ವಿತ್ತ ಸಚಿವೆ ನಿರ್ಮಲಾ ಅವರಿಗೆ ರಮ್ಯಾ ಟ್ವೀಟ್: ಹಾರೈಕೆ ಜೊತೆ ವ್ಯಂಗ್ಯ!
Recommended Video
ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್ ಡಿಎ ಸರ್ಕಾರದಲ್ಲಿ ವಿತ್ತ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಿರ್ಮಲಾ ಸೀತಾರಾಮನ್ ಅವರಿಗೆ ಕಾಂಗ್ರೆಸ್ ವಕ್ತಾರೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಶುಭಕೋರಿದ್ದಾರೆ.
ಹಾರೈಕೆಯ ಜೊತೆಯಲ್ಲಿ ವ್ಯಂಗ್ಯವನ್ನೂ ಬೆರೆಸಿರುವ ಅವರ ಟ್ವೀಟ್ ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ನೆನಪಿಸಿಕೊಂಡಿದ್ದಾರೆ.
"1970 ರಲ್ಲಿ ಇಂದಿರಾಗಾಂಧಿ ಅವರು ಮಾತ್ರ ನಿಭಾಯಿಸಿದ್ದ ಖಾತೆಯನ್ನು ಇಂದು ನೀವು ನಿಭಾಯಿಸುತ್ತಿದ್ದೀರಿ. ಮಹಿಳೆಯರಿಗೆ ಇದರಿಂದ ಹೆಮ್ಮೆಯಾಗುತ್ತಿದೆ. ಜಿಡಿಪಿ ಸುಧಾರಿಸಿಲ್ಲ. ನೀವು ಅರ್ಥವ್ಯವಸ್ಥೆಗೆ ಚೇತರಿಕೆ ತರುತ್ತೀರಿ ಎಂದು ನಂಬಿದ್ದೇನೆ. ನಿಮಗೆ ನಮ್ಮ ಬೆಂಬಲವಿದೆ. ಶುಭಹಾರೈಕೆಗಳು" ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.
ಭಾರತದ ಜಿಡಿಪಿ(Gross Domestic Product) ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಶೇ.5.8 ಕುಸಿದಿದೆ ಎಂದು ತಿಳಿದುಬಂದಿದ್ದು, ಆದ್ದರಿಂದಲೇ ರಮ್ಯಾ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿದೆ.
ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದ ಸಮಯದಲ್ಲಿ ಕೆಲಕಾಲ ಹಣಕಾಸು ಇಲಾಖೆಯ ಹೊಣೆ ಹೊತ್ತಿದ್ದರು. ಅವರ ನಂತರ ಮೊದಲ ಬಾರಿಗೆ ನಿರ್ಮಲಾ ಸೀತಾರಾಮನ್ ಅವರು ಈ ಖಾತೆಯ ಹೊಣೆ ಹೊತ್ತಿದ್ದು, ದಾಖಲೆ ಬರೆದಿದ್ದಾರೆ.
ಅಮಿತ್ ಶಾ ಅವರಿಗೆ ಗೃಹ, ರಾಜನಾಥ್ ಸಿಂಗ್ ಅವರಿಗೆ ರಕ್ಷಣಾ ಖಾತೆಯ ಹೊಣೆ ನೀಡಲಾಗಿದೆ.
ರಮ್ಯಾ ಅವರ ಟ್ವೀಟ್ ಗೆ ಸಾಕಷ್ಟು ವ್ಯಂಗ್ರಮಿಶ್ರಿತ ಪ್ರತಿಕ್ರಿಯೆಗಳು ಹೊರಬಂದಿದ್ದು, ಲೋಕಸಭೆಯಲ್ಲಿ ಮತವನ್ನೇ ಚಲಾಯಿಸದ ಈವು ಈಗ ಸಲಹೆ ಕೊಡುವುದು ಸರಿಯೇ ಎಂದು ಕೆಲವರು ಪ್ರಶ್ನಿಸಿದ್ದಾರೆ!
|
ಮತಚಲಾಯಿಸದ ನೀವು ಸಲಹೆ ಹೇಗೆ ಕೊಡುತ್ತೀರಿ?
ನೀವು ಲೋಕಸಭೆ ಚುನಾವಣೆಯಲ್ಲಿ ಮತವನ್ನೇ ಚಲಾಯಿಸದ ಕಾರಣ ಯಾವುದೇ ಸಲಹೆ ನೀಡಲು ಸಮರ್ಥರಲ್ಲ. ದಯವಿಟ್ಟು ಸುಮ್ಮನಿರಿ ಎಂದು ಗಣೇಶ್ ರಾವ್ ಎಂಬುವವರು ಟ್ವೀಟ್ ಮಾಡಿದ್ದಾರೆ.
|
ನೀವೇನು ಮಾಡಿದ್ದೀರಿ?
ಎಲ್ಲಾ ಮಹಿಳೆಯರು ಉತ್ತಮವಾದ ಕಾರ್ಯವನ್ನೇ ನಿರ್ವಹಿಸುತ್ತಿದ್ದಾರೆ . ರಮ್ಯಾ ಮೇಡಮ್ ತಾವೇನು ಮಾಡುತ್ತಿದ್ದೀರಿ? ಬೇರೆಯವರ ಕಾಲೆಳೆಯದನ್ನು ಬಿಟ್ಟು ತಮಗೆನಾದರೂ ಉತ್ತಮವಾದ ವಿಚಾರಗಳು ನಿಮ್ಮ ತಲೆಯಲ್ಲಿ ಇವೆಯೋ? - ರವಿ ಪಾಟೀಲ್
|
ಜಿಡಿಪಿ ಅಂದ್ರೇನು ಗೊತ್ತಾ?
ಅದಿರ್ಲಿ, ನಿಮಗೆ ಜಿಡಿಪಿ ಅಂದ್ರೇನು ಅಂತ ಗೊತ್ತಾ? ಎಂದು ಕಾಲೆಳೆದಿದ್ದಾರೆ ಮುತ್ತು ಆಲ್ಮಟ್ಟಿ
|
ಕರುಣೆ ಹುಟ್ಟುತ್ತಿದೆ!
ನಾವು ಎಂದಿಗೂ ನಿಮ್ಮ ಪ್ರತಿಕ್ರಿಯೆಯನ್ನು ಸ್ವಾಗತಿಸುತ್ತೇವೆ. ಆದರೆ ದುರಹಂಕಾರವನ್ನೇ ಆಸ್ತಿ ಎಂದುಕೊಂಡ ಕಾಂಗ್ರೆಸ್ಸಿಗೆ ಬುದ್ಧಿ ಬರುವುದು ಯಾವಾಗ ಎಂಬುದು ಗೊತ್ತಾಗುತ್ತಿಲ್ಲ. 543 ರಲ್ಲಿ 53 ಕ್ಷೇತ್ರಗಳಲ್ಲಿ ಗೆದ್ದು ವಿಪಕ್ಷದ ಸ್ಥಾನಮಾನವನ್ನೂ ಪಡೆಯಲಾಗದ ಕಾಂಗ್ರೆಸ್ಸಿಗೆ ನನ್ನ ಅನುಕಂಪವಿದೆ- ಗಿರೀಶ್ ಶೇಷಗಿರಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications