ಸಂಪರ್ಕವೇ ರಾಜ್ಯದ ಅಭಿವೃದ್ಧಿಯ ಮೂಲ ಮಂತ್ರ : ದೇಶಪಾಂಡೆ
ನವದೆಹಲಿ, ಫೆಬ್ರವರಿ 5 : ಉತ್ತರ ಕನ್ನಡ ಜಿಲ್ಲೆಯಲ್ಲಿ ನೌಕಾನೆಲೆಯ ಸಹಯೋಗದೊಂದಿಗೆ ನಾಗರೀಕ ವಿಮಾನ ನಿಲ್ದಾಣ ಅಭಿವೃದ್ಧಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಡಿ ಜಿಲ್ಲೆಯ ವಿವಿಧ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳುವ ಬಗ್ಗೆ ಕಂದಾಯ ಸಚಿವರಾದ ಆರ್.ವಿ. ದೇಶಪಾಂಡೆರವರು ಕೇಂದ್ರ ನಾಗರೀಕ ವಿಮಾನಯಾನ ಸಚಿವರು ಹಾಗೂ ಭೂಸಾರಿಗೆ ಸಚಿವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿರವರನ್ನು ಭೇಟಿ ಮಾಡಿದ ದೇಶಪಾಂಡೆರವರು, ಗೋವಾ-ಕರ್ನಾಟಕ ಗಡಿಯಿಂದ ಕುಂದಾಪುರದವರೆವಿಗೂ ಇರುವ ರಾಷ್ಟ್ರೀಯ ಹೆದ್ದಾರಿ-66ರ ಯೋಜನೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕೈಗೊಳ್ಳಬೇಕಾದ ರಸ್ತೆ ಕೆಳಸೇತುವೆ, ಮೇಲ್ಸೇತುವೆ, ಸರ್ವಿಸ್ ರಸ್ತೆ, ಇತ್ಯಾದಿ, ಕಾಮಗಾರಿಗಳ ಪಟ್ಟಿಯೊಂದಿಗೆ ಮನವಿ ಸಲ್ಲಿಸಿದರು. ಈ ಕಾಮಗಾರಿಗಳ ತುರ್ತು ಅಗತ್ಯತೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದರು.
ಕೇಂದ್ರ ವಾಣಿಜ್ಯ ಮತ್ತು ನಾಗರೀಕ ವಿಮಾನಯಾನ ಸಚಿವರಾದ ಸುರೇಶ ಪಿ. ಪ್ರಭುರವರನ್ನು ಭೇಟಿ ಮಾಡಿ ನೌಕಾನೆಲೆಯ ಸಹಯೋಗದೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಗರೀಕ ವಿಮಾನ ನಿಲ್ದಾಣದ ಅಭಿವೃದ್ಧಿ ಬಗ್ಗೆಯೂ ವಿವರವಾಗಿ ಚರ್ಚಿಸಿದರು.

ಬೆಳಗಾವಿ ವಿಮಾನ ನಿಲ್ದಾಣದಿಂದ ಉಡಾನ್-3 ಯೋಜನೆಯಡಿ ವಿವಿಧ ಸಂಸ್ಥೆಗಳ ವಿಮಾನ ಹಾರಾಟ ಮತ್ತು ಕಲಬುರಗಿ ವಿಮಾನ ನಿಲ್ದಾಣ ಮತ್ತು ಬೀದರ್ ವಿಮಾನ ನಿಲ್ದಾಣಗಳಿಂದ ವಿಮಾನಗಳ ಶೀಘ್ರ ಕಾರ್ಯಾಚರಣೆಗೆ ಸಂಬಂಧಿಸಿದಂತೆಯೂ ಸುದೀರ್ಘ ಮಾತುಕತೆ ನಡೆಸಿದರು. ಈ ಎಲ್ಲಾ ಕ್ರಮಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕಾದ ಅನಿವಾರ್ಯತೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ದೇಶಪಾಂಡೆ, ಉತ್ತಮ ಸಂಪರ್ಕವೇ ಅಭಿವೃದ್ಧಿಯ ಮೂಲ ಮಂತ್ರ, ಹಾಗಾಗಿ ಕಾರವಾರದಲ್ಲಿ ನಾಗರೀಕ ವಿಮಾನ ನಿಲ್ದಾಣ ಕಾರ್ಯಾಚರಣೆ ಕೈಗೊಳ್ಳುವುದರಿಂದ ಮುಖ್ಯವಾಗಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ, ವಾಣಿಜ್ಯೋದ್ಯಮ, ಉದ್ಯೋಗ ಸೃಷ್ಟಿ, ಗುಡಿ ಕೈಗಾರಿಕೆ ಸೇರಿದಂತೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ವರದಾನವಾಗಿ ಪರಿಣಮಿಸುವುದರ ಜೊತೆಗೆ ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಕರ್ಯದೊಂದಿಗೆ ತುರ್ತು ವೈದ್ಯಕೀಯ ಸೌಲಭ್ಯ ಪಡೆಯಲು ಸಹ ನೆರವಾಗುತ್ತದೆ ಎಂದರು.
ಕಲಬುರಗಿ, ಬೆಳಗಾವಿ ಹಾಗೂ ಬೀದರ್ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯಿಂದ ಅಕ್ಕಪಕ್ಕದ ರಾಜ್ಯಗಳ ಕೇಂದ್ರ ಸ್ಥಾನದೊಂದಿಗೆ ನೇರ ಸಂಪರ್ಕ ದೊರೆಯುವುದರಿಂದ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಚಾಲನೆ ದೊರೆತು ರಾಜ್ಯದ ಚಿತ್ರಣವೇ ಬದಲಾಗಲಿದೆ ಎಂದು ತಿಳಿಸಿದರು.
ಮೇಲ್ಕಂಡ ಮನವಿಗಳಿಗೆ ಸಂಬಂಧಪಟ್ಟ ಕೇಂದ್ರ ಸಚಿವರುಗಳು ಧನಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಆದ್ಯತೆಯ ಮೇಲೆ ಕ್ರಮ ಕೈಗೊಂಡು ಜಿಲ್ಲೆಯ ಹಾಗೂ ರಾಜ್ಯದ ಅಭಿವೃದ್ಧಿಗೆ ಸಾಧ್ಯವಾದಷ್ಟು ನೆರವನ್ನು ಒದಗಿಸುವುದಾಗಿ ಭರವಸೆ ನೀಡಿರುತ್ತಾರೆ ಎಂದು ಈ ಸಂದರ್ಭದಲ್ಲಿ ದೇಶಪಾಂಡೆ ತಿಳಿಸಿದರು.
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications