ದೆಹಲಿ ಗಲಭೆ: ಆಸೀಫ್, ಕಲಿತಾ, ನತಾಶಾ ತಿಹಾರ್ ಜೈಲಿನಿಂದ ಬಿಡುಗಡೆ
ನವದೆಹಲಿ, ಜೂ. 17: ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಬಂಧನದಲ್ಲಿದ್ದ ಪಿಂಜ್ರಾ ತೋಡ್ ಕಾರ್ಯಕರ್ತೆಯರಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಹಾಗೂ ಜಾಮಿಯಾ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾಗೆ ಜಾಮೀನು ಲಭಿಸಿದ ಎರಡು ದಿನಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಳೆದ ವರ್ಷ (2020) ಮೇ ತಿಂಗಳಲ್ಲಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಈ ಮೂವರು ಬಂಧನಕ್ಕೆ ಒಳಗಾಗಿದ್ದು ದೆಹಲಿ ಹೈಕೋರ್ಟ್ ಮೂವರಿಗೂ 2021ರ ಜೂನ್ 15ರಂದು ಜಾಮೀನು ನೀಡಿದೆ.
ಆದರೆ ಪೊಲೀಸರು ವಿಳಾಸ ಮತ್ತು ಶ್ಯೂರಿಟಿ ಪರಿಶೀಲನೆ ಮಾಡಬೇಕಾದ ಹಿನ್ನೆಲೆ ಮೂವರನ್ನು ತಕ್ಷಣ ಬಿಡುಗಡೆ ಮಾಡಲು ಕಡಕಡ್ಡೂಮಾ ಸೆಷನ್ಸ್ ನ್ಯಾಯಾಲಯ ನಿರಾಕರಿಸಿತ್ತು. ತನಿಖಾಧಿಕಾರಿ ಬುಧವಾರ ಹೆಚ್ಚಿನ ಸಮಯಾವಕಾಶ ಕೋರಿದ್ದರು. ಈ ಕಾರಣದಿಂದಾಗಿ ಬುಧವಾರವೂ ಈ ಮೂವರು ಬಿಡುಗಡೆಯಾಗಿರಲಿಲ್ಲ.

ಈ ನಡುವೆ ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತನ್ಹಾಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಮತ್ತೊಂದೆಡೆ, ದೆಹಲಿ ಹೈಕೋರ್ಟ್ ಆದೇಶದಂತೆ ಜೈಲಿನಿಂದ ಶೀಘ್ರ ಬಿಡುಗಡೆಯಾಗಬೇಕೆಂದು ಮೂವರು ವಿದ್ಯಾರ್ಥಿಗಳು ಮೇಲ್ಮನವಿ ಸಲ್ಲಿಸಿದ್ದು ಈ ತುರ್ತು ಮೇಲ್ಮನವಿಯನ್ನು ಗುರುವಾರ ಆಲಿಸಲಾಗಿದೆ.
ದೇವಾಂಗನಾ ಕಲಿತಾ, ನತಾಶಾ ನರ್ವಾಲ್ ಹಾಗೂ ಆಸಿಫ್ ಇಕ್ಬಾಲ್ ತನ್ಹಾ ಕಡಕಡ್ಡೂಮಾ ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಕದ ತಟ್ಟಿದ್ದರು. ''ಹೈಕೋರ್ಟ್ ಜಾಮೀನು ನೀಡಿದ ನಂತರವೂ ಸರ್ಕಾರವು ಬಿಡುಗಡೆಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ,'' ಎಂದು ಆರೋಪಿಸಿದ್ದರು.
ಈ ಹಿನ್ನೆಲೆ ದೆಹಲಿ ಹೈಕೋರ್ಟ್, ''ಗುರುವಾರ ಮಧ್ಯಾಹ್ನ 12 ಗಂಟೆಗೆ ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸಬೇಕು. ಆ ಬಳಿಕ ಹೈಕೋರ್ಟ್ ಮಧ್ಯಾಹ್ನ 3.30 ಕ್ಕೆ ವಿಚಾರಣೆ ನಡೆಸಲಿದೆ,'' ಎಂದು ಗುರುವಾರ ಬೆಳಿಗ್ಗೆ ತಿಳಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ತನ್ಹಾ, ಕಲಿತಾ, ನತಾಶಾ ಬಿಡುಗಡೆಗೊಳಿಸಿ ಕಡ್ಕಡ್ಡೂಮಾ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶದಂತೆ ಸಂಜೆಯ ವೇಳೆಗೆ ಮೂವರು ವಿದ್ಯಾರ್ಥಿಗಳನ್ನು ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮೂವರು ಆರೋಪಿಗಳಿಗೆ 50,000 ರೂ. ವೈಯಕ್ತಿಕ ಬಾಂಡ್ಗಳ ಜಾಮೀನು ಮೇರೆಗೆ ಬಿಡುಗಡೆಯಾಗಿದ್ದಾರೆ.
ಹಾಗೆಯೇ ಜಾಮೀನು ನೀಡಿದ ದೆಹಲಿ ಹೈಕೋರ್ಟ್ ನಿವಾಸ ಬದಲಾವಣೆಯ ಸಂದರ್ಭದಲ್ಲಿ ಪೊಲೀಸ್ ಠಾಣಾ ಸಿಬ್ಬಂದಿಗೆ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದೆ. ಇದಲ್ಲದೆ, ಪ್ರಕರಣದ ಯಾವುದೇ ಸಾಕ್ಷಿದಾರರೊಂದಿಗೆ ಸಂಪರ್ಕವನ್ನು ಮಾಡದಂತೆ ಅಥವಾ ಸಾಕ್ಷ್ಯಗಳ ಹಾಳು ಮಾಡದಂತೆ ಆರೋಪಿಗಳಿಗೆ ಆದೇಶಿಸಿದೆ. ಜಾಮೀನಿನ ಮೇಲೆ ಹೊರಗಿರುವಾಗ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆಯೂ ಆರೋಪಿಗಳಿಗೆ ಆದೇಶಿಸಿದೆ
(ಒನ್ಇಂಡಿಯಾ ಸುದ್ದಿ)
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications