಸ್ವಾನ್ ಅವರ ಸಾವಿನ ಬೆನ್ನಲ್ಲೇ ಅವರ ಮಗ ಹಾಗೂ ಲೋಕ ಜನಶಸ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಮಾಡಿದ ಟ್ವೀಟ್, ಸಾಮಾಜಿಕ ಜಾಲತಾಣದಲ್ಲಿ ನೋಡುಗರ ಮನ ಮುಟ್ಟುವಂತಿದೆ.
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನರಾಗಿದ್ದಾರೆ. ಸಚಿವರು ಕೆಲ ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಕೇಂದ್ರ ಆಹಾರ ಹಾಗೂ ಪಡಿತರ ಸರಬರಾಜು ಖಾತೆ ಸಚಿವ, ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ರಾಮ್ ವಿಲಾಸ್ ಪಾಸ್ವಾನ್ ಅವರು ಸೆಪ್ಟೆಂಬರ್ 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಾಮ್ ವಿಲಾಸ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications