ಅಸಾರಾಮ್ ಬಾಪುಗೇಕೆ ಜಾಮೀನು ನೀಡಬೇಕು?
ನವದೆಹಲಿ, ಸೆ.23: ಅಪ್ರಾಪ್ತ ವಯಸ್ಕ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತು ಜೈಲು ಸೇರಿರುವ ಸ್ವಯಂಘೋಷಿತ ದೇವಮಾನ ಅಸಾರಾಮ್ ಬಾಪು ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಬಾಪು ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಸುಪ್ರೀಂಕೋರ್ಟಿನಲ್ಲಿ ಮಂಗಳವಾರ ತಿರಸ್ಕಾರಗೊಂಡಿದೆ. ಅಸಾರಾಮ್ ಬಾಪುಗೇಕೆ ಜಾಮೀನು ನೀಡಬೇಕು? ಎಂದು ಕೋರ್ಟ್ ಪ್ರಶ್ನಿಸಿದೆ.
ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಜೋಧಪುರದ ಕೋರ್ಟ್ ಅಸಾರಾಮ್ ಬಾಪು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಜಾಮೀನು ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.[ಬಾಪು ಬನ್ ಗಯಾ ದೇವಮಾನವ]

72 ವರ್ಷ ವಯಸ್ಸಿನ ಗುರು ಅಸಾರಾಮ್ ಬಾಪು ಅವರು 16 ವರ್ಷ ವಯಸ್ಸಿನ ಯುವತಿ ಮೇಲೆ ಆಗಸ್ಟ್ 20, 2013ರಂದು ಜೋಧಪುರದ ಆಶ್ರಮದಲ್ಲಿ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದಾರೆ. ಬಾಪು ಅವರಿಗೆ ಜಾಮೀನು ನೀಡುವ ಯಾವುದೇ ಆತುರ ಕೋರ್ಟಿಗಿಲ್ಲ. ಇನ್ನೂ ವಿಚಾರಣೆ ಮುಗಿದಿಲ್ಲ. ಸಾಕ್ಷಿಗಳು ವಿಚಾರಣೆಗೊಳಲ್ಪಟ್ಟಿಲ್ಲ ಈ ಹಂತದಲ್ಲಿ ಜಾಮೀನು ನೀಡಲಾಗುವುದಿಲ್ಲ ಎಂದು ಸುಪ್ರೀಂಕೋರ್ಟಿನ ನ್ಯಾ. ಟಿಎಸ್ ಠಾಕೂರ್ ಹೇಳಿದ್ದಾರೆ.
ಅಸಾರಾಂ ಹಾಗೂ ನಾರಾಯಣ ಸಾಯಿ ವಿರುದ್ಧ ಸುಮಾರು 1,011 ಪುಟಗಳಷ್ಟು ಆರೋಪಪಟ್ಟಿಯನ್ನು ಜೋಧಪುರದ ಕೋರ್ಟಿಗೆ ಸಲ್ಲಿಸಲಾಗಿತ್ತು. 121 ದಾಖಲೆ ಪತ್ರ, ಹೇಳಿಕೆಗಳು ಹಾಗೂ 58 ಸಾಕ್ಷಿಗಳ ಹೆಸರನ್ನು ಇದರಲ್ಲಿ ನಮೂದಿಸಲಾಗಿದೆ. [ಅಸಾರಮ್ ಬಾಪು 10 ವಿವಾದಗಳು]
ಅಸಾರಾಂ ಹಾಗೂ ಇತರೆ ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 342,376(ಎಫ್), 376 (ಡಿ), 354(ಎ), 506 ಹಾಗೂ 109 ಅನ್ವಯ ಪ್ರಕರಣ ದಾಖಲಿಸಲಾಗಿದೆ. ಲೈಂಗಿಕ ಕಿರುಕುಳ, ಅಕ್ರಮ ಬಂಧನ, ಕಾನೂನು ಬಾಹಿರ ಒಟ್ಟುಸೇರುವಿಕೆ, ಶಸ್ತ್ರಾಸ್ತ್ರ, ಮಾರಕ ಆಯುಧಗಳಿಂದ ಬೆದರಿಸಿರುವುದು ಎಂಬಿತ್ಯಾದಿ ಆರೋಪಗಳನ್ನು ಬಾಪೂ ಮೇಲೆ ಹೊರೆಸಲಾಗಿದೆ.(ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications