Get Updates
Get notified of breaking news, exclusive insights, and must-see stories!

ಜುಮಾ ಮಸೀದಿಯನ್ನು ಧ್ವಂಸಗೊಳಿಸಿ: ಸಾಕ್ಷಿ ಮಹಾರಾಜ್ ವಿವಾದಾತ್ಮಕ ಹೇಳಿಕೆ

ನವದೆಹಲಿ, ನವೆಂಬರ್ 23: ದೆಹಲಿಯ ಜಮಾ ಮಸೀದಿಯನ್ನು ಧ್ವಂಸ ಮಾಡುವಂತೆ ಬಿಜೆಪಿಯ ಸಂಸದ ಸಾಕ್ಷಿ ಮಹಾರಾಜ್ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉನ್ನಾವೊ ಕ್ಷೇತ್ರದ ಸಂಸದರಾದ ಸಾಕ್ಷಿ ಮಹಾರಾಜ್, ಒಂದು ವೇಳೆ ಮಸೀದಿಯನ್ನು ಧ್ವಂಸಗೊಳಿಸಿದಾಗ ಹಿಂದೂ ದೇವತೆಗಳ ವಿಗ್ರಹ ಪತ್ತೆಯಾಗದೆ ಇದ್ದರೆ ತಮ್ಮನ್ನು ನೇಣಿಗೇರಿಸುವಂತೆ ಸವಾಲು ಹಾಕಿದ್ದಾರೆ.

ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಸ್ಪಷ್ಟವಾಗಿದೆ ಎಂದ ಅವರು, ಈ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ಪಿ ನಾಯಕಿ ಮಾಯಾವತಿ ಮತ್ತು ಎಸ್ಪಿ ರಾಜ್ಯಾಧ್ಯಕ್ಷ ಅಖಿಲೇಶ್ ಯಾದವ್ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Sakshi Maharaj calls for demolition of Delhis Jama Masjid

'ನಾನು ರಾಜಕೀಯಕ್ಕೆ ಬಂದಾಗ ನನ್ನ ಮೊದಲ ಹೇಳಿಕೆ ನೀಡಿದ್ದು ಮಥುರಾದಲ್ಲಿ. ಅಯೋಧ್ಯಾ, ಮಥುರಾ ಮತ್ತು ಕಾಶಿಯನ್ನು ಬಿಡಲು ದೆಹಲಿಯ ಜಮಾ ಮಸೀದಿಯನ್ನು ಉರುಳಿಸಬೇಕು. ಅದರ ಮೆಟ್ಟಿಲುಗಳ ಕೆಳಗೆ ವಿಗ್ರಹಗಳು ಪತ್ತೆಯಾಗದೆ ಇದ್ದರೆ ನನ್ನನ್ನು ನೇಣಿಗೇರಿಸಬೇಕು. ನಾನು ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ' ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾಗಿ ಇಂಡಿಯನ್ಸ್ ಎಕ್ಸ್‌ ಪ್ರೆಸ್ ವರದಿ ಮಾಡಿದೆ.

ಸಾಕ್ಷಿ ಮಹಾರಾಜ್ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಭಾರತದಲ್ಲಿ ಶರಿಯಾ ಕಾನೂನು ಬರಬೇಕು ಎನ್ನುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಜುಲೈನಲ್ಲಿ ಅವರು ಹೇಳಿದ್ದರು.

ದೇಶಕ್ಕೆ ಒಂದೇ ರೀತಿಯ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿದ್ದ ಅವರು, ಜನಸಂಖ್ಯಾ ಸ್ಫೋಟಕ್ಕೆ ಮುಸ್ಲಿಮರೇ ಕಾರಣ ಎಂದೂ ಹೇಳಿಕೆ ನೀಡಿದ್ದರು.

ಅಲ್ಲದೆ, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಸ್ವಯಂ ಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಪರ ಮಾತನಾಡಿದ್ದ ಸಾಕ್ಷಿ, ಅವರೊಬ್ಬ ಸರಳ ಮನುಷ್ಯ ಎಂದು ಬಣ್ಣಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+