ಸಿಖ್ ದಂಗೆ: ಕೋರ್ಟಿಗೆ ಶರಣಾದ ಮಾಜಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್
ನವದೆಹಲಿ, ಜನವರಿ 01: 1984ರ ಸಿಖ್ ದಂಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್ಸಿನ ಮಾಜಿ ಮುಖಂಡ ಸಜ್ಜನ್ ಕುಮಾರ್ ಅವರು ಸೋಮವಾರ ದೆಹಲಿಯ ಕರ್ಕರಡೂಮ ಕೋರ್ಟಿಗೆ ಶರಣಾದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ನಂತರ ನಡೆದ ಸಿಖ್ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಡಿ.17 ರಂದು ತೀರ್ಪು ನೀಡಿತ್ತು. ಈ ಮೂಲಕ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ್ದ ಟ್ರಯಲ್ ಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾದ ಆದೇಶವನ್ನು ಹೈಕೋರ್ಟ್ ನೀಡಿತ್ತು.
ಡಿ.31 ರೊಳಗೆ ಶರಣಾಗುವಂತೆ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಆದೇಶಿಸಿತ್ತು. ಆದರೆ ಜ.31 ರವರೆಗೆ ಶರಣಾಗತಿಗೆ ಕಾಲಾವಕಾಶ ಕೋರಿ ಅವರು ಸಲ್ಲಿಸಿದ್ದ ಅರ್ಜಿಯೂ ವಜಾ ಆದ ಹಿನ್ನೆಲೆಯಲ್ಲಿ ಅವರು ಸೋಮವಾರ ಕೋರ್ಟಿನೆದುರು ಶರಣಾಗಿದ್ದಾರೆ.

ಅವರನ್ನು ಮಾಂಡೋಲಿ ಜೈಲಿನಲ್ಲಿ ಇರಿಸಲಾಗಿದ್ದು, ಭದ್ರತೆಯ ದೃಶಃ್ಟಿಯಿಂದ ಅವರ ಸಂಚಾರಕ್ಕಾಗಿ ವಾಹನವೊಂದನ್ನು ಪೂರೈಸಲಾಗಿದೆ ಎಂದು ಸಜ್ಜನ್ ಕುಮಾರ್ ಅವರ ವಕೀಲರು ತಿಳಿಸಿದ್ದಾರೆ.
ಏನಿದು ಘಟನೆ?
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್ ಕುಮಾರ್ ಅವರು ಪ್ರಮುಖ ಆರೋಪಿಯಾಗಿದ್ದರು. ಅವರು ದೆಹಲಿಯ ಕಂಟೋನ್ಮೆಂಟ್ ಬಳಿ ಸಿಖ್ ಧರ್ಮೀಯರ ಮೇಲೆ ತಮ್ಮ ಬೆಂಬಲಿಗರಿಂದ ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಹಿಂಸಾಚಾರಕ್ಕೆ ಬೆಂಬಲ ನೀಡಿದ ಆರೋಪದ ಎರಡು ಪ್ರಕರಣವನ್ನೂ ಅವರು ಎದುರಿಸುತ್ತಿದ್ದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications