ಸಮಂತ್ ಗೋಯೆಲ್ RAW, ಅರವಿಂದ್ ಕುಮಾರ್ ಗುಪ್ತಚರ ಇಲಾಖೆ ಚೀಫ್
ನವದೆಹಲಿ, ಜೂನ್ 26: ಭಾರತದ ಎರಡು ಗುಪ್ತಚರ ಇಲಾಖೆ ವಿಭಾಗಗಳಿಗೆ ಬುಧವಾರ ಸರಕಾರವು ಹೊಸ ಮುಖ್ಯಸ್ಥರನ್ನು ನೇಮಿಸಿದೆ. ರೀಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಅಥವಾ RAWದ ಭಾರತದ ಹೊರಗಿನ ಗುಪ್ತಚರ ಕಾರ್ಯ ಚಟುವಟಿಕೆಯ ಮುಖ್ಯಸ್ಥರಾಗಿದ್ದ ಸಮಂತ್ ಗೋಯೆಲ್ ಅವರು ಈಗ ಸಂಸ್ಥೆಯ ಮುಖ್ಯಸ್ಥರಾಗಲಿದ್ದಾರೆ. ಈ ವರೆಗೆ ಮುಖ್ಯಸ್ಥರಾಗಿ ಜವಾಬ್ದಾರಿ ನಿರ್ವಹಿಸಿದ್ದವರು ಅನಿಲ್ ಧಮ್ಸಾನ.
ಇನ್ನು ಗುಪ್ತಚರ ಇಲಾಖೆಯ ಕಾಶ್ಮೀರ್ ಡೆಸ್ಕ್ ನಲ್ಲಿ ಎರಡನೇ ಸ್ಥಾನದಲ್ಲಿ ಇದ್ದ ಅರವಿಂದ್ ಕುಮಾರ್ ಅವರು ಸಂಸ್ಥೆಯ ಮುಖ್ಯಸ್ಥರಾಗಲಿದ್ದು, ಈ ವರೆಗೆ ಆ ಹುದ್ದೆಯಲ್ಲಿದ್ದ ರಾಜೀವ್ ಜೈನ್ ರ ಸ್ಥಾನವನ್ನು ತುಂಬಲಿದ್ದಾರೆ. ನೇಮಕಾತಿಯ ಕಡತಕ್ಕೆ ಗೃಹ ಸಚಿವರು ಸಹಿ ಹಾಕಿದ್ದು, ಅದನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಕಳುಹಿಸಲಾಗಿದೆ. ಇಬ್ಬರೂ ಅಧಿಕಾರಿಗಳು ಜೂನ್ ಮೂವತ್ತನೇ ತಾರೀಕು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸಮಂತ್ ಗೋಯೆಲ್ ಹಾಗೂ ಅರವಿಂದ್ ಕುಮಾರ್ ಇಬ್ಬರೂ 1984ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಗಳು. 1990ರ ದಶಕದಲ್ಲಿ ಪಂಜಾಬ್ ನಲ್ಲಿ ಭಯೋತ್ಪಾದಕರನ್ನು ನಿಗ್ರಹಿಸಲು ಗೋಯೆಲ್ ಕೆಲಸ ಮಾಡಿದ್ವರು. ದುಬೈ ಹಾಗೂ ಲಂಡನ್ ನಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ದುಬೈ ಹಾಗೂ ಲಂಡನ್ ರಾಯಭಾರ ಕಚೇರಿಯಲ್ಲಿ ಉಸ್ತುವಾರಿ ಆಗಿ ನೇಮಕ ಆಗಿದ್ದರು ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಅರವಿಂದ್ ಕುಮಾರ್ ಅವರು ಅಸ್ಸಾಮ್- ಮೇಘಾಲಯ ಕೇಡರ್ ನ ಅಧಿಕಾರಿ. ಬಿಹಾರದಲ್ಲಿ ಸಂಸ್ಥೆ ನೇತೃತ್ವ ವಹಿಸಿದ್ದರು. ಅದಕ್ಕೂ ಮುನ್ನ ದೀರ್ಘ ಕಾಲ ಆಡಳಿತ ಹಾಗೂ ವಿಚಾರಣೆ ಶಾಖೆಗಳಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications