ಸಲ್ಲೂ ಕೃಷ್ಣ ಮೃಗ ಬೇಟೆ, ಗುದ್ದೋಡು ಕೇಸ್ ಅಪ್ಡೇಟ್ಸ್
ನವದೆಹಲಿ, ನ.5: ಹಿಂದಿ ಚಿತ್ರರಂಗದ ಅತ್ಯಂತ ಜನಪ್ರಿಯ ನಟ ಸಲ್ಮಾನ್ ಖಾನ್ ಅವರ ಎರಡು ಕೇಸುಗಳು ಕೋರ್ಟಿನಲ್ಲಿ ಬುಧವಾರ ವಿಚಾರಣೆಗೆ ಬಂದಿತ್ತು. ಈ ಪೈಕಿ ಒಂದರಲ್ಲಿ ಅಂತಿಮ ತೀರ್ಪು ಕಾಯ್ದಿರಿಸಲಾಗಿದ್ದರೆ, ಮತ್ತೊಂದು ಪ್ರಕರಣದ ವಿಚಾರಣೆ ಮುಂದೂಡಲಾಗಿದೆ. ಕೋರ್ಟ್ ಆದೇಶ ಹೊರಬೀಳುವ ತನಕ ಸಲ್ಮಾನ್ ಅವರು ವಿದೇಶಕ್ಕೆ ಹಾರುವಂತಿಲ್ಲ.
ಕೃಷ್ಣಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ಮುಕ್ತಾಯವಾಗಿದೆ. ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ಶೂಟಿಂಗ್ ಗಾಗಿ ಬ್ರಿಟನ್ ಗೆ ತೆರಳಲು ಅನುಮತಿ ನೀಡುವಂತೆ ಸಲ್ಮಾನ್ ಕೋರಿದ್ದರು. ರಾಜಸ್ಥಾನ ಸರ್ಕಾರ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್ ನೀಡಿದ ಆದೇಶವನ್ನು ತಡೆ ನೀಡಬೇಕೆಂದು ಕೋರಿತ್ತು.
ಚಿತ್ರದ ಶೂಟಿಂಗ್ ಮುಗಿಯುವವರೆಗೂ ಆದೇಶವನ್ನು ಕಾಯ್ದಿರಿಸಬೇಕೆಂದು ಸಲ್ಮಾನ್ ಖಾನ್ ಮನವಿ ಮಾಡಿದ್ದರು ಈ ಬಗ್ಗೆ ವಿಚಾರಣೆ ನಡೆಸಿದ ಜಸ್ಟೀಸ್ ಎಸ್ ಜೆ ಮುಖ್ಯೋಪಾಧ್ಯಾಯ್ ಹಾಗೂ ಜಸ್ಟೀಸ್ ಎ.ಕೆ ಗೋಯಲ್ ಅವರು ಆದೇಶವನ್ನು ಕಾಯ್ದಿರಿಸಿದ್ದು, ಬ್ರಿಟನ್ ವೀಸಾ ಪಡೆಯಲು ಆರೋಪಿಗೆ ಅನುಕೂಲವಾಗಲೆಂದು ಶಿಕ್ಷೆ ಬಗ್ಗೆ ಆದೇಶವನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

1998ರಲ್ಲಿ ಹಮ್ ಸಾಥ್ ಸಾಥ್ ಹೈ ಚಿತ್ರೀಕರಣದ ಸಂದರ್ಭದಲ್ಲಿ ರಾಜಸ್ಥಾನದ ಕಾಡೊಂದರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಬೇಟೆಯಾಡಿದ್ದರು. ಸಲ್ಮಾನ್ ಖಾನ್ ಅವರ ಜೊತೆಯಲ್ಲಿ ನಟಿ ಸೋನಾಲಿ ಬೇಂದ್ರೆ, ತಬು, ನೀಲಂ, ಸೈಫ್ ಅಲಿ ಖಾನ್ ಮುಂತಾದವರಿದ್ದರು. ಎಲ್ಲರ ವಿರುದ್ಧ ರಾಜಸ್ಥಾನ ಸರ್ಕಾರ ಪ್ರಕರಣ ದಾಖಲಿಸಿಕೊಂಡಿತ್ತು. ಕೆಳ ಹಂತದ ನ್ಯಾಯಲಯದಲ್ಲಿ ಆರೋಪಿಗಳ ಆರೋಪ ಸಾಬೀತಾಗಿತ್ತು ಆದರೆ, ಮರು ವರ್ಷವೇ ಹೈಕೋರ್ಟಿನಲ್ಲಿ ತಡೆಯಾಜ್ಞೆ ಸಿಕ್ಕಿತ್ತು. ಈಗ ಸುಪ್ರೀಂಕೋರ್ಟಿನಲ್ಲಿ ಪ್ರಕರಣ ಅಂತಿಮ ಹಂತ ತಲುಪಿದೆ.
ಗುದ್ದೋಡು ಪ್ರಕರಣ: 2002ರ ಹಿಟ್ ಅಂಡ್ ರನ್ ಕೇಸಿಗೆ ಸಂಬಂಧಿಸಿದಂತೆ ಕಾರು ಚಾಲನೆ ಮಾಡಿದ ವೇಳೆ ಸಲ್ಮಾನ್ ಅವರು ಕುಡಿದಿರಲಿಲ್ಲ. ಘಟನೆ ನಂತರ ನಾನು ಅವರನ್ನು ಭೇಟಿ ಮಾಡಿದ್ದೆ ಎಂದು ಪ್ರತ್ಯಕ್ಷದರ್ಶಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ತನ್ನ ಸಹೋದರಿ ಅರ್ಪಿತಾ ಅವರ ಮದುವೆ ಸಿದ್ಧತೆಯಲ್ಲಿ ಕಾರ್ಯನಿರತವಾಗಿರುವುದರಿಂದ ಸಲ್ಮಾನ್ ಖಾನ್ ಅವರು ಇಂದು ವಿಚಾರಣೆಗೆ ಹಾಜರಾಗಿಲ್ಲ ಎಂದು ಸಲ್ಮಾನ್ ಪರ ವಕೀಲರು ಕೋರ್ಟಿಗೆ ತಿಳಿಸಿದ್ದಾರೆ. ಸಾಕ್ಷಿಗಳ ವಿಚಾರಣೆ ಬಾಕಿ ಇರುವುದರಿಂದ ಇತರ ಪ್ರತ್ಯಕ್ಷದರ್ಶಿಗಳ ವಿಚಾರಣೆ ನವೆಂಬರ್ 24 ಮತ್ತು 25 ರಂದು ನಡೆಯಲಿದ್ದು, ಅಂದು ನ್ಯಾಯಾಲಯಕ್ಕೆ ಸಲ್ಮಾನ್ ಖಾನ್ ಖುದ್ದು ಹಾಜರಾಗುವಂತೆ ಕೋರ್ಟ್ ಆದೇಶಿಸಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications