'ಆರ್ ಬಿಐ ಮಂಡಳಿ ಒಪ್ಪುವ ಮುಂಚೆಯೇ ಅಪನಗದೀಕರಣ ಘೋಷಣೆ'
ನವದೆಹಲಿ, ಮಾರ್ಚ್ 11: ಪ್ರಧಾನಿ ನರೇಂದ್ರ ಮೋದಿ ಅವರು ಅಪನಗದೀಕರಣ ಘೋಷಣೆ ಮಾಡುವ ಮುನ್ನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಂಡಳಿ ನಾಲ್ಕು ಆಕ್ಷೇಪಗಳನ್ನು ಎತ್ತಿತ್ತು. ಸಾರ್ವಜನಿಕರ ಹಿತದೃಷ್ಟಿಯಿಂದ ಒಪ್ಪಿಗೆ ಸೂಚಿಸುವ ಮುನ್ನ ಈ ರೀತಿ ಆಕ್ಷೇಪ ವ್ಯಕ್ತಪಡಿಸಲಾಗಿತ್ತು ಎಂಬ ಸಂಗತಿ ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಲಾದ ಪ್ರಶ್ನೆಗೆ ನೀಡಿದ ಉತ್ತರದಿಂದ ತಿಳಿದುಬಂದಿದೆ.
ಕೇಂದ್ರ ಬ್ಯಾಂಕ್ ನ ಮಂಡಳಿಯು ಪ್ರಧಾನಮಂತ್ರಿ ಅಪನಗದೀಕರಣ ಘೋಷಣೆ ಮಾಡುವ ಎರಡೂವರೆ ಗಂಟೆ ಮುಂಚೆ ಸಭೆ ನಡೆಸಿತ್ತು. ಚಲಾವಣೆಯಲ್ಲಿದ್ದ ಶೇಕಡಾ ಎಂಬತ್ತರಷ್ಟು ಐನೂರು, ಸಾವಿರ ರುಪಾಯಿ ನೋಟುಗಳನ್ನು ಹಿಂಪಡೆಯುವ ನಿರ್ಧಾರವನ್ನು ಆರ್ ಬಿಐ ಮಂಡಳಿ ಒಪ್ಪಿಗೆ ಸೂಚಿಸುವ ಮುನ್ನವೇ ಘೋಷಿಸಲಾಗಿದೆ.
ವಾರಗಳ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಒಪ್ಪಿಗೆಯನ್ನು ಸೂಚೊಸಲಾಗಿದೆ. ನೋಟು ನಿಷೇಧದ ಪರವಾಗಿ ಇದ್ದ ಸರಕಾರದ ಹಲವು ಅರ್ಜಿಗಳಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಸಮ್ಮತಿ ಸೂಚಿಸಿತ್ತು. ಆರ್ ಬಿಐನ ಸಭೆಯಲ್ಲಿ ಭಾಗವಹಿಸಿದ್ದ ನಿರ್ದೇಶಕರು ಅಪನಗದೀಕರಣವನ್ನು 'ಶ್ಲಾಘನೀಯ ಕ್ರಮ' ಎಂದಿದ್ದರು. ಆದರೆ ಪ್ರಸಕ್ತ ವರ್ಷದ ಜಿಡಿಪಿ ಮೇಲೆ ಅದರ ನಕಾರಾತ್ಮಕ ಪರಿಣಾಮ ಆಗುತ್ತದೆ ಎಂದು ಕೂಡ ಅಭಿಪ್ರಾಯ ಪಟ್ಟಿದ್ದರು.

ಕೇಂದ್ರ ಬ್ಯಾಂಕ್ ನ ನಿರ್ದೇಶಕರು ನೋಟು ನಿಷೇಧದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ದೇಶದಲ್ಲಿ ಒಟ್ಟಾರೆ ಚಲಾವಣೆಯಲ್ಲಿರುವ ಮೊತ್ತದಲ್ಲಿ ನಾನೂರು ಕೋಟಿ ರುಪಾಯಿಯನ್ನು ಪರ್ಸೆಂಟ್ ಗೆ ಬದಲಾಯಿಸಿ ನೋಡಿದರೆ ಅಂಥ ಮಹತ್ತರ ಮೊತ್ತ ಅಲ್ಲ ಎಂದಿದ್ದರು.
ಬಹುತೇಕ ಕಪ್ಪು ಹಣ ನಗದು ರೂಪದಲ್ಲೇ ಇರುತ್ತದೆ ಎಂದಲ್ಲ. ಅದು ಚಿನ್ನ ಅಥವಾ ರಿಯಲ್ ಎಸ್ಟೇಟ್ ಯಾವ ರೂಪದಲ್ಲಿ ಬೇಕಾದರೂ ಇರಬಹುದು. ಅಪನಗದೀಕರಣದಿಂದ ಅಂಥ ಆಸ್ತಿ ಮೇಲೆ ಯಾವ ಪರಿಣಾಮವೂ ಆಗಲ್ಲ ಎಂಬುದು ಆರ್ ಬಿಐ ಮಂಡಳಿ ಅಭಿಪ್ರಾಯ ಆಗಿತ್ತು.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕೇಂದ್ರ ಸರಕಾರದ ಮಧ್ಯೆ ಆರು ತಿಂಗಳಿಂದ ಈ ವಿಚಾರದ ಚರ್ಚೆ ನಡೆಯುತ್ತಿತ್ತು ಎಂದು ಹೇಳಲಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications