ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಗಲಭೆ: ಆಸೀಫ್‌, ಕಲಿತಾ, ನತಾಶಾ ತಿಹಾರ್‌ ಜೈಲಿನಿಂದ ಬಿಡುಗಡೆ

|
Google Oneindia Kannada News

ನವದೆಹಲಿ, ಜೂ. 17: ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಬಂಧನದಲ್ಲಿದ್ದ ಪಿಂಜ್ರಾ ತೋಡ್ ಕಾರ್ಯಕರ್ತೆಯರಾದ ದೇವಾಂಗನಾ ಕಲಿತಾ, ನತಾಶಾ ನರ್ವಾಲ್‌ ಹಾಗೂ ಜಾಮಿಯಾ ವಿದ್ಯಾರ್ಥಿ ಆಸಿಫ್‌ ಇಕ್ಬಾಲ್ ತನ್ಹಾಗೆ ಜಾಮೀನು ಲಭಿಸಿದ ಎರಡು ದಿನಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕಳೆದ ವರ್ಷ (2020) ಮೇ ತಿಂಗಳಲ್ಲಿ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಈ ಮೂವರು ಬಂಧನಕ್ಕೆ ಒಳಗಾಗಿದ್ದು ದೆಹಲಿ ಹೈಕೋರ್ಟ್‌ ಮೂವರಿಗೂ 2021ರ ಜೂನ್‌ 15ರಂದು ಜಾಮೀನು ನೀಡಿದೆ.

ದೆಹಲಿ ಗಲಭೆ: ಆಸೀಫ್‌, ಕಲಿತಾ, ನತಾಶಾ ಬಿಡುಗಡೆಗೆ ಕೋರ್ಟ್ ಆದೇಶ ದೆಹಲಿ ಗಲಭೆ: ಆಸೀಫ್‌, ಕಲಿತಾ, ನತಾಶಾ ಬಿಡುಗಡೆಗೆ ಕೋರ್ಟ್ ಆದೇಶ

ಆದರೆ ಪೊಲೀಸರು ವಿಳಾಸ ಮತ್ತು ಶ್ಯೂರಿಟಿ ಪರಿಶೀಲನೆ ಮಾಡಬೇಕಾದ ಹಿನ್ನೆಲೆ ಮೂವರನ್ನು ತಕ್ಷಣ ಬಿಡುಗಡೆ ಮಾಡಲು ಕಡಕಡ್‌ಡೂಮಾ ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿತ್ತು. ತನಿಖಾಧಿಕಾರಿ ಬುಧವಾರ ಹೆಚ್ಚಿನ ಸಮಯಾವಕಾಶ ಕೋರಿದ್ದರು. ಈ ಕಾರಣದಿಂದಾಗಿ ಬುಧವಾರವೂ ಈ ಮೂವರು ಬಿಡುಗಡೆಯಾಗಿರಲಿಲ್ಲ.

Delhi riots accused Natasha, Devangana, Asif Released From Tihar jail

ಈ ನಡುವೆ ದೇವಾಂಗನಾ ಕಲಿತಾ, ನತಾಶಾ ನರ್ವಾಲ್‌ ಹಾಗೂ ಆಸಿಫ್‌ ಇಕ್ಬಾಲ್ ತನ್ಹಾಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಮತ್ತೊಂದೆಡೆ, ದೆಹಲಿ ಹೈಕೋರ್ಟ್ ಆದೇಶದಂತೆ ಜೈಲಿನಿಂದ ಶೀಘ್ರ ಬಿಡುಗಡೆಯಾಗಬೇಕೆಂದು ಮೂವರು ವಿದ್ಯಾರ್ಥಿಗಳು ಮೇಲ್ಮನವಿ ಸಲ್ಲಿಸಿದ್ದು ಈ ತುರ್ತು ಮೇಲ್ಮನವಿಯನ್ನು ಗುರುವಾರ ಆಲಿಸಲಾಗಿದೆ.

ದೇವಾಂಗನಾ ಕಲಿತಾ, ನತಾಶಾ ನರ್ವಾಲ್‌ ಹಾಗೂ ಆಸಿಫ್‌ ಇಕ್ಬಾಲ್ ತನ್ಹಾ ಕಡಕಡ್‌ಡೂಮಾ ಸೆಷನ್ಸ್‌ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಕದ ತಟ್ಟಿದ್ದರು. ''ಹೈಕೋರ್ಟ್ ಜಾಮೀನು ನೀಡಿದ ನಂತರವೂ ಸರ್ಕಾರವು ಬಿಡುಗಡೆಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ,'' ಎಂದು ಆರೋಪಿಸಿದ್ದರು.

ಈ ಹಿನ್ನೆಲೆ ದೆಹಲಿ ಹೈಕೋರ್ಟ್, ''ಗುರುವಾರ ಮಧ್ಯಾಹ್ನ 12 ಗಂಟೆಗೆ ವಿಚಾರಣಾ ನ್ಯಾಯಾಲಯ ವಿಚಾರಣೆ ನಡೆಸಬೇಕು. ಆ ಬಳಿಕ ಹೈಕೋರ್ಟ್ ಮಧ್ಯಾಹ್ನ 3.30 ಕ್ಕೆ ವಿಚಾರಣೆ ನಡೆಸಲಿದೆ,'' ಎಂದು ಗುರುವಾರ ಬೆಳಿಗ್ಗೆ ತಿಳಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ತನ್ಹಾ, ಕಲಿತಾ, ನತಾಶಾ ಬಿಡುಗಡೆಗೊಳಿಸಿ ಕಡ್‌ಕಡ್‌ಡೂಮಾ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶದಂತೆ ಸಂಜೆಯ ವೇಳೆಗೆ ಮೂವರು ವಿದ್ಯಾರ್ಥಿಗಳನ್ನು ತಿಹಾರ್‌ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮೂವರು ಆರೋಪಿಗಳಿಗೆ 50,000 ರೂ. ವೈಯಕ್ತಿಕ ಬಾಂಡ್‌ಗಳ ಜಾಮೀನು ಮೇರೆಗೆ ಬಿಡುಗಡೆಯಾಗಿದ್ದಾರೆ.

ದೆಹಲಿ ಗಲಭೆ: ದೇವಾಂಗನಾ, ನತಾಶಾ, ಆಸಿಫ್‌ಗೆ ಹೈಕೋರ್ಟ್ ಜಾಮೀನು ಮಂಜೂರು ದೆಹಲಿ ಗಲಭೆ: ದೇವಾಂಗನಾ, ನತಾಶಾ, ಆಸಿಫ್‌ಗೆ ಹೈಕೋರ್ಟ್ ಜಾಮೀನು ಮಂಜೂರು

ಹಾಗೆಯೇ ಜಾಮೀನು ನೀಡಿದ ದೆಹಲಿ ಹೈಕೋರ್ಟ್ ನಿವಾಸ ಬದಲಾವಣೆಯ ಸಂದರ್ಭದಲ್ಲಿ ಪೊಲೀಸ್‌ ಠಾಣಾ ಸಿಬ್ಬಂದಿಗೆ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದೆ. ಇದಲ್ಲದೆ, ಪ್ರಕರಣದ ಯಾವುದೇ ಸಾಕ್ಷಿದಾರರೊಂದಿಗೆ ಸಂಪರ್ಕವನ್ನು ಮಾಡದಂತೆ ಅಥವಾ ಸಾಕ್ಷ್ಯಗಳ ಹಾಳು ಮಾಡದಂತೆ ಆರೋಪಿಗಳಿಗೆ ಆದೇಶಿಸಿದೆ. ಜಾಮೀನಿನ ಮೇಲೆ ಹೊರಗಿರುವಾಗ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆಯೂ ಆರೋಪಿಗಳಿಗೆ ಆದೇಶಿಸಿದೆ

(ಒನ್‌ಇಂಡಿಯಾ ಸುದ್ದಿ)

English summary
Delhi riots accused Natasha Narwal, Devangana Kalita, Asif Iqbal Tanha Released From Tihar jail After two days Bail Granted From Delhi High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X