ಶಿಶು ಅತ್ಯಾಚಾರಿಗಳಿಗೆ ಕ್ಷಮಾದಾನದ ಅರ್ಜಿಗೆ ಅನುಮತಿಯನ್ನೇ ಕೊಡಬಾರದು: ಕೋವಿಂದ್
ನವದೆಹಲಿ, ಡಿಸೆಂಬರ್ 6: ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನದ ಮನವಿಯನ್ನು ಕೇಂದ್ರ ಗೃಹಸಚಿವಾಲಯ ಕೂಡ ತಿರಸ್ಕರಿಸಿದೆ.
ವಿನಯ್ ಶರ್ಮಾನ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದ ದೆಹಲಿ ಸರ್ಕಾರ ಅದನ್ನು ಗೃಹಸಚಿವಾಲಯಕ್ಕೆ ಕಳುಹಿಸಿತ್ತು. ಈ ಶಿಫಾರಸನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಕಳುಹಿಸಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ಕಡತವನ್ನು ಗೃಹ ಸಚಿವಾಲಯಕ್ಕೆ ವಾರದ ಆರಂಭದಲ್ಲಿ ಕಳುಹಿಸಿದ್ದರು. ಈ ಅರ್ಜಿಯನ್ನು ರಾಷ್ಟ್ರಪತಿಗಳ ಅಂತಿಮ ವಿವೇಚನೆಗಾಗಿ ರವಾನಿಸಲಾಗಿದೆ.

ರಾಜಸ್ಥಾನದಲ್ಲಿ ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಷ್ಟ್ರಪತಿ ಕೋವಿಂದ್, 'ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ನೀಡುವ ಕಾಯ್ದೆ (ಪೋಕ್ಸೋ) ಕಾಯ್ದೆಯಡಿ ಅತ್ಯಾಚಾರದ ಶಿಕ್ಷೆಗೆ ಗುರಿಯಾದವರಿಗೆ ಯಾವುದೇ ಕ್ಷಮಾದಾನಕ್ಕೆ ಮನವಿ ಮಾಡುವ ಅವಕಾಶವನ್ನೇ ನೀಡಬಾರದು' ಎಂದು ಹೇಳಿದರು.
'ಮಹಿಳೆಯರ ರಕ್ಷಣೆ ಅತ್ಯಂತ ಗಂಭೀರ ವಿಚಾರ. ಪೋಕ್ಸೋ ಕಾಯ್ದೆಯಡಿ ಶಿಕ್ಷೆಗೆ ಒಳಗಾದ ಅತ್ಯಾಚಾರಿಗಳು ಕ್ಷಮಾದಾನ ಕೋರಿಕೆ ಅರ್ಜಿ ಸಲ್ಲಿಸುವ ಹಕ್ಕನ್ನು ಹೊಂದುವಂತಾಗಬಾರದು. ಕ್ಷಮಾದಾನದ ಅರ್ಜಿಯ ಕುರಿತು ಸಂಸತ್ ಪರಾಮರ್ಶೆ ನಡೆಸಬೇಕು' ಎಂದರು.
2012ರ ಡಿ. 16ರಂದು ರಾಜಧಾನಿ ದೆಹಲಿಯಲ್ಲಿ ನಡೆದ 23 ವರ್ಷದ ವಿದ್ಯಾರ್ಥಿನಿ ನಿರ್ಭಯಾ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಹತ್ಯೆ ಪ್ರಕರಣ ದೇಶವನ್ನು ತಲ್ಲಣಗೊಳಿಸಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications