ಗರೀಬ್ ರಥ ರೈಲು ನೇಪಥ್ಯಕ್ಕೆ: ಸುದ್ದಿ ಅಲ್ಲಗಳೆದ ರೈಲ್ವೇ ಇಲಾಖೆ
ನವದೆಹಲಿ, ಜುಲೈ 19: ಬಡವರಿಗೆ ಕಡಿಮೆ ಬೆಲೆಯಲ್ಲಿ ಎಸಿ ಪ್ರಯಾಣದ ಸೌಲಭ್ಯ ನೀಡಿದ್ದ ಗರೀಬ್ ರಥ ರೈಲು ಇನ್ನು ನೇಪಥ್ಯಕ್ಕೆ ಸರಿಯಲಿದೆ ಎಂಬ ಮಾಧ್ಯಮ ವರದಿಯನ್ನು ಕೇಂದ್ರ ರೈಲ್ವೇ ಇಲಾಖೆ ತಳ್ಳಿಹಾಕಿದೆ.
ಗರೀಬ್ ರಥವನ್ನು ನಿಲ್ಲಿಸುವ ಯಾವುದೇ ಯೋಜನೆ, ಯೋಚನೆ ಇಲಾಖೆಯ ಮುಂದಿಲ್ಲ ಎಂದು ರೈಲ್ವೇ ಇಲಾಖೆ ಸ್ಪಷ್ಟಪಡಿಸಿದೆ.
ಗರೀಬ್ ರಥ ರೈಲನ್ನು ಸರ್ಕಾರ ಇನ್ನು ಮುಂದೆ ನಿಲ್ಲಿಸಲಿದೆ ಎಂದು ಗುರುವಾರ ಮಾಧ್ಯಮಗಳು ವರದಿ ಮಾಡಿದ್ದವು. ಬಡವರಿಗೆ ಕಡಿಮೆ ಬೆಲೆಯಲ್ಲಿ ಎಸಿ ಕೋಚ್ ಪ್ರಯಾಣ ಸೌಲಭ್ಯ ಒದಗಿಸಿದ್ದ ಗರೀಬ್ ರಥ ಎಕ್ಸ್ ಪ್ರೆಸ್ ರೈಲಿಗೆ ಹೊಸ ಕೋಚುಗಳನ್ನು ನಿರ್ಮಿಸುವುದನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಟ್ರೇನ್ ಅನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆಯೇ ಅಥವಾ ಇದನ್ನೇ ಬೇರೆ ರೀತಿ ಬದಲಾಯಿಸಲಾಗುತ್ತದೆಯೇ ಎಂಬ ಬಗ್ಗೆ ಮಾಹಿತಿ ಲಭ್ಯವಿಲ್ಲ ಎಂದು ವರದಿ ಮಾಡಲಾಗಿತ್ತು.

ಈಗಾಗಲೇ ಕತಗೊಂಡಮ್-ಜಮ್ಮು ಮತ್ತು ಕತಗೊಂಡಮ್-ಕಾನ್ಪುರ ಮಾರ್ಗವಾಗಿ ಚಲಿಸುತ್ತಿದ್ದ ಗರೀಬ್ ರಥ ರೈಲಿನ ಸಂಚಾರವನ್ನು ನಿಲ್ಲಿಸಲಾಗಿದೆ. ಈ ಮಾರ್ಗದಲ್ಲಿ ಎಕ್ಸ್ ಪ್ರೆಸ್ ಟ್ರೇನ್ ಸಂಚಾರ ಆರಂಭಿಸಲಾಗಿದ್ದು, ಇವುಗಳ ಬೆಲೆ ಅಧಿಕವಾಗಿದ್ದು, ಜನಸಾಮಾನ್ಯರಿಗೆ ರೈಲು ಪ್ರಯಾಣವೂ ದುಬಾರಿ ಎನ್ನಿಸಿದೆ. ಈ ಮಾರ್ಗದಲ್ಲಿ ಗರೀಬ್ ರಥ ರೈಲು ಸಂಚಾರವನ್ನು ನಿಲ್ಲಿಸಿದ್ದು, ಈ ವರದಿಗೆ ಮತ್ತಷ್ಟು ಪುಷ್ಠಿ ನೀಡಿತ್ತು.
ಗರೀಬ್ ರಥ ರೈಲುಗಳು 10-14 ವರ್ಷ ಹಳೆಯವಾಗಿದ್ದು, ಸುರಕ್ಷತೆಯ ದೃಷ್ಟಿಯನ್ನು ಯೋಚಿಸಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿತ್ತು.
2006 ರಲ್ಲಿ ಆಗಿನ ಕೇಂದ್ರ ರೈಲ್ವೇ ಸಚಿವರಾಗಿದ್ದ ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಅವರು ಗರೀಬ್ ರಥ್ ರೈಲನ್ನು ಪರಿಚಯಿಸಿದ್ದರು. ಪ್ರಸ್ತುತ ಗರೀಬ್ ರಥದ 26 ಜೊತೆ ಟ್ರೇನುಗಳು ಕಾರ್ಯನಿರ್ವಹಿಸುತ್ತಿವೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications