ಕೇಂದ್ರ ಸರ್ಕಾರದಿಂದ ಹೊಸ ಇಮ್ಯುನಿಟಿ ಬೂಸ್ಟರ್ ಉತ್ಪನ್ನಗಳ ಬಿಡುಗಡೆ
ನವದೆಹಲಿ, ಸೆಪ್ಟೆಂಬರ್ 3: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಜನರಲ್ಲಿನ ಪ್ರತಿರಕ್ಷಣಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಹೊಸ ಇಮ್ಯುನಿಟಿ ಬೂಸ್ಟರ್ ಉತ್ಪನ್ನಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.
ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪ್ರಿಯೋಜನಾ (ಪಿಎಂಬಿಜೆಪಿ) ಅಡಿಯಲ್ಲಿ ಎಂಟು ಪೋಷಕಾಂಶಯುತ- ಪ್ರತಿರಕ್ಷಣಾ ವೃದ್ಧಿ ಉತ್ಪನ್ನಗಳನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಗುರುವಾರ ಬಿಡುಗಡೆ ಮಾಡಿದರು.
ಈ ಸಾಮರ್ಥ್ಯ ವೃದ್ಧಿಯ ಉತ್ಪನ್ನಗಳನ್ನು ದೇಶದಾದ್ಯಂತ ಜನೌಷಧಿ ಕೇಂದ್ರಗಳಲ್ಲಿ ಮಾರಾಟ ಮಾಡಲಾಗುತ್ತದೆ. ಹೊಸ ಪೌಷ್ಟಿಕಾಂಶಯುಕ್ತ ಉತ್ಪನ್ನಗಳು ಕೊರೊನಾ ವೈರಸ್ ಸೋಂಕಿನ ದೃಷ್ಟಿಯಿಂದ ಮಹತ್ವದ್ದಾಗಿವೆ. ಈ ಉತ್ಪನ್ನಗಳು ಜನರಲ್ಲಿ ವೈರಸ್ ಎದುರಿಸುವ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಸದಾನಂದ ಗೌಡ ತಿಳಿಸಿದರು.

ಈ ಉತ್ಪನ್ನಗಳು ಮಾರುಕಟ್ಟೆಯಲ್ಲಿನ ಇತರೆ ಉತ್ಪನ್ನಗಳಿಗಿಂತ ಅಧಿಕ ಗುಣಮಟ್ಟ ಮತ್ತು ಮಾರುಕಟ್ಟೆ ದರಕ್ಕಿಂತ ಶೇ 26ರಷ್ಟು ಅಗ್ಗವಾಗಿದೆ. ಜನೌಷಧಿ ಕೇಂದ್ರಗಳ ವ್ಯಾಪಕ ಜಾಲದ ಮೂಲಕ ಈ ಇಮ್ಯುನಿಟಿ ವೃದ್ಧಿಸುವ ಪ್ರೊಟೀನ್ ಉತ್ಪನ್ನಗಳು ಹೆಚ್ಚಿನ ಜನರಿಗೆ ತಲುಪಲಿದ್ದು, ಜನರ ಆರೋಗ್ಯ ಉತ್ತಮಗೊಳ್ಳಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಜನರ ಒಟ್ಟಾರೆ ಆರೋಗ್ಯ ಮತ್ತು ಪೌಷಿಕತೆಯ ಸ್ಥಿತಿಯನ್ನು ಸುಧಾರಿಸಲು ಪ್ರೊಟೀನ್ ಸಪ್ಲಿಮೆಂಟ್ಗಳು, ಧಾನ್ಯ ಆಧಾರಿತ ಪೌಷ್ಟಿಕ ಪೇಯಗಳು, ಇಮ್ಯನಿಟಿ ಬೂಸ್ಟರ್ಗಳು ಮುಂತಾದ ಪೌಷ್ಟಿಕಾಂಶ ಉತ್ಪನ್ನಗಳನ್ನು ಸರ್ಕಾರ ಒದಗಿಸುತ್ತಿದೆ ಎಂದು ತಿಳಿಸಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications