ಬಿಜೆಪಿ ಸೋಲಿಗೆ ಬೇಡಿಯತ್ತ ಕೈ ತೋರಿದ ಆರ್ಎಸ್ಎಸ್
ನವದೆಹಲಿ, ಫೆ. 17: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲುಂಡಿರುವುದಕ್ಕೆ ಕಿರಣ್ ಬೇಡಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮಾಡಿದ್ದೇ ಕಾರಣ ಎಂಬ ಆರೋಪ ಬಲವಾಗುತ್ತಿದೆ. ಆದರೆ, ಈ ಮಾತನ್ನು ಬಿಜೆಪಿ ಬಹಿರಂಗವಾಗಿ ಹೇಳಿಕೊಳ್ಳಲು ಹಿಂಜರಿದಿದ್ದರೂ ಆರ್ಎಸ್ಎಸ್ ತನ್ನ ಮುಖವಾಣಿ ಪಾಂಚಜನ್ಯ ಪಾಕ್ಷಿಕ ಪತ್ರಿಕೆಯಲ್ಲಿ ನೇರವಾಗಿ ಹೇಳಿದೆ.
ಕಿರಣ್ ಬೇಡಿ ಅವರನ್ನು ಆಯ್ಕೆ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರನ್ನು ಬಿಜೆಪಿ ಮುಖಂಡರು ನಿರ್ಲಕ್ಷಿಸಿದ್ದಾರೆ ಎಂದು ಪರೋಕ್ಷವಾಗಿ ಟೀಕಿಸಿದೆ. ಮೋದಿ ಅಲೆಯನ್ನು ಅತಿಯಾಗಿ ಅವಲಂಬಿಸಿದ್ದು ಕೂಡ ಸೋಲಿಗೆ ಕಾರಣ. ಕಿರಣ್ ಬೇಡಿ ಆಯ್ಕೆ ಮಾಡಿ ಸಂಘಟನೆ, ಯೋಜನೆ ಹಾಗೂ ಕೆಲಸಗಾರರ ಸೆಂಟಿಮೆಂಟ್ಗಳನ್ನು ಗೌರವಿಸಲಿಲ್ಲ ಎಂದು ಮನೋಜ್ ವರ್ಮಾ ಬರೆದಿದ್ದಾರೆ. [ಕಿರಣ್ ಬೇಡಿ ಬಹಿರಂಗ ಪತ್ರ]

ಹಿತೇಶ್ ಕುಮಾರ್ ಅವರು, ಬಿಜೆಪಿಯು ಸಂಘ ಪರಿವಾರದ ತತ್ವ ಸಿದ್ಧಾಂತ ಹಾಗೂ ಪಕ್ಷದ ಕಾರ್ಯಕರ್ತರನ್ನು ಬಿಟ್ಟು ಬೇರೆ ಬಂಡವಾಳ ಹೊಂದಿದೆಯೇ ಎಂಬುದನ್ನು ದೃಢಪಡಿಸಬೇಕು. ಪಕ್ಷದ ಕೆಲಸಗಾರರ ಆಸಕ್ತಿಯಿಂದಲೇ ಬಿಜೆಪಿ ಎಂಬ ರಾಷ್ಟ್ರೀಯ ಪಕ್ಷ ಮತಗಳನ್ನು ಗಳಿಸುತ್ತಿದೆ ಎಂದು ಹೇಳಿದ್ದಾರೆ. [ಸೋತ ಬೇಡಿ ಸಿಡಿಸಿದ ಬಾಂಬ್]
ಆದರೆ, ಪಾಂಚಜನ್ಯ ವರದಿ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸದ ಬಿಜೆಪಿ ಸೋಲಿಗೆ ಸಾಮೂಹಿಕ ಹೊಣೆಗಾರಿಕೆ ಹೊತ್ತಿದೆ. ಆದರೆ, ಈಚೆಗಷ್ಟೇ ನಡೆದ ಪಕ್ಷದ ಮುಖಂಡ ಸಭೆಗೆ ಕಿರಣ್ ಬೇಡಿ ಅವರನ್ನು ಆಹ್ವಾನಿಸಿರಲಿಲ್ಲ. ಅಲ್ಲಿಯೂ ಕಿರಣ್ ಬೇಡಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನೇಮಿಸಿದ್ದು ಹಾಗೂ ಸ್ಥಳೀಯ ಕಾರ್ಯಕರ್ತರನ್ನು ಕಡೆಗಾಣಿಸಿದ್ದು ಕಾರಣ ಎಂಬ ಮಾತು ಕೇಳಿಬಂದಿತ್ತು. [ಬಿಜೆಪಿ ಮಾಡಿದ ತಪ್ಪೇನು?]
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications