ನವಭಾರತ ನಿರ್ಮಾಣಕ್ಕೆ ಕರೆಕೊಟ್ಟ ರಾಷ್ಟ್ರಪತಿ ರಾಮನಾಥ್ ಕೋವಿಂದ್
ನವದೆಹಲಿ, ಜನವರಿ.25: ಭಾರತದಲ್ಲಿ 71ನೇ ಗಣರಾಜ್ಯೋತ್ಸವ ಸಂಭ್ರಮದ ಹಿನ್ನೆಲೆ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾತನಾಡಿದ್ದಾರೆ. ಸಂವಿಧಾನದ ಹಬ್ಬವನ್ನು ಆಚರಿಸಲು ಸರ್ವರಿಗೂ ಮನಪೂರ್ವಕ ಸ್ವಾಗತ ಕೋರಿದ್ದಾರೆ. ದೇಶ-ವಿದೇಶದಲ್ಲಿರುವ ಎಲ್ಲ ಭಾರತೀಯ ಪ್ರಜೆಗಳಿಗೆ ರಾಷ್ಟ್ರಪತಿಗಳು ಗಣರಾಜ್ಯೋತ್ಸವದ ಶುಭಾಷಯ ತಿಳಿಸಿದ್ದಾರೆ.
ಭಾರತವು ಪ್ರಜಾಪ್ರಭುತ್ವದ ದೇಶವಾಗಿದ್ದು, ಇಲ್ಲಿನ ಸಂವಿಧಾನವು ಪ್ರಜೆಗಳಿಗೆ ಸಾಕಷ್ಟು ಮೂಲಭೂತ ಹಕ್ಕುಗಳನ್ನು ನೀಡಿದೆ. ಇದರ ಜೊತೆಗೆ ಸಂವಿಧಾನದ ವ್ಯಾಪ್ತಿಯಲ್ಲಿ ಪ್ರಜೆಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕಿದೆ.
ಸ್ವಾತಂತ್ರ್ಯ, ಸಮಾನತೆ, ಪ್ರಜಾಸತ್ತಾತ್ಮಕ ನ್ಯಾಯ ಹಾಗೂ ಸಹೋದರತ್ವದ ಬಗ್ಗೆ ರಾಮನಾಥ್ ಕೋವಿಂದ್ ಮಾತನಾಡಿದರು. ಪ್ರಜಾಪ್ರಭುತ್ವ ದೇಶದಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಅವಿಭಾಜ್ಯ ಅಂಗಗಳಾಗಿ ಕಾರ್ಯ ನಿರ್ವಹಿಸುತ್ತಿವೆ.

ನವಭಾರತ ನಿರ್ಮಾಣಕ್ಕೆ ರಾಷ್ಟ್ರಪತಿ ಕರೆ:
ನವಭಾರತ ನಿರ್ಮಾಣ ಮಾಡುವಲ್ಲಿ ಯುವಕರು ಮುಂದೆ ಬರಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದರು. ದೇಶವನ್ನು ಮುನ್ನೆಡೆಸಲು ತುರ್ತಾಗಿ ನವಭಾರತ ನಿರ್ಮಾಣ ಮಾಡುವ ಅಗತ್ಯವಿದೆ. ದೇಶದ ಯುವಕರು ಮನಸು ಮಾಡಿದರೆ, ಈ ಕಾರ್ಯ ಸಾಧ್ಯವಾಗುತ್ತದೆ. ಯುವಕರೆಲ್ಲ ಒಗ್ಗೂಡಿ ಕೆಲಸ ಮಾಡಿದ್ದಲ್ಲಿ ನವಭಾರತ ನಿರ್ಮಾಣದ ಕನಸು ನನಸಾಗುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದರು.
ಆರೋಗ್ಯ ಮತ್ತು ಶಿಕ್ಷಣವು ಉತ್ತಮ ಸರ್ಕಾರಕ್ಕೆ ಭದ್ರಬುನಾದಿಯಾಗಿದೆ. ಕಳೆದ ಏಳು ದಶಕಗಳಲ್ಲಿ ಆರೋಗ್ಯ ಮತ್ತು ಶಿಕ್ಷಣ ರಂಗದಲ್ಲಿ ದೇಶವು ಸಾಕಷ್ಟು ಮುಂದುವರಿದಿದೆ ಎಂದು ರಾಮನಾಥ್ ಕೋವಿಂದ್ ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications