ಮಂದಿರ ನಿರ್ಮಾಣಕ್ಕೆ ಜತೆಯಾಗಿ ಕೆಲಸ ಮಾಡೋಣ: ಮೋಹನ್ ಭಾಗ್ವತ್
ನವದೆಹಲಿ, ನವೆಂಬರ್ 9: ನಾವು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಲಿದ್ದೇವೆ. ಹಲವು ದಶಕಗಳ ಕಾಲ ಈ ಪ್ರಕರಣ ನಡೆದರೂ ಅಂತಿಮವಾಗಿ ಸರಿಯಾದ ತೀರ್ಪು ಪ್ರಕಟವಾಗಿದೆ. ಇದನ್ನು ನಾವು ಸೋಲು ಅಥವಾ ಗೆಲುವು ಎಂದು ನೋಡಬಾರದು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಸರ್ಕಾರ ಮತ್ತು ಪ್ರತಿಯೊಬ್ಬರ ಪ್ರಯತ್ನವನ್ನು ನಾವು ಸ್ವಾಗತಿಸುತ್ತೇವೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದರು.
ಅಯೋಧ್ಯಾ ವಿವಾದಕ್ಕೆ ಸಂಬಂಧಿಸಿದಂತೆ ಶನಿವಾರ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ನ್ಯಾಯಾಲಯ ಏನು ಹೇಳಿದೆಯೋ ಅದನ್ನು ಪರಿಶೀಲಿಸುತ್ತೇವೆ. ವಿವಾದ ಅಂತ್ಯವಾಗುವಂತಹ ಕ್ರಮವನ್ನು ಸರ್ಕಾರ ತೆಗೆದುಕೊಳ್ಳಬೇಕು ಎಂದು ಅಪೇಕ್ಷಿಸುತ್ತೇವೆ. ಮುಂದೆ ಏನೇನು ಮಾಡಬೇಕೋ ಅವೆಲ್ಲವೂ ಸರ್ಕಾರದ ವಿವೇಚನೆಗೆ ಬಿಟ್ಟಿದ್ದು. ನಾವು ರಾಮಮಂದಿರ ನಿರ್ಮಾಣವನ್ನು ಬಯಸಿದ್ದೇವೆ ಎಂದು ತಿಳಿಸಿದರು.
ಮುಸ್ಲಿಂ ಅರ್ಜಿದಾರರ ಕಡೆಗೆ ಭೂಮಿ ಒದಗಿಸುವಂತೆ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ಅದನ್ನು ಸರ್ಕಾರ ನಿರ್ಧರಿಸಲಿದೆ. ಕೋರ್ಟ್ನ ಆಚೆಗೆ ವಿವಾದ ಬಗೆಹರಿಸಿಕೊಳ್ಳಲು ಅನೇಕ ಪ್ರಯತ್ನ ನಡೆಸಲಾಗಿತ್ತು. ಆದರೆ ಅವು ಸಫಲವಾಗಿರಲಿಲ್ಲ ಎಂದರು.

ಧರ್ಮಗಳಾಚೆ ನಾವೆಲ್ಲರೂ ಭಾರತದ ನಾಗರಿಕರು. ಇಲ್ಲಿ ಯಾವುದೇ ಹಿಂದೂ-ಮುಸ್ಲಿಮರು ಇಲ್ಲ. ಎಲ್ಲರೂ ಭಾರತೀಯರು. ನಾವು ಒಂದಾಗಿ ಬದುಕಬೇಕು. ನಾವು ಈ ಹಿಂದೆ ಏನು ನಡೆದಿತ್ತು ಎನ್ನುವುದು ಮರೆಯಬಾರದು. ಆದರೆ ಅವುಗಳನ್ನು ಹಿಂದಿಕ್ಕಿ ವೈಭವೋಪೇತ ಮಂದಿರ ನಿರ್ಮಾಣ ಮಾಡುವಲ್ಲಿ ಜತೆಯಾಗಿ ಕೆಲಸ ಮಾಡೋಣ ಎಂದು ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications