ನೆಹರೂ,ಗಾಂಧಿ ಕುರಿತು ಅನುರಾಗ್ ಹೇಳಿಕೆ: ಕ್ಷಮೆಗೆ ಕಾಂಗ್ರೆಸ್ ಆಗ್ರಹ
ನವದೆಹಲಿ, ಸೆಪ್ಟೆಂಬರ್ 18: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಹಾಗೂ ಗಾಂಧಿ ಪರಿವಾರದ ಕುರಿತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಲೋಕಸಭೆಯಲ್ಲಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಕ್ಷಮೆ ಕೋರುವಂತೆ ಆಗ್ರಹಿಸಿದೆ.
ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ 1948ರಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಸ್ಥಾಪಿಸಿದ್ದರು. ಆದರೆ ಇದುವರೆಗೂ ಅದರ ನೋಂದಣಿಯಾಗಿಲ್ಲ. ಕಾಂಗ್ರೆಸ್ನವರು ಕೇವಲ ಗಾಂಧಿ ಪರಿವಾರದ ಲಾಭಕ್ಕಾಗಿ ಕೆಲಸ ಮಾಡುತ್ತಾರೆ ಎಂದು ಅನುರಾಗ್ ಠಾಕೂರ್ ಗಂಭೀರ ಆರೋಪ ಮಾಡಿದ್ದರು.
ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಅನುರಾಗ್ ಠಾಕೂರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಎಲ್ಲ ವಿಷಯದಲ್ಲೂ ನೆಹರೂ-ಗಾಂಧಿ ಪರಿವಾರವನ್ನು ಎಳೆದು ತರುವುದು ನಿಮಗೆ ರೂಢಿಯಾಗಿದೆ. ನಾವು ಪಿಎಂ ಕೇರ್ಸ್ ವಿಷಯದಲ್ಲಿ ಪ್ರಧಾನಿ ಹೆಸರನ್ನು ಪ್ರಸ್ತಾಪಿಸಿಯೇ ಇಲ್ಲ ಎಂದು ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಪಿಎಂ ಕೇರ್ಸ್ ಬೆಂಬಲಿಸಿ ಮಾತನಾಡುತ್ತಿದ್ದ ಅನುರಾಗ್ ಠಾಕೂರ್, ಸುಪ್ರೀಂಕೋರ್ಟ್ನಿಂದ ಹಿಡಿದು ಸಮಸ್ತ ದೇಶ ಪಿಎಂ ಕೇರ್ಸ್ ಪರವಾಗಿದ್ದರೆ ಕಾಂಗ್ರೆಸ್ ಮಾತ್ರ ಈ ಕುರಿತು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಹರಿಹಾಯ್ದರು.
ಠಾಕೂರ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಅಪ್ರಬುದ್ಧವಾಗಿ ಮಾತನಾಡುವ ಹಿಮಾಚಲದ ಈ ಹುಡುಗ ಯಾರು ಎಂದು ಪ್ರಶ್ನಿಸಿದರು.
ಪಿಎಂ ಕೇರ್ಸ್ ವಿಷಯದಲ್ಲಿ ಅನವಶ್ಯಕವಾಗಿ ನೆಹರೂ-ಗಾಂಧಿ ಪರಿವಾರದ ಹೆಸರನ್ನು ಎಳೆದು ತಂದ ಅನುರಾಗ್ ಠಾಕೂರ್ ಅವರು ಈ ಕೂಡಲೇ ಕ್ಷಮೆ ಕೋರಬೇಕೆಂದು ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದರು.
ಅಲ್ಲದೇ ಅನುರಾಗ್ ಠಾಕೂರ್ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಸಂಸದರು ಪ್ರತಿಭಟನೆ ಆರಂಭಿಸಿದರು. ವಾಕ್ಸಮರ ತೀವ್ರವಾದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸದನವನ್ನು ಮುಂದೂಡಿದರು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications