ಉಸಿರುಗಟ್ಟಿಸುತ್ತಿದ್ದರೂ ರೋಹಿತ್ ಬಿಡಿಸಿಕೊಳ್ಳುವ ಪ್ರಯತ್ನವನ್ನೇ ಮಾಡಲಿಲ್ಲ ಏಕೆ?
ಬೆಂಗಳೂರು, ಏ.25: ತಾನು ನಂಬಿದ್ದ ಪತ್ನಿಯೇ ತನ್ನನ್ನು ದಿಂಬಿನಿಂದ ಉಸಿರುಗಟ್ಟಿಸಿ ಸಾಯಿಸುತ್ತಿದ್ದರೂ ರೋಹಿತ್ ತಿವಾರಿ ಬಿಡಿಸಿಕೊಳ್ಳಲು ಪ್ರಯತ್ನವನ್ನೇ ಮಾಡಲಿಲ್ಲ.
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ಡಿ ತಿವಾರಿ ಪುತ್ರ ರೋಹಿತ್ ತಿವಾರಿ ಆತನ ಪತ್ನಿಯಿಂದಲೇ ಕೊಲೆಯಾಗಿದ್ದಾರೆ. ಹಾಗಾದರೆ ದಿಂಬಿನಿಂದ ಆತನನ್ನು ಉಸಿರುಗಟ್ಟಿಸುತ್ತಿರುವಾಗ ಆತ ಬಿಡಿಸಿಕೊಳ್ಳುವ ಪ್ರಯತ್ನವನ್ನೇ ಮಾಡಿರಲಿಲ್ಲ ಎನ್ನುವ ವಿಷಯವೂ ಬೆಳಕಿಗೆ ಬಂದಿದೆ.
ಹೌದು ಅದಕ್ಕೆ ಕಾರಣವೂ ಇದೆ. ಆತ ಯಥೇಚ್ಛವಾಗಿ ಮದ್ಯಪಾನ ಮಾಡಿದ್ದ ಕಾರಣ ತನ್ನ ಸಾವಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ನವದೆಹಲಿಗೆ ತೆರಳಿ ಇನ್ನೇನು ಬಂದಿದ್ದರು. ಬರುವಾಗಲೇ ಕಂಠಪೂರ್ತಿ ಕುಡಿದಿದ್ದ ಕಾರಣ ಮನೆಯ ಮೆಟ್ಟಿಲನ್ನೂ ಗೋಡೆಯ ಸಹಾಯದಿಂದಲೇ ಹತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಪತಿಯನ್ನು ಕೊಂಡು 90 ನಿಮಿಷದಲ್ಲಿ ಸಾಕ್ಷ್ಯ ನಾಶಪಡಿಸಿದ್ದಳು
ಕೇವಲ ಒಂದು ವಾರದೊಳಗೆ ಪೊಲೀಸರು ಕೊಲೆಗಾರರನ್ನು ಪತ್ತೆ ಹಚ್ಚಿದ್ದಾರೆ. ಕೊಲೆ ಮಾಡಿ ಕೇವಲ 90 ನಿಮಿಷಗಳಲ್ಲಿ ಎಲ್ಲಾ ದಾಖಲೆಗಳನ್ನು ಅಪೂರ್ವ ತಿವಾರಿ ನಾಶಪಡಿಸಿದ್ದರು ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
ಆಕೆಯನ್ನು ವಿಚಾರಣೆಗೆ ಒಳಪಡಿಸಿರುವ ವೇಳೆ ಈ ಮಾಹಿತಿಯನ್ನು ಅಪೂರ್ವ ನೀಡಿದ್ದಾಗಿ ಹೇಳಿದ್ದಾರೆ.ಫಾರೆನ್ಸಿಕ್ ರಿಪೋರ್ಟ್ ಪ್ರಕಾರ ಅಪೂರ್ವ ಅವರನ್ನು ಬಂಧಿಸಲಾಗಿದೆ. ಬಳಿಕ ಹೌದು ತಾನೇ ಪತಿಯನ್ನು ಕೊಲೆ ಮಾಡಿದ್ದು ವೈವಾಹಿಕ ಜೀವನದಲ್ಲಿ ಸಂತೃಪ್ತಿ ಇಲ್ಲದಿರುವುದೇ ಕೊಲೆಗೆ ಕಾರಣ ಎಂದು ಒಪ್ಪಿಕೊಂಡಿದ್ದರು.

ಪ್ರಕರಣ ಏನು? ರೋಹಿತ್ ತಿವಾರಿ ಕೊಲೆಗೆ ಕಾರಣವೇನು?
ರೋಹಿತ್ ತಿವಾರಿ ಅವರು ನವದೆಹಲಿಯಿಂದ ಏ.16ರಂದು ಮನೆಗೆ ಮರಳಿದ್ದರು. ಮನೆಗೆ ಬರುವಾಗ ಮದ್ಯಪಾನ ಮಾಡಿದ್ದು, ನಿಲ್ಲಲಾಗದ ಪರಿಸ್ಥಿತಿಯಲ್ಲಿದ್ದರು. ಬಳಿಕ ಗೋಡೆಯನ್ನು ಹಿಡಿದುಕೊಂಡೇ ಒಳಗೆ ಪ್ರವೇಶಿಸಿದ್ದರು.ಅದೇ ದಿನ ಅವರ ಪತ್ನಿ ಅಪೂರ್ವ ತಿವಾರಿ ರೋಹಿತ್ ಅವರ ಕೋಣೆಗೆ ಹೋಗಿ ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ ಹೃದಯಾಘಾತವೆಂದು ಸುಳ್ಳು ಹೇಳಿದ್ದರು.

ಪತ್ನಿಯೇ ಕೊಲೆಗಾರ್ತಿ
ಕೊಲೆಯಾದ ಒಂದು ವಾರದೊಳಗೆ ಪತ್ನಿಯೇ ಕೊಲೆಗಾರ್ತಿ ಎನ್ನುವುದನ್ನು ಪೊಲೀಸರು ಸಾಭೀತುಪಡಿಸಿದ್ದಾರೆ. ಮೊದಲು ಹೃದಯಾಘಾವೆಂದು ಬಿಂಬಿಸಲಾಗಿತ್ತು. ವೈದ್ಯಕೀಯ ವರದಿ ಬಳಿಕ ಇದು ಸಹಜ ಸಾವಲ್ಲ ಕೊಲೆ ಎನ್ನುವುದು ಬಹಿರಂಗಗೊಂಡಿತ್ತು. ಬಳಿಕ ಅಪೂರ್ವಳನ್ನು ತನಿಖೆಗೆಗೊಳಪಡಿಸಿದಾಗ ತನ್ನ ಪತ್ನಿಯನ್ನು ಕೊಂದಿದ್ದು ನಾನೇ ಎಂದು ಒಪ್ಪಿಕೊಂಡಿದ್ದಾಳೆ. ವೈವಾಹಿಕ ಜೀವನದಲ್ಲಿ ಸಂತೃಪ್ತಿ ಇಲ್ಲದಿರುವುದೇ ಕೊಲೆಗೆ ಕಾರಣ ಎಂದು ಹೇಳಿದ್ದಾರೆ.

ಕೊಲೆ ಮಾಡುವುದಕ್ಕೆ ಪ್ರಮುಖ ಕಾರಣ?
ಅಪೂರ್ವ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ ತಾನೇ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ. ಕೊಲೆ ಮಾಡಲು ಸಾಂಸಾರಿಕ ಜೀವನದಲ್ಲಿಅತೃಪ್ತಿಯೇ ಕಾರಣ ಎಂದು ಹೇಳಿದ್ದಾರೆ. ರೋಹಿತ್ಗೆ ಕುಡಿತದ ಚಟವಿತ್ತು. ಅದು ಅಪೂರ್ವ ಅವರಿಗೆ ಇಷ್ಟವಿರಲಿಲ್ಲ ಒಟ್ಟಿನಲ್ಲಿ ಅವರನ್ನು ಕೊಲೆ ಮಾಡಲು ಮೊದಲಿಂದಲೂ ಅಪೂರ್ವ ಹೊಂಚು ಹಾಕಿದ್ದಳು ಎನ್ನುವುದು ಬಹಿರಂಗಗೊಂಡಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications