ಕಿರಣ ಬೇಡಿಯನ್ನು ನೈತಿಕ ಭ್ರಷ್ಟನನ್ನಾಗಿ ಮಾಡಿದ ದೆಹಲಿ ಚುನಾವಣೆ
ಐದು ವರ್ಷದ ಹಿಂದೆ ನಡೆದ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಗ್ರೌಂಡ್ ರಿಪೋರ್ಟ್ ಯಾವರೀತಿ ಇತ್ತೆಂದರೆ, ಆಮ್ ಆದ್ಮಿ ಪಕ್ಷ ನಿರಾಯಾಸವಾಗಿ ಅಧಿಕಾರಕ್ಕೇರಲಿದೆ ಎಂದು. ಆದರೆ, ಬಂದ ಫಲಿತಾಂಶ?
ವಿರೋಧಿಗಳು (ಬಿಜೆಪಿ ಮತ್ತು ಕಾಂಗ್ರೆಸ್) ಊಹಿಸಲೂ ಅಸಾಧ್ಯವಾದ ರೀತಿಯಲ್ಲಿ ಫಲಿತಾಂಶ ಹೊರಬಿದ್ದಿತ್ತು. ಮತದಾರ ನೀಡಿದ ಜನಾದೇಶಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಯಾವರೀತಿ ಜರ್ಝರಿತವಾಗಿತ್ತೆಂದರೆ, ಬಿಜೆಪಿ ಕೇವಲ ಮೂರು ಸ್ಥಾನವನ್ನು ಗೆದ್ದರೆ, ಕಾಂಗ್ರೆಸ್ ಅಕೌಂಟೇ ಓಪನ್ ಮಾಡಲು ಆಗಲಿಲ್ಲ.
ಚುನಾವಣೆಗೆ ಕೆಲವು ತಿಂಗಳ ಮುನ್ನ, ಬಿಜೆಪಿ, ಕಿರಣ್ ಬೇಡಿಯನ್ನು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿತು. ಪೊಲೀಸ್ ಅಧಿಕಾರಿಯಾಗಿ ಉತ್ತಮ ಹೆಸರನ್ನು ಹೊಂದಿದ್ದ ಕಿರಣ್ ಬೇಡಿಯಿಂದಾಗಿ, ಪಕ್ಷ ದಡಸೇರಬಹುದು ಎನ್ನುವ ಬಿಜೆಪಿ ಲೆಕ್ಕಾಚಾರವಾಗಿತ್ತು.
ಆದರೆ, ಇದ್ಯಾವುದೂ ವರ್ಕೌಟ್ ಆಗದೇ, ಖುದ್ದು ಕಿರಣ್ ಬೇಡಿಯೇ ಚುನಾವಣೆಯಲ್ಲಿ ಮುಗ್ಗರಿಸಿದರು. ಸೋತದ್ದು ಒಂದೆಡೆಯಾದರೆ, ಕಿರಣ ಬೇಡಿಯವರನ್ನು ಆ ಚುನಾವಣೆ ನೈತಿಕ ಭ್ರಷ್ಟರನ್ನಾಗಿ ಮಾಡಿತು. ಅದಕ್ಕೆ ಕಾರಣ:

2015ರ ದೆಹಲಿ ಅಸೆಂಬ್ಲಿ ಚುನಾವಣೆ
ದೆಹಲಿಯ ಮತದಾರ ಬಹಳ ಪ್ರಬುದ್ದ. 2015ರ ದೆಹಲಿ ಅಸೆಂಬ್ಲಿ ಚುನಾವಣೆಗೆ ಮುನ್ನ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಸೀಟ್ ನಲ್ಲಿ ಕ್ಲೀನ್ ಸ್ವೀಪ್ ಮಾಡಿತ್ತು. ಇದೇ ಗುಂಗಿನಲ್ಲಿ ಅಸೆಂಬ್ಲಿ ಚುನಾವಣೆಯೂ ನಡೆಯಬಹುದು ಎನ್ನುವ ಲೆಕ್ಕಾಚಾರವನ್ನು ಬಿಜೆಪಿ ಕೂಡಾ ಹೊಂದಿತ್ತು. ಚುನಾವಣಾಪೂರ್ವ ಸಮೀಕ್ಷೆಗಳು ಅದನ್ನೇ ಹೇಳಿದ್ದವು.

ಬಲವಾಗಿ ವಿರೋಧಿಸಿದವರು ಕಿರಣ್ ಬೇಡಿ
ಆ ಚುನಾವಣೆಯಲ್ಲಿ ಎಲ್ಲಕ್ಕಿಂತ ಗಮನಿಸಬೇಕಾಗಿದ್ದದ್ದು ಕೇಜ್ರಿವಾಲ್ ಭ್ರಷ್ಟಾಚಾರದ ವಿರುದ್ಧ ಹೋರಾಟದ ಮುಂದಿನ ರೂಪವಾಗಿ ರಾಜಕೀಯ ಪಕ್ಷ ಕಟ್ಟಿದಾಗ ಅದನ್ನು ಬಲವಾಗಿ ವಿರೋಧಿಸಿದವರು ಕಿರಣ್ ಬೇಡಿ. ಅವರಿಗೆ ದೆಹಲಿ ಮುಖ್ಯಮಂತ್ರಿ ಪಟ್ಟದ ಆಮಿಷ ತೋರಿಸಿ ಅವರನ್ನು ನೈತಿಕ ಭ್ರಷ್ಟರನ್ನಾಗಿ ಮಾಡಲಾಯಿತು.

ನಿಧಿ ಸಂಗ್ರಹದಲ್ಲಿ ಹರಿದಾಡುವ ಕಪ್ಪುಹಣ
ಚುನಾವಣಾ ಹಾಗೂ ಪಕ್ಷದ ನಿಧಿ ಸಂಗ್ರಹದಲ್ಲಿ ಹರಿದಾಡುವ ಕಪ್ಪುಹಣದ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ ಎನ್ನುವ ಹೊತ್ತಿನಲ್ಲಿ ಕಿರಣ್ ಬೇಡಿ ಬಿಜೆಪಿ ಸೇರಿದ್ದು, ದೊಡ್ಡ ನೈತಿಕ ಪತನ ಎಂದೇ ವ್ಯಾಖ್ಯಾನಿಸಲಾಗಿತ್ತು. ಚುನಾವಣೆಯ ವೇಳೆ, ಮತದಾರರಲ್ಲಿ ಇದರ ಅರಿವನ್ನು ಮೂಡಿಸಲು ಕೇಜ್ರಿವಾಲ್ ಪಕ್ಷ ಯಶಸ್ವಿಯಾಯಿತು.

ಕೇಜ್ರಿವಾಲ್ ತೋರಿದ ಧೈರ್ಯ
ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ನೆಲೆಗೊಳ್ಳಬೇಕಾದರೆ ಚುನಾವಣ ಖರ್ಚಿಗೆ ಹಾಗೂ ಪಕ್ಷದ ಖರ್ಚಿಗೆ ಕಪ್ಪುಹಣ ಹಾಗೂ ವಾಣಿಜ್ಯೋದ್ಯಮಿಗಳ ಹಣ ಬಳಕೆಯಾಗುವುದು ನಿಲ್ಲಬೇಕು ಎನ್ನುವ ಕೂಗು ಇಂದು, ನಿನ್ನೆಯದಲ್ಲ. ಈ ನಿಟ್ಟಿನಲ್ಲಿ ಕೇಜ್ರಿವಾಲ್ ತೋರಿದ ಧೈರ್ಯ , ದೆಹಲಿ ಮತದಾರರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಯಿತು.

ಕಿರಣ ಬೇಡಿಯನ್ನು ನೈತಿಕ ಭ್ರಷ್ಟರನ್ನಾಗಿ ಮಾಡಿದ ದೆಹಲಿ ಚುನಾವಣೆ
ಈಗ ರಾಜ್ಯಪಾಲರಾಗಿರುವ ಕಿರಣ್ ಬೇಡಿ, ಭ್ರಷ್ಟಾಚಾರ, ಭ್ರಷ್ಟ ವ್ಯವಸ್ಥೆಯ ವಿರುದ್ದ ಹೋರಾಡಿ ಜನಪ್ರಿಯಗೊಂಡಿದ್ದವರು. ಆದರೆ, ದೆಹಲಿಯ ಕಳೆದ ಅಸೆಂಬ್ಲಿ ಚುನಾವಣೆ ಅವರನ್ನು ನೈತಿಕ ಭ್ರಷ್ಟರನ್ನಾಗಿ ಮಾಡಿತು. ಇದು ಯಾವಮಟ್ಟಿಗೆ ಅಂದರೆ, ಕೃಷ್ಣಾನಗರ ಕ್ಷೇತ್ರದಿಂದ ಖುದ್ದು ಪರಾಭಗೊಂಡರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications