ಶ್ರೇಷ್ಠ ರಾಜಕಾರಣಿಯನ್ನು ದೇಶ ಕಳೆದುಕೊಂಡಿದೆ : ರಮೇಶ್ ಜಿಗಜಿಣಗಿ
ನವದೆಹಲಿ, ನವೆಂಬರ್ 12 : ಕೇಂದ್ರ ರಸಾಯನ ಮತ್ತು ರಸಗೊಬ್ಬರ ಖಾತೆ ಹಾಗು ಸಂಸದೀಯ ವ್ಯವಹಾರಗಳ ಖಾತೆಯ ಸಚಿವರಾದ ಅನಂತ ಕುಮಾರ್ ಅವರ ನಿಧನಕ್ಕೆ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಅನಂತ ಕುಮಾರ್ ಅವರು ತಮ್ಮ ಪರಮಾಪ್ತ ಸ್ನೇಹಿತರು, ಮಾರ್ಗದರ್ಶಿಗಳು, ನೆಚ್ಚಿನ ನಾಯಕರಾಗಿದ್ದರು. 2004ರಲ್ಲಿ ತಾವು ಬಿಜೆಪಿ ಸೇರಿದ ದಿನದಿಂದ ಇಂದಿನವರೆಗೂ ಅತ್ಯಂತ ಆತ್ಮೀಯ ಸ್ನೇಹಿತರಾಗಿದ್ದರು. ತಾವು ಕೇಂದ್ರ ಸಚಿವರಾಗುವ ಸಂದರ್ಭದಲ್ಲೂ ತಮಗೆ ಸಹಕಾರ ನೀಡಿದ್ದರು ಎಂದು ಅನಂತ್ ಅವರನ್ನು ನೆನೆದರು.
ರಾಜ್ಯ ಕಂಡ ಅತ್ತ್ಯುತ್ತಮ ಸಂಸದೀಯ ಪಟು, ವಾಕ್ ಚತುರಾಗಿದ್ದರು. ಗುರು ಹಿರಿಯರ ಬಗ್ಗೆ ಅಪಾರ ಪ್ರೀತಿ ಮತ್ತು ವಿಶ್ವಾಸ ಹೊಂದಿದ್ದರು. ಕನ್ನಡ ನಾಡ ನುಡಿ, ಭಾಷೆ, ಗಡಿ, ಜಲ ವಿಷಯಗಳಲ್ಲಿ ಅಪಾರವಾದ ಪೀತಿ ಹೊಂದಿದ್ದು, ಇಂತಹ ವಿಷಯಗಳಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸುವಲ್ಲಿ ಅವರ ಪಾತ್ರ ಮಹತ್ತರವಾದುದು ಎಂದು ಅವರನ್ನು ಸ್ಮರಿಸಿದರು.

ಕರ್ನಾಟಕದ ಬಗ್ಗೆ ಅವರ ಕಾಳಜಿ ಅನುಕರಣೀಯವಾದುದು. ಕರ್ನಾಟಕದ ವಿಷಯದಲ್ಲಿ ಎಲ್ಲರನ್ನೂ ಒಗ್ಗೂಡಿಸಿ, ಪಕ್ಷಭೇದ ಮರೆತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಸಮಸ್ಯೆಗಳ ಪರಿಹಾರಕ್ಕೆ ಸ್ವಂದಿಸುತ್ತಿದ್ದರು. ಭಾರತೀಯ ಜನತಾ ಪಕ್ಷದ ಕರ್ನಾಟಕ ಮತ್ತು ದೇಶದಾದ್ಯಂತ ಬಲವಾಗಲು ಶ್ರಮಿಸಿದ್ದರು ಎಂದು ಕೊಂಡಾಡಿದರು.
ಉಪ ಪ್ರಧಾನ ಮಂತ್ರಿಗಳಾದ ಎಲ್. ಕೆ. ಅಡ್ವಾಣಿ ಅವರ ಮಾನಸಪುತ್ರರಂತಿದ್ದರೂ ಸರಳ ಸಜ್ಜನಿಕೆಯ ಸಹನಾಮೂರ್ತಿಯಾಗಿದ್ದರು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷದ ಬಲವರ್ಧನೆಗೆ ಕಾರ್ಯಕ್ರಮಗಳ ಕ್ರಿಯಾ ಯೋಜನೆ ರೂಪಿಸುತ್ತಿದ್ದ ನಿಪುಣರಾಗಿದ್ದರು. ಅವರ ಚಿಂತನೆ, ಆದರ್ಶ ಜೀವನ ಯುವಕರಿಗೆ ಮಾದರಿಯಾಗಿದೆ ಎಂದು ಜಿಗಜಿಣಗಿ ಅವರು ನುಡಿದರು.
ಅನಂತ್ ಕುಮಾರ್ ಅವರು ಪಕ್ಷದ ಬಲವರ್ಧನೆಗೆ ದೇಶದಾದ್ಯಂತ ಸಂಚರಿಸಿ, ಶ್ರಮಿಸಿದ್ದಾರೆ. ಇವರ ಅಗಲಿಕೆಯಿಂದ ಕರ್ನಾಟಕ ಮಾತ್ರವಲ್ಲದೇ ದೇಶದಲ್ಲೇ ಒಬ್ಬ ಅತ್ಯುನ್ನತ ಶೇಷ್ಠ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಇವರ ಅಗಲಿಕೆಯಿಂದ ಕರ್ನಾಟಕ ಬಡವಾಗಿದೆ. ಇವರ ಅಗಲಿಕೆಯ ನೋವನ್ನು ಭವರಿಸುವ ಶಕ್ತಿಯನ್ನು ಅವರ ಕುಟುಂಬ ಪರಿವಾರಕ್ಕೆ ಹಾಗು ಅಭಿಮಾನಿಗಳಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಅವರು ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications