ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈತ್ರಿಗೆ ಗುಡ್ ಬೈ ಎಂದ ಮಾಯಾವತಿ: ಮೌನ ಮುರಿದ ಅಖಿಲೇಶ್

|
Google Oneindia Kannada News

ನವದೆಹಲಿ, ಜೂನ್ 04: ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಕಡಿದುಕೊಂಡ ಬಿಎಸ್ಪಿ ನಾಯಕಿ ಮಾಯಾವತಿ ಅವರ ನಡೆಯ ಬಗ್ಗೆ ಅಂತೂ ಇಂತೂ ಎಸ್ಪಿ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಸಭೆ ಮತ್ತು ಅದಕ್ಕೂ ಮುನ್ನ ನಡೆದ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎಸ್ಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ, ಲೋಕಸಭೆ ಚುನಾವಣೆಯ ಸೋಲಿಗೆ ಅಖಿಲೇಶ್ ಯಾದವ್ ಕಾರಣ ಎಂದು ದೂರಿ ಸಮಾಜವಾದಿ ಪಕ್ಷದಿಂದ ಮೈತ್ರಿ ಕಡಿದುಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಸಮಾಜವಾದಿ ಪಕ್ಷದ 'ಸೈಕಲ್‌' ಪಂಕ್ಚರ್ ಮಾಡಿ 'ಬೈ ಬೈ' ಎಂದ ಮಾಯಾವತಿಸಮಾಜವಾದಿ ಪಕ್ಷದ 'ಸೈಕಲ್‌' ಪಂಕ್ಚರ್ ಮಾಡಿ 'ಬೈ ಬೈ' ಎಂದ ಮಾಯಾವತಿ

"ನಾವು ಮಾಯಾವತಿ ಅವರಿಗೆ ತಕ್ಕ ಉತ್ತರ ನೀಡುತ್ತೇವೆ. ನಮ್ಮ ಮೈತ್ರಿ ಮುರಿದರೆ ನಾವು ಸಹ ಏಕಾಂಗಿಯಾಗಿಯೇ ಚುನಾವಣೆಗೆ ಸ್ಪರ್ಧಿಸುತ್ತೇವೆ. ನಾವು ಏಕಾಂಗಿಯಾಗಿಯೇ ಹೋರಾಡಬೇಕು ಎಂದರೆ ಅದಕ್ಕೆ ನಾವೂ ಸಿದ್ಧ" ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

Samajwadi Party leader Akhilesh Yadavs reaction about about Mayawatis decision

ದೋಸ್ತಿ ಕತಮ್! ಅಖಿಲೇಶ್ ಗೆ ಮಾಯಾವತಿಯಿಂದ ಮಹಾಮಂಗಳಾರತಿದೋಸ್ತಿ ಕತಮ್! ಅಖಿಲೇಶ್ ಗೆ ಮಾಯಾವತಿಯಿಂದ ಮಹಾಮಂಗಳಾರತಿ

ಉತ್ತರ ಪ್ರದೇಶದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಹೇಳಿದ್ದರು.

English summary
Samajwadi Party leader Akhilesh Yadav's reaction about Mayawati's decision to quit from SP alliance."We will give a considered response to Mayawati. If the alliance has broken, then we will also consider fighting alone. If we have to go separate ways, then so be it"
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X