ಕಮಲ್ ರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿ : ಹಿಗ್ಗಾಮುಗ್ಗಾ ಟೀಕಿಸಿದ ಬಗ್ಗಾ
ನವದೆಹಲಿ, ಡಿಸೆಂಬರ್ 18 : "ಎಲ್ಲಿಯವರೆಗೆ ಸಿಖ್ಖರನ್ನು 'ಹತ್ಯೆ' ಮಾಡಿದ ಕಮಲ್ ನಾಥ್ ಅವರನ್ನು ಮಧ್ಯ ಪ್ರದೇಶದ ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವುದಿಲ್ಲವೋ, ಅಲ್ಲಿಯವರೆಗೆ ನಾವು ಹೋರಾಟ ನಿಲ್ಲುವುದಿಲ್ಲ" ಎಂದು ಬಿಜೆಪಿಯ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
1984ರ ಸಿಖ್ ವಿರೋಧಿ ದಂಗೆಯಲ್ಲಿ ಹತ್ಯೆಗೀಡಾದ ಮೂರು ಸಾವಿರಕ್ಕೂ ಹೆಚ್ಚು ಸಿಖ್ಖರ ರಕ್ತ ಕಮಲ್ ನಾಥ್ ಅವರಿಗೂ ಅಂಟಿಕೊಂಡಿದೆ. ಅವರನ್ನು ಮಧ್ಯ ಪ್ರದೇಶದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲೇಬೇಕು ಎಂದು ಅವರು ಆಗ್ರಹಿಸಿದ್ದಾರೆ.
2004ರಲ್ಲಿ ಕೂಡ ಕಾಂಗ್ರೆಸ್ ನಾಯಕರಾದ ಸಜ್ಜನ್ ಕುಮಾರ್ ಮತ್ತು ಜಗದೀಶ್ ಟೈಟ್ಲರ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಾಗಿತ್ತು. ಆದರೆ, ನಮ್ಮ ಪ್ರತಿಭಟನೆಗೆ ಹೆದರಿ ನಂತರ ಟಿಕೆಟ್ ವಾಪಸ್ ಪಡೆಯಲಾಯಿತು. ಅವರು ಕಮಲ್ ನಾಥ್ ಅವರನ್ನು ಪಂಜಾಬ್ ಘಟಕದ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದನ್ನು ಕೂಡ ವಾಪಸ್ ಪಡೆಯಬೇಕಾಯಿತು ಎಂದು ತೇಜಿಂದರ್ ಪಾಲ್ ಸಿಂಗ್ ಬಗ್ಗೆ ಹೇಳಿದ್ದಾರೆ.

ಕಮಲ್ ನಾಥ್ ಅವರನ್ನು ಮಧ್ಯ ಪ್ರದೇಶದ ಮುಖ್ಯಮಂತ್ರಿಯನ್ನಾಗಿ ಮಾಡಿ ಸಿಖ್ಖರಿಗೆ ಆಗಿರುವ ಗಾಯದ ಮೇಲೆ ಉಪ್ಪು ಸವರಿದೆ ಕಾಂಗ್ರೆಸ್ ಎಂದು ಅವರು ಆರೋಪಿಸಿದ್ದಾರೆ. ಗುರುದ್ವಾರಾವೊಂದರ ಮುಂದೆ ಕೆಲ ಸಿಖ್ಖರನ್ನು ಸಜೀವವಾಗಿ ದಹಿಸಿಹಾಕುತ್ತಿದ್ದಾಗ ಕಮಲ್ ನಾಥ್ ಅವರು ಜನಜಂಗುಳಿಯಲ್ಲೇ ಇದ್ದರು ಎಂಬುದು ಅವರ ಮೇಲಿರುವ ಆರೋಪ.
BJP's Tajinder Pal Singh Bagga is holding a hunger strike in Delhi demanding removal of Kamal Nath as Madhya Pradesh CM for his alleged role in 1984 Anti-Sikh riots; Bagga says, "until Sikhs' murderer Kamal Nath is removed from this post, our fight will continue" pic.twitter.com/XuV6o0yea1
— ANI (@ANI) 18 December 2018
ಸಿಖ್ ಹತ್ಯಾಕಾಂಡದ ಕಳಂಕ ತಮ್ಮ ಮೇಲಿರುವುದನ್ನು ಕಮಲ್ ನಾಥ್ ಅವರು ನಿರಾಕರಿಸಿದ್ದಾರೆ. ತಮ್ಮ ವಿರುದ್ಧ ಯಾವುದೇ ಎಫ್ಐಆರ್ ದಾಖಲಾಗಿಲ್ಲ ಅಥವಾ ದೂರುಪಟ್ಟಿ ಸಲ್ಲಿಸಲಾಗಿಲ್ಲ. ಇದರ ಹಿಂದೆ ರಾಜಕೀಯ ದುರುದ್ದೇಶವಿರುವುದು ಸ್ಪಷ್ಟ ಎಂದು ಕಮಲ್ ನಾಥ್ ತಿರುಗೇಟು ನೀಡಿದ್ದರು.
1984ರ ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಹಿರಿಯ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಡಿಸೆಂಬರ್ 17ರಂದು ಐತಿಹಾಸಿಕ ತೀರ್ಪು ನೀಡಿದೆ. 1984ರ ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಹತ್ಯೆ ನಡೆದ ನಂತರ, ಕಂಡಕಂಡಲ್ಲಿ ಸಿಖ್ಖರನ್ನು ಕೊಲ್ಲಲು ಸಜ್ಜನ್ ಕುಮಾರ್ ಬೆಂಬಲಿಗರಿಗೆ ಪ್ರೇರೇಪಿಸಿದ್ದರು ಎಂಬುದು ಅವರ ಮೇಲಿರುವ ಸಾಬೀತಾಗಿರುವ ಆರೋಪ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications