ನಟ ಸೈಫ್ ಅಲಿಗೆ 'ಪದ್ಮಶ್ರೀ' ಕಳೆದುಕೊಳ್ಳುವ ಭೀತಿ!
ನವದೆಹಲಿ, ಮಾ.16: ಮುಂಬೈನ ಹೋಟೆಲ್ ವೊಂದರಲ್ಲಿ ವಿದೇಶಿ ಪ್ರಜೆಯೊಬ್ಬರಿಗೆ ಗೂಸಾ ಕೊಟ್ಟ ತಪ್ಪಿಗೆ ನಟ ಸೈಫ್ ಅಲಿ ಖಾನ್ ಅವರಿಗೆ ನೀಡಲಾಗಿರುವ ಪದ್ಮ ಶ್ರೀ ಪ್ರಶಸ್ತಿಯನ್ನು ಹಿಂಪಡೆಯಲು ಎನ್ ಡಿಎ ಸರ್ಕಾರ ಮುಂದಾಗಿದೆ ಎಂಬ ವರದಿ ಬಂದಿದೆ.
ಹೋಟೆಲ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶರ್ಮಿಳಾ ಠಾಗೋರ್ ಹಾಗೂ ನವಾಬ್ ಪಟೌಡಿ ಅವರ ಪುತ್ರ ಸೈಫ್ ಅಲಿ ಖಾನ್ ಅವರ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿ ಮುಂಬೈ ಕೋರ್ಟೀಗೆ ಸಲ್ಲಿಸಿದ್ದಾರೆ. ಇದೇ ವಿಷಯವನ್ನು ಆಧಾರವಾಗಿಟ್ಟುಕೊಂಡು ಆರ್ ಟಿಐ ಕಾರ್ಯಕರ್ತರೊಬ್ಬರು ಪದ್ಮಶ್ರೀ ಹಿಂಪಡೆಯಬಾರದೇಕೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. [ಸೈಫ್ ಅಲಿ ಖಾನ್ ಮೇಲೆ ಚಾರ್ಚ್ ಶೀಟ್]

ಆರ್ ಟಿಐ ಅರ್ಜಿ ನಂತರ ಪ್ರಕರಣ ವರದಿಯನ್ನು ತ್ವರಿತವಾಗಿ ನೀಡುವಂತೆ ಮುಂಬೈ ಪೊಲೀಸರನ್ನು ಕೇಂದ್ರ ಗೃಹ ಸಚಿವಾಲಯ ಕೇಳಿದೆ. ಈ ವರದಿ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ.
ಆರ್ ಟಿಐ ಕಾರ್ಯಕರ್ತ ಸುಭಾಷ್ ಅಗರವಾಲ್ ಎಂಬುವರು ಆಗಸ್ಟ್ 20, 2014ರಂದು ಗೃಹ ಸಚಿವಾಲಯಕ್ಕೆ ಬರೆದಿರುವ ಪತ್ರ ಸಂಖ್ಯೆ 1/3112014 ನಲ್ಲಿ ಸೈಫ್ ಅಲಿ ಖಾನ್ಗೆ ನೀಡಿರುವ ಪದ್ಮ ಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂದು ಆರ್ಟಿಐ ಕಾರ್ಯಕರ್ತ ಮನವಿ ಮಾಡಿದ್ದಾರೆ.
ಉಳಿದಂತೆ ಅರುಣ್ ಫಿರೋಧಿಯಾ ಎಂಬುವರ ಮೇಲೆ ದೂರುಗಳು ಕೇಳಿ ಬಂದಿವೆ. ಸೈಫ್ ಅಲಿ ಖಾನ್ ಮೇಲೆ ಅನೇಕ ಕ್ರಿಮಿನಲ್ ಕೇಸ್ ಗಳಿವೆ ಎಂದು ದೂರಿನಲ್ಲಿ ಹೇಳಲಾಗಿದೆ. ಮುಂಬೈ ಪೊಲೀಸರ ವರದಿ ಬಂದ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.
ಏನಿದು ಪ್ರಕರಣ?: ತಾಜ್ ಹೋಟೆಲಿನ ವಸಾಬಿ ರೆಸ್ಟೋರೆಂಟ್ನಲ್ಲಿ ಫೆಬ್ರವರಿ 22,2012ರಂದು ರಾತ್ರಿ ಭೋಜನ ಕೂಟದಲ್ಲಿ ಸೈಫ್ ತಮ್ಮ ಭಾವಿ ಪತ್ನಿ ಕರೀನಾ ಜೊತೆ ಪಾಲ್ಗೊಂಡಿದ್ದಾಗ ಗಲಾಟೆ ನಡೆದಿತ್ತು. ಹೋಟೆಲ್ ನಲ್ಲಿ ಏರು ಧ್ವನಿಯಲ್ಲಿ ಸೈಫ್ ಮಾತನಾಡುತ್ತಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಕ್ಬಾಲ್ ಶರ್ಮಾ ಎಂಬ ಅನಿವಾಸಿ ಭಾರತೀಯ ಉದ್ಯಮಿ ವಿರುದ್ಧ ಮಾತಿನ ಚಕಮಕಿ ನಡೆದಿತ್ತು. ಮಾತಿಗೆ ಮಾತು ಬೆಳೆದು ಶರ್ಮಾ ಮುಖಕ್ಕೆ ಸೈಫ್ ಪಂಚ್ ಕೊಟ್ಟಿದ್ದರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಕೋರ್ಟಿನಲ್ಲಿ ಸೈಫ್ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ. [ವಿವರ ಇಲ್ಲಿ ಓದಿ]
2010ರಲ್ಲಿ ಶರ್ಮಿಳಾ ಠಾಗೋರ್ ಹಾಗೂ ನವಾಬ್ ಪಟೌಡಿ ಅವರ ಪುತ್ರ ಸೈಫ್ ಅಲಿ ಖಾನ್ ಗೆ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
(ಒನ್ ಇಂಡಿಯಾ ಸುದ್ದಿ)
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications