'ಆರ್ ಬಿಐ ಮಂಡಳಿ ಒಪ್ಪುವ ಮುಂಚೆಯೇ ಅಪನಗದೀಕರಣ ಘೋಷಣೆ'
ನವದೆಹಲಿ, ಮಾರ್ಚ್ 11: ಪ್ರಧಾನಿ ನರೇಂದ್ರ ಮೋದಿ ಅವರು ಅಪನಗದೀಕರಣ ಘೋಷಣೆ ಮಾಡುವ ಮುನ್ನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಂಡಳಿ ನಾಲ್ಕು ಆಕ್ಷೇಪಗಳನ್ನು ಎತ್ತಿತ್ತು. ಸಾರ್ವಜನಿಕರ ಹಿತದೃಷ್ಟಿಯಿಂದ ಒಪ್ಪಿಗೆ ಸೂಚಿಸುವ ಮುನ್ನ ಈ ರೀತಿ ಆಕ್ಷೇಪ ವ್ಯಕ್ತಪಡಿಸಲಾಗಿತ್ತು ಎಂಬ ಸಂಗತಿ ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಲಾದ ಪ್ರಶ್ನೆಗೆ ನೀಡಿದ ಉತ್ತರದಿಂದ ತಿಳಿದುಬಂದಿದೆ.
ಕೇಂದ್ರ ಬ್ಯಾಂಕ್ ನ ಮಂಡಳಿಯು ಪ್ರಧಾನಮಂತ್ರಿ ಅಪನಗದೀಕರಣ ಘೋಷಣೆ ಮಾಡುವ ಎರಡೂವರೆ ಗಂಟೆ ಮುಂಚೆ ಸಭೆ ನಡೆಸಿತ್ತು. ಚಲಾವಣೆಯಲ್ಲಿದ್ದ ಶೇಕಡಾ ಎಂಬತ್ತರಷ್ಟು ಐನೂರು, ಸಾವಿರ ರುಪಾಯಿ ನೋಟುಗಳನ್ನು ಹಿಂಪಡೆಯುವ ನಿರ್ಧಾರವನ್ನು ಆರ್ ಬಿಐ ಮಂಡಳಿ ಒಪ್ಪಿಗೆ ಸೂಚಿಸುವ ಮುನ್ನವೇ ಘೋಷಿಸಲಾಗಿದೆ.
ವಾರಗಳ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಒಪ್ಪಿಗೆಯನ್ನು ಸೂಚೊಸಲಾಗಿದೆ. ನೋಟು ನಿಷೇಧದ ಪರವಾಗಿ ಇದ್ದ ಸರಕಾರದ ಹಲವು ಅರ್ಜಿಗಳಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಸಮ್ಮತಿ ಸೂಚಿಸಿತ್ತು. ಆರ್ ಬಿಐನ ಸಭೆಯಲ್ಲಿ ಭಾಗವಹಿಸಿದ್ದ ನಿರ್ದೇಶಕರು ಅಪನಗದೀಕರಣವನ್ನು 'ಶ್ಲಾಘನೀಯ ಕ್ರಮ' ಎಂದಿದ್ದರು. ಆದರೆ ಪ್ರಸಕ್ತ ವರ್ಷದ ಜಿಡಿಪಿ ಮೇಲೆ ಅದರ ನಕಾರಾತ್ಮಕ ಪರಿಣಾಮ ಆಗುತ್ತದೆ ಎಂದು ಕೂಡ ಅಭಿಪ್ರಾಯ ಪಟ್ಟಿದ್ದರು.

ಕೇಂದ್ರ ಬ್ಯಾಂಕ್ ನ ನಿರ್ದೇಶಕರು ನೋಟು ನಿಷೇಧದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ದೇಶದಲ್ಲಿ ಒಟ್ಟಾರೆ ಚಲಾವಣೆಯಲ್ಲಿರುವ ಮೊತ್ತದಲ್ಲಿ ನಾನೂರು ಕೋಟಿ ರುಪಾಯಿಯನ್ನು ಪರ್ಸೆಂಟ್ ಗೆ ಬದಲಾಯಿಸಿ ನೋಡಿದರೆ ಅಂಥ ಮಹತ್ತರ ಮೊತ್ತ ಅಲ್ಲ ಎಂದಿದ್ದರು.
ಬಹುತೇಕ ಕಪ್ಪು ಹಣ ನಗದು ರೂಪದಲ್ಲೇ ಇರುತ್ತದೆ ಎಂದಲ್ಲ. ಅದು ಚಿನ್ನ ಅಥವಾ ರಿಯಲ್ ಎಸ್ಟೇಟ್ ಯಾವ ರೂಪದಲ್ಲಿ ಬೇಕಾದರೂ ಇರಬಹುದು. ಅಪನಗದೀಕರಣದಿಂದ ಅಂಥ ಆಸ್ತಿ ಮೇಲೆ ಯಾವ ಪರಿಣಾಮವೂ ಆಗಲ್ಲ ಎಂಬುದು ಆರ್ ಬಿಐ ಮಂಡಳಿ ಅಭಿಪ್ರಾಯ ಆಗಿತ್ತು.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕೇಂದ್ರ ಸರಕಾರದ ಮಧ್ಯೆ ಆರು ತಿಂಗಳಿಂದ ಈ ವಿಚಾರದ ಚರ್ಚೆ ನಡೆಯುತ್ತಿತ್ತು ಎಂದು ಹೇಳಲಾಗಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications