ಸೇನೆಯ ಏಕೈಕ ಮಹಿಳಾ ರೆಜಿಮೆಂಟ್ ಕಮಾಂಡರ್ ಕ್ಯಾಪ್ಟನ್ ಪ್ರೀತಿ ಚೌಧರಿ
ನವದೆಹಲಿ, ಜನವರಿ 26: 140 ವಾಯು ರಕ್ಷಣಾ ರೆಜಿಮೆಂಟ್ ನ ಸುಧಾರಿತ ಸ್ಚಿಲ್ಕ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಕ್ಯಾಪ್ಟನ್ ಪ್ರೀತಿ ಚೌಧರಿ ಮುನ್ನಡೆಸಿದ್ದಾರೆ.
ಇಂದು ಪಥಸಂಚಲನದಲ್ಲಿ ಭಾಗವಹಿಸಿದ ಏಕೈಕ ಮಹಿಳಾ ರೆಜಿಮೆಂಟ್ ಕಮಾಂಡರ್ ಕ್ಯಾಪ್ಟನ್ ಪ್ರೀತಿ ಚೌಧರಿ ಆಗಿದ್ದಾರೆ. ಸ್ಚಿಲ್ಕ ಶಸ್ತ್ರಾಸ್ತ್ರ ವ್ಯವಸ್ಥೆ ಆಧುನಿಕ ರಾಡಾರ್ ಮತ್ತು ಡಿಜಿಟಲ್ ಅಗ್ನಿ ನಿಯಂತ್ರಣ ಕಂಪ್ಯೂಟರ್ ನ್ನು ಹೊಂದಿದೆ.
ಇಂದು ಮಹಿಳೆಯರು ಕೂಡ ದೇಶದ ಮಿಲಿಟರಿಯ ಮೂರೂ ಪಡೆಗಳಲ್ಲಿ ತಮ್ಮ ಶಕ್ತಿ, ಸಾಮರ್ಥ್ಯ, ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ರಾಜಪಥ್ ನಲ್ಲಿ ನಡೆದ ಪರೇಡ್ ನಲ್ಲಿ ಎನ್ ಸಿಸಿ ಹೆಣ್ಣುಮಕ್ಕಳು ಮಹಾರಾಷ್ಟ್ರದ ಎನ್ ಸಿಸಿ ನಿರ್ದೇಶನಾಲಯದ ಹಿರಿಯ ಅಧೀನ ಅಧಿಕಾರಿ ಸಮೃದ್ಧಿ ಹರ್ಷಲ್ ಸಂತ್ ನೇತೃತ್ವದಲ್ಲಿ ಪಥ ಸಂಚಲನ ಸಾಗಿದರು.

ದೇಶದ ಮೂವರು ಮಹಿಳಾ ಯುದ್ಧ ಪೈಲಟ್ ಗಳಲ್ಲಿ ಒಬ್ಬರಾದ ಲೆಫ್ಟಿನೆಂಟ್ ಭಾವನಾ ಕಾಂತ್ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜಪಥ್ ನಲ್ಲಿ ನಡೆದ ಭಾರತೀಯ ವಾಯುಪಡೆಯ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಾಕ್ಷಿಯಾದರು.
ಭಾರತೀಯ ವಾಯುಪಡೆ ಹಗುರ ಯುದ್ಧವಿಮಾನ, ಹಗುರ ಯುದ್ಧ ಹೆಲಿಕಾಪ್ಟರ್ ಮತ್ತು ಸುಕೊಯ್-30 ಯುದ್ಧ ವಿಮಾನಗಳ ಪ್ರದರ್ಶನವನ್ನು ಏರ್ಪಡಿಸಿತ್ತು.
72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ
ಬಿಹಾರದ ದರ್ಬಾಂಗ್ ನವರಾದ ಭಾವನಾ ಕಾಂತ್, ಬೆಗುಸರೈಯಲ್ಲಿ ಬೆಳೆದಿದ್ದರು. ಅಲ್ಲಿ ಅವರ ತಂದೆ ಐಒಸಿಎಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಬಾರೌನಿ ರಿಫೈನರಿ ಡಿಎವಿ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿ, ಬೆಂಗಳೂರಿನ ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ನಿಂದ ವೈದ್ಯಕೀಯ ಎಲೆಕ್ಟ್ರಾನಿಕ್ಸ್ನಲ್ಲಿ ಎಂಜಿನಿಯರಿಂಗ್ ಪದವಿ ಪಡೆದರು.
ವಿಮಾನ ಹಾರಾಟ ನಡೆಸುವುದು ಮಾತ್ರವಲ್ಲದೆ ಬ್ಯಾಡ್ಮಿಂಟನ್ ಆಡುವುದು, ವಾಲಿಬಾಲ್, ಸಾಹಸ ಕ್ರೀಡೆಗಳು, ಫೋಟೋಗ್ರಫಿ, ಅಡುಗೆ ಮಾಡುವುದು, ಈಜು ಮತ್ತು ಪ್ರವಾಸ ಹೋಗುವ ಹವ್ಯಾಸವನ್ನು ಭಾವನ ಕಾಂತ್ ಹೊಂದಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications