ಶ್ರಮಿಕ್ ರೈಲುಗಳಿಗೂ ಕೆಂಪು ಬಾವುಟ ತೋರಿದರಾ ಮಮತಾ ಬ್ಯಾನರ್ಜಿ?
ನವದೆಹಲಿ, ಮೇ.14: ನೊವೆಲ್ ಕೊರೊನಾ ವೈರಸ್ ಮತ್ತು ಭಾರತ ಲಾಕ್ ಡೌನ್ ನಡುವೆ ತವರು ಸೇರಲು ಹಾತೊರೆಯುತ್ತಿರುವ ವಲಸೆ ಕಾರ್ಮಿಕರನ್ನು ಗೂಡು ಸೇರಸಲು ಭಾರತೀಯ ರೈಲ್ವೆ ಇಲಾಖೆಯು ಶ್ರಮಿಕ್ ರೈಲುಗಳ ಸಂಚಾರಕ್ಕೆ ಅನುಮತಿ ನೀಡಿದೆ.
ದೇಶದಲ್ಲೇ ಇರುವ ಕೆಲವು ರಾಜ್ಯಗಳು ಶ್ರಮಿಕ್ ರೈಲುಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದು ಮನಸಿಗೆ ತುಂಬಾ ನೋವು ತರಿಸಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಬೇಸರ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳ ಸರ್ಕಾರವು ಮೊದಲ ಎರಡು ಶ್ರಮಿಕ್ ರೈಲುಗಳ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಿದೆ. ಕೇಂದ್ರ ಗೃಹ ಸಚಿವಾಲಯವು ಪತ್ರ ಬರೆದ ನಂತರ ಹೆಚ್ಚುವರಿಯಾಗಿ ಎಂಟು ಶ್ರಮಿಕ್ ರೈಲುಗಳ ಪ್ರವೇಶಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅನುಮತಿ ನೀಡಿದ್ದರು ಎಂದು ಗೋಯೆಲ್ ತಿಳಿಸಿದ್ದಾರೆ.

ಐದು ರೈಲುಗಳ ರಾಜ್ಯ ಪ್ರವೇಶಕ್ಕೆ ಅನುಮತಿ
ಕೇಂದ್ರ ಗೃಹ ಸಚಿವಾಲಯವು ಪತ್ರ ಬರೆದ ನಂತರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಎಂಟು ಶ್ರಮಿಕ್ ರೈಲುಗಳ ಪ್ರವೇಶಕ್ಕೆ ರಾಜ್ಯದಲ್ಲಿ ಅನುಮತಿ ನೀಡಿದ್ದರು. ಆದರೆ ಗುರುವಾರ ಮಧ್ಯಾಹ್ನದವರೆಗೂ ಐದು ವಿಶೇಷ ಶ್ರಮಿಕ್ ರೈಲುಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದ ಮೂರು ರೈಲುಗಳಿದೆ ನಿರ್ಬಂಧ ವಿಧಿಸಿದ್ದಾರೆ ಎಂದು ಪಿಯೂಷ್ ಗೋಯೆಲ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪಿಯೂಶ್ ಗೋಯೆಲ್ ಮನವಿ
ಭಾರತ ಲಾಕ್ ಡೌನ್ ನಡುವೆ ಗೂಡು ಬಿಟ್ಟ ಹಕ್ಕಿಯಂತೆ ಆಗಿರುವ ವಲಸೆ ಕಾರ್ಮಿಕರನ್ನು ಪಶ್ಚಿಮ ಬಂಗಾಳಕ್ಕೆ ವಾಪಸ್ ಕಳುಹಿಸುವ ನಿಟ್ಟಿನಲ್ಲಿ ಕಾರ್ಯವನ್ನು ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರವು ಇದಕ್ಕೆ ಸಹಕಾರ ನೀಡಬೇಕು ಎಂದು ಸಚಿವ ಪಿಯೂಶ್ ಗೋಯೆಲ್ ಮನವಿ ಮಾಡಿಕೊಂಡಿದ್ದಾರೆ.

"50 ರೈಲುಗಳ ಪ್ರವೇಶಕ್ಕೆ ಅನುಮತಿ ನೀಡಿ"
ಪಶ್ಚಿಮ ಬಂಗಾಳ ಮೂಲದ ವಲಸೆ ಕಾರ್ಮಿಕರನ್ನು ಮರಳಿ ಕಳುಹಿಸಲು ಶ್ರಮಿಕ್ ರೈಲುಗಳ ವ್ಯವಸ್ಥೆ ಕಲ್ಪಿಸಲಾಗಿದೆ. 30 ದಿನಗಳ ಕಾಲ ಒಟ್ಟು 105 ರೈಲುಗಳು ಸಂಚರಿಸಲು ಪಶ್ಚಿಮ ಬಂಗಾಳ ಸರ್ಕಾರವು ಅನುಮತಿ ನೀಡಬೇಕು ಎಂದು ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಮನವಿ ಮಾಡಿಕೊಂಡಿದ್ದಾರೆ.

ನಾಲ್ಕು ರಾಜ್ಯಗಳಿಂಗ ಶ್ರಮಿಕ್ ರೈಲಿಗೆ ನಿರ್ಬಂಧ
ಇನ್ನು, ಪಶ್ಚಿಮ ಬಂಗಾಳ ಸರ್ಕಾರವಷ್ಟೇ ಅಲ್ಲ. ಛತ್ತೀಸ್ ಗಢ್, ಜಾರ್ಖಂಡ್, ರಾಜಸ್ಥಾನ್ ಸರ್ಕಾರಗಳಿಂದಲೂ ಶ್ರಮಿಕ್ ರೈಲುಗಳ ಪ್ರವೇಶಕ್ಕೆ ವಿರೋಧ ವ್ಯಕ್ತವಾಗಿದೆ. ಕಾರ್ಮಿಕರನ್ನು ವಾಪಸ್ ಕರೆಸಿಕೊಳ್ಳಲು ಹೀಗೆ ಹಿಂದುಮುಂದು ನೋಡುವುದೇಕೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಪ್ರಶ್ನೆ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications