ಶಿಶು ಅತ್ಯಾಚಾರಿಗಳಿಗೆ ಕ್ಷಮಾದಾನದ ಅರ್ಜಿಗೆ ಅನುಮತಿಯನ್ನೇ ಕೊಡಬಾರದು: ಕೋವಿಂದ್
ನವದೆಹಲಿ, ಡಿಸೆಂಬರ್ 6: ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನದ ಮನವಿಯನ್ನು ಕೇಂದ್ರ ಗೃಹಸಚಿವಾಲಯ ಕೂಡ ತಿರಸ್ಕರಿಸಿದೆ.
ವಿನಯ್ ಶರ್ಮಾನ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದ ದೆಹಲಿ ಸರ್ಕಾರ ಅದನ್ನು ಗೃಹಸಚಿವಾಲಯಕ್ಕೆ ಕಳುಹಿಸಿತ್ತು. ಈ ಶಿಫಾರಸನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಕಳುಹಿಸಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ಕಡತವನ್ನು ಗೃಹ ಸಚಿವಾಲಯಕ್ಕೆ ವಾರದ ಆರಂಭದಲ್ಲಿ ಕಳುಹಿಸಿದ್ದರು. ಈ ಅರ್ಜಿಯನ್ನು ರಾಷ್ಟ್ರಪತಿಗಳ ಅಂತಿಮ ವಿವೇಚನೆಗಾಗಿ ರವಾನಿಸಲಾಗಿದೆ.

ರಾಜಸ್ಥಾನದಲ್ಲಿ ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಷ್ಟ್ರಪತಿ ಕೋವಿಂದ್, 'ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ನೀಡುವ ಕಾಯ್ದೆ (ಪೋಕ್ಸೋ) ಕಾಯ್ದೆಯಡಿ ಅತ್ಯಾಚಾರದ ಶಿಕ್ಷೆಗೆ ಗುರಿಯಾದವರಿಗೆ ಯಾವುದೇ ಕ್ಷಮಾದಾನಕ್ಕೆ ಮನವಿ ಮಾಡುವ ಅವಕಾಶವನ್ನೇ ನೀಡಬಾರದು' ಎಂದು ಹೇಳಿದರು.
'ಮಹಿಳೆಯರ ರಕ್ಷಣೆ ಅತ್ಯಂತ ಗಂಭೀರ ವಿಚಾರ. ಪೋಕ್ಸೋ ಕಾಯ್ದೆಯಡಿ ಶಿಕ್ಷೆಗೆ ಒಳಗಾದ ಅತ್ಯಾಚಾರಿಗಳು ಕ್ಷಮಾದಾನ ಕೋರಿಕೆ ಅರ್ಜಿ ಸಲ್ಲಿಸುವ ಹಕ್ಕನ್ನು ಹೊಂದುವಂತಾಗಬಾರದು. ಕ್ಷಮಾದಾನದ ಅರ್ಜಿಯ ಕುರಿತು ಸಂಸತ್ ಪರಾಮರ್ಶೆ ನಡೆಸಬೇಕು' ಎಂದರು.
2012ರ ಡಿ. 16ರಂದು ರಾಜಧಾನಿ ದೆಹಲಿಯಲ್ಲಿ ನಡೆದ 23 ವರ್ಷದ ವಿದ್ಯಾರ್ಥಿನಿ ನಿರ್ಭಯಾ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಹತ್ಯೆ ಪ್ರಕರಣ ದೇಶವನ್ನು ತಲ್ಲಣಗೊಳಿಸಿತ್ತು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications