ಗೋಡ್ಸೆಯನ್ನು ಹೊಗಳಿದ ಪ್ರಗ್ಯಾ ಸಿಂಗ್ಗೆ ಪಾಠ ಕಲಿಸಿದ ಬಿಜೆಪಿ
ನವದೆಹಲಿ, ನವೆಂಬರ್ 28: ರಕ್ಷಣಾ ಸಂಸದೀಯ ಸಮಾಲೋಚನಾ ಸಮಿತಿಯಿಂದ ಸಂಸದೆ ಪ್ರಗ್ಯಾ ಸಿಂಗ್ ಅವರನ್ನು ಕೈಬಿಡಲಾಗಿದೆ.
ಸಂಸತ್ ಅಧಿವೇಶನದಲ್ಲಿ ಗಾಂಧ ಹಂತಕ ನಾಥೂತಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದ ಪ್ರಗ್ಯಾ ಸಿಂಗ್ ಅವರನ್ನು ರಕ್ಷಣಾ ಸಂಸದೀಯ ಸಮಾಲೋಚನೆ ಸಮಿತಿಯಿಂದ ತೆಗೆದುಹಾಕಲಾಗಿದೆ.
ಪ್ರಗ್ಯಾ ಸಿಂಗ್ ಅವರ ಹೇಳಿಕೆಗೆ ವಿರೊಧಪಕ್ಷಗಳ ಸೇರಿದಂತೆ ದೇಶಾದ್ಯಾಂತ ವಿರೋಧ ವ್ಯಕ್ತವಾಗಿದೆ. ಸಂಸತ್ ಸಭೆಯಲ್ಲಿ ಗೋಡ್ಸೆಯನ್ನು ಹೊಗಳಿದ ಅವರ ನಡೆಗೆ ಬಿಜೆಪಿ ಪಕ್ಷ ಕೂಡ ಸಿಟ್ಟಾಗಿದೆ. ಇದರ ಪರಿಣಾಮವಾಗಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನ ಸಮಿತಿಯಿಂದ ವಜಾಗೊಳಿಸಲಾಗಿದೆ.

ಸೆ.21ರಂದು ಮಲೆಗಾಂವ್ ಸ್ಪೋಟದ ಆರೋಪಿಯಾಗಿದ್ದ ಭೋಪಾಲ್ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ 21 ಜನರ ಸಂಸದರ ಈ ಸಮಿತಿಗೆ ನೇಮಕ ಮಾಡಲಾಗಿತ್ತು.
ಇನ್ನು ಅವರ ಹೇಳಿಕೆ ವಿರೋಧಿಸಿರುವ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ, 'ಠಾಕೂರ್ ಹೇಳಿಕೆ ಖಂಡನೀಯ. ಬಿಜೆಪಿ ಈ ರೀತಿಯ ಸಿದ್ಧಾಂತ ಅಥವಾ ಹೇಳಿಕೆಗಳನ್ನು ಎಂದು ಬೆಂಬಲಿಸುವುದಿಲ್ಲ' ಎಂದಿದ್ದಾರೆ.
ಗಾಂಧಿಯನ್ನು ಹತ್ಯೆಗೈದ ಹಂತಕನನ್ನು ಭಯೋತ್ಪಾದಕರು ಮಾತ್ರ ದೇಶಭಕ್ತ ಎಂದು ಹೇಳಲು ಸಾಧ್ಯ ಎಂದು ರಾಹುಲ್ ಗಾಂಧಿ ಟ್ವಿಟ್ಟರ್ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಗಾಂಧಿ ಕೊಂದ ಗೋಡ್ಸೆಯನ್ನು ಹೊಗಳಿದ ಪ್ರಗ್ಯಾರನ್ನು ಸದನದಿಂದ ತಕ್ಷಣವೇ ವಜಾಗೊಳಿಸಬೇಕು ಎನ್ನುವ ಒತ್ತಡ ಕೇಳಿಬಂದಿತ್ತು. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೇವಲ ರಕ್ಷಣಾ ಸಮಿತಿಯಿಂದ ಮಾತ್ರವಲ್ಲ ಪ್ರಗ್ಯಾ ಠಾಕೂರ್ ಅವರನ್ನು ಸಂಸದೀಯ ಸಭೆಯಿಂದಲೂ ಕೂಡ ಹೊರಕ್ಕೆ ಹಾಕಲಾಗಿದೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications