ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೈಲ ಬೆಲೆ ವಿಷಯದಲ್ಲಿ ಸರ್ಕಾರ ಧರ್ಮ ಸಂಕಟದಲ್ಲಿದೆ; ನಿರ್ಮಲಾ ಸೀತಾರಾಮನ್

|
Google Oneindia Kannada News

ನವದೆಹಲಿ, ಮಾರ್ಚ್ 05: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆ ಕಂಡಿದ್ದು, ಈ ವಿಷಯ ಸರ್ಕಾರಕ್ಕೆ ಧರ್ಮ ಸಂಕಟವಾಗಿದೆ ಎಂದಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.

ನವ ದೆಹಲಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಿಸುವ ಸಾಧ್ಯತೆ ಕುರಿತು ಪ್ರಶ್ನಿಸಿದಾಗ ಈ ರೀತಿ ಉತ್ತರಿಸಿದರು.

ಭಾರತದಲ್ಲಿರುವುದೇ ನನ್ನ ಅದೃಷ್ಟ ಎಂದ ನಿರ್ಮಲಾ ಸೀತಾರಾಮನ್ಭಾರತದಲ್ಲಿರುವುದೇ ನನ್ನ ಅದೃಷ್ಟ ಎಂದ ನಿರ್ಮಲಾ ಸೀತಾರಾಮನ್

ಸಾರ್ವಜನಿಕರಿಗೆ ತೈಲ ಬೆಲೆ ಏರಿಕೆ ಹೊರೆಯಾಗಿದೆ ಎಂಬುದನ್ನು ಒಪ್ಪಿಕೊಂಡ ಅವರು, ಈ ಹೊರೆಯನ್ನು ಇಳಿಸಲು ಕೇಂದ್ರ, ರಾಜ್ಯ ಸರ್ಕಾರಗಳ ನಡುವೆ ಮಾತುಕತೆ ನಡೆಯಬೇಕಿದೆ ಎಂದು ಹೇಳಿದರು.

Rising Fuel Prices Became Dharmasankat For Central Government Said Nirmala Sitharaman

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಗ್ರಾಹಕರ ಅವಶ್ಯಕತೆ ನಮಗೆ ಅರ್ಥವಾಗಿದೆ. ಆದರೆ ಈಗ ಸರ್ಕಾರಕ್ಕೆ ಭೀಕರ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಏನೇನು ತೆರಿಗೆ ಸಂಗ್ರಹಿಸುತ್ತದೋ ಅದರಲ್ಲಿ 41%ರಷ್ಟು ರಾಜ್ಯಗಳಿಗೆ ಹೋಗುತ್ತದೆ ಎಂದು ತಿಳಿಸಿದರು.

ದೇಶದಲ್ಲಿ ತೈಲ ಬೆಲೆ ಏರಿಕೆ ಸಾರ್ವಜನಿಕರು ಹಾಗೂ ಸರ್ಕಾರವನ್ನು ಚಿಂತೆಗೀಡು ಮಾಡಿದೆ. ಮುಂಬರುವ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಬಿಜೆಪಿ ವಿರುದ್ಧ ಈ ವಿಷಯವನ್ನೇ ಅಸ್ತ್ರ ಮಾಡಿಕೊಳ್ಳುವುದಿಲ್ಲ ಎನ್ನುವ ನಂಬಿಕೆ ಇದೆ ಎಂದರು.

ಕೇಂದ್ರ ಸರ್ಕಾರ ಮಾತ್ರವಲ್ಲ, ರಾಜ್ಯ ಸರ್ಕಾರಗಳೂ ತೈಲ ಬೆಲೆ ಕುರಿತು ಚಿಂತಿಸಬೇಕಿದೆ. ರಾಜ್ಯಗಳಿಗೂ ಆದಾಯವಿದೆಯಲ್ಲವೇ ಎಂದು ಪ್ರಶ್ನಿಸಿದರು.

English summary
Rising petrol and diesel prices had become a 'dharmasankat' for BJP government, said Union finance minister Nirmala Sitharaman,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X