1,000 ಕೋಟಿ ಅಕ್ರಮ ಹಣ ವರ್ಗಾವಣೆ ಕಿಂಗ್ಪಿನ್: ಯಾರು ಈ ಚೀನಾದ ಪ್ರಜೆ?
ನವದೆಹಲಿ, ಆಗಸ್ಟ್ 19: ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಹವಾಲ ದಂಧೆ ನಡೆಸುತ್ತಿದ್ದ ಚೀನಾದ ಪ್ರಜೆ ಲುವೋ ಸಾಂಗ್ ಅಲಿಯಾಸ್ ಚಾರ್ಲಿ ಪೆಂಗ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಮನಿ ಲಾಂಡರಿಂಗ್ ಕೇಸ್ ದಾಖಲಿಸಿತ್ತು.
ಚೀನಾದ ಪ್ರಜೆಯಾಗಿರುವ 42 ವರ್ಷದ ಲುವೋ ಸಾಂಗ್ ಅಲಿಯಾಸ್ ಚಾರ್ಲಿ ಪೆಂಗ್ ಭಾರತೀಯ ಪಾಸ್ಪೋರ್ಟ್ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆತನು ಚೀನಾಕ್ಕೆ ಮತ್ತು ಅಲ್ಲಿಂದ ಹವಾಲಾ ಹಣವನ್ನು ವರ್ಗಾವಣೆ ಮಾಡಲು ಬಳಸುತ್ತಿದ್ದ ಶಾಮ್ ಕಂಪನಿಗಳ ವೆಬ್ ಅನ್ನು ರಚಿಸಿದ್ದಾರೆ ಎಂಬ ಆರೋಪವಿದೆ.
ಈತನ ಗುಂಪು ಕಳೆದ 3 ವರ್ಷಗಳಿಂದ ಈ ದಂಧೆಯನ್ನು ನಡೆಸುತ್ತಿದೆ. ವೈದ್ಯಕೀಯ ಮತ್ತು ಎಲೆಕ್ಟ್ರಾನಿಕ್ ಸರಕುಗಳ ಆಮದು ಮತ್ತು ರಫ್ತು ಮತ್ತು ಇತರ ವಸ್ತುಗಳಲ್ಲೂ ಆತ ಭಾಗಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಭಾರತೀಯ ಮಹಿಳೆಯನ್ನೇ ಮದುವೆಯಾದ ನಂತರ ಮಣಿಪುರದಿಂದ ನಕಲಿ ಪಾಸ್ಪೋರ್ಟ್ ಪಡೆದಿದ್ದಾನೆ ಎನ್ನಲಾಗಿದೆ. ಜೊತೆಗೆ ನಕಲಿ ಆಧಾರ್ ಕಾರ್ಡ್ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾನೆ. ದೆಹಲಿಯಲ್ಲಿ ಕೆಲವು ಟಿಬೆಟಿಯನ್ನರಿಗೆ ಲಂಚ ನೀಡಿದ್ದಾರೆ ಮತ್ತು ಅವರ ಮೂಲಕ ಕೆಲಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇಷ್ಟಲ್ಲದೆ ಈತ ಗೂಢಚರ್ಯೆಗಾಗಿ ರಹಸ್ಯ ಶಿಬಿರವನ್ನು ದೆಹಲಿಯ ಮಜ್ನು ಕಾ ತಿಲಾದಲ್ಲಿ ನಿರ್ಮಿಸಲಾಗಿದೆ. ಈತ ಲಂಚ ನೀಡುವ ಮೂಲಕ ಟಿಬೆಟಿಯನ್ ಧಾರ್ಮಿಕ ಮುಖಂಡ ದಲೈ ಲಾಮಾ ಮತ್ತು ಅವರ ಸಹಚರರ ಬಗ್ಗೆ ಮಾಹಿತಿ ಸಂಗ್ರಹಿಸುವಲ್ಲಿ ತೊಡಗಿದ್ದರು.
ಇನ್ನೊಂದು ವಿಷಯ ಏನೆಂದರೆ, 2018 ರಲ್ಲಿ ದೆಹಲಿ ಪೊಲೀಸರು ನಕಲಿ ಪಾಸ್ಪೋರ್ಟ್ ಅಡಿಯಲ್ಲಿ ಈತನನ್ನು ಅರೆಸ್ಟ್ ಮಾಡಿದ್ದರು. ಆದರೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅವನನ್ನು ಬಿಡುಗಡೆ ಮಾಡಲಾಯಿತು. ಇದೀಗ ಹಳೆ ಕೇಸ್ ಆಧರಿಸಿ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಚಾರ್ಲಿ ಪೆಂಗ್ ಅಲಿಯಾಸ್ ಲೌ ಸಾಂಗ್ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications