ಕಾಂಗ್ರೆಸ್ ಸದಸ್ಯನಿಂದ ಲೈಂಗಿಕ ಕಿರುಕುಳ ಕೇಸ್, ರಮ್ಯಾ ಪ್ರತಿಕ್ರಿಯೆ ಏನು?
Recommended Video

ನವದೆಹಲಿ, ಜುಲೈ 04: ಕಾಂಗ್ರೆಸ್ಸಿನ ಸಾಮಾಜಿಕ ಜಾಲ ತಾಣಗಳ ದೆಹಲಿ ಘಟಕದ ಹಾಲಿ ಸಿಬ್ಬಂದಿಯೊಬ್ಬರಿಂದ ಮಾಜಿ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ವರದಿಯನ್ನು ಮಾಜಿ ಸಂಸದೆ ರಮ್ಯಾ ಅವರು ತಳ್ಳಿ ಹಾಕಿದ್ದಾರೆ.
ಎಐಸಿಸಿ ಸಾಮಾಜಿಕ ಜಾಲ ತಾಣ ಹಾಗೂ ಡಿಜಿಟಲ್ ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ಈ ಕುರಿತಂತೆ ಟ್ವೀಟ್ ಮಾಡಿ, ಮಾಜಿ ಉದ್ಯೋಗಿ ಆರೋಪಗಳಲ್ಲಿ ಹುರುಳಿಲ್ಲ. ಹಾಲಿ ಉದ್ಯೋಗಿ ಪರ 39 ಜನ ಇತರೆ ಸದಸ್ಯರು ಸಹಿ ಹಾಕಿ, ಸನ್ನಡತೆಯ ಪ್ರಮಾಣ ಪತ್ರ ನೀಡಿದ್ದಾರೆ ಎಂದು ಪ್ರಕಟಣೆ ಹೊರಡಿಸಿದ್ದಾರೆ.

ಏನಿದು ಪ್ರಕರಣ: ಚಿರಾಗ್ ಪಟ್ನಾಯಕ್ ಎಂಬ ವ್ಯಕ್ತಿ ರಮ್ಯಾ ಅವರ ಐಟಿ ಸೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವ್ಯಕ್ತಿ ವಿರುದ್ಧ ಮಾಜಿ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
In response to the recent allegations against one of our team workers by an ex worker, please read the statement below- pic.twitter.com/4LVa5Hzoxk
— Divya Spandana/Ramya (@divyaspandana) July 3, 2018
ತಮಗಾದ ನೋವಿನ ಬಗ್ಗೆ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ ಅವರಿಗೂ ದೂರು ನೀಡಿದ್ದೆ ಎಂದಿದ್ದಾರೆ. ಈ ಬಗ್ಗೆ ರಮ್ಯಾ ಅವರು ಯಾವುದೇ ಕ್ರಮ ಜರುಗಿಸದ ಕಾರಣ, ವಿಧಿ ಇಲ್ಲದೆ ಪೊಲೀಸರ ನೆರವು ಕೋರಿದ್ದಾರೆ.
ದೆಹಲಿಯ ನಾರ್ಥ್ ಅವಿನ್ಯೂ ಪೊಲೀಸ್ ಠಾಣೆಯಲ್ಲಿ ಚಿರಾಗ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 354 ಎ ಹಾಗೂ 509ರ ಅನ್ವಯ ಎಫ್ಐಆರ್ ಹಾಕಲಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications