ಸಮಂತ್ ಗೋಯೆಲ್ RAW, ಅರವಿಂದ್ ಕುಮಾರ್ ಗುಪ್ತಚರ ಇಲಾಖೆ ಚೀಫ್
ನವದೆಹಲಿ, ಜೂನ್ 26: ಭಾರತದ ಎರಡು ಗುಪ್ತಚರ ಇಲಾಖೆ ವಿಭಾಗಗಳಿಗೆ ಬುಧವಾರ ಸರಕಾರವು ಹೊಸ ಮುಖ್ಯಸ್ಥರನ್ನು ನೇಮಿಸಿದೆ. ರೀಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ಅಥವಾ RAWದ ಭಾರತದ ಹೊರಗಿನ ಗುಪ್ತಚರ ಕಾರ್ಯ ಚಟುವಟಿಕೆಯ ಮುಖ್ಯಸ್ಥರಾಗಿದ್ದ ಸಮಂತ್ ಗೋಯೆಲ್ ಅವರು ಈಗ ಸಂಸ್ಥೆಯ ಮುಖ್ಯಸ್ಥರಾಗಲಿದ್ದಾರೆ. ಈ ವರೆಗೆ ಮುಖ್ಯಸ್ಥರಾಗಿ ಜವಾಬ್ದಾರಿ ನಿರ್ವಹಿಸಿದ್ದವರು ಅನಿಲ್ ಧಮ್ಸಾನ.
ಇನ್ನು ಗುಪ್ತಚರ ಇಲಾಖೆಯ ಕಾಶ್ಮೀರ್ ಡೆಸ್ಕ್ ನಲ್ಲಿ ಎರಡನೇ ಸ್ಥಾನದಲ್ಲಿ ಇದ್ದ ಅರವಿಂದ್ ಕುಮಾರ್ ಅವರು ಸಂಸ್ಥೆಯ ಮುಖ್ಯಸ್ಥರಾಗಲಿದ್ದು, ಈ ವರೆಗೆ ಆ ಹುದ್ದೆಯಲ್ಲಿದ್ದ ರಾಜೀವ್ ಜೈನ್ ರ ಸ್ಥಾನವನ್ನು ತುಂಬಲಿದ್ದಾರೆ. ನೇಮಕಾತಿಯ ಕಡತಕ್ಕೆ ಗೃಹ ಸಚಿವರು ಸಹಿ ಹಾಕಿದ್ದು, ಅದನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಕಳುಹಿಸಲಾಗಿದೆ. ಇಬ್ಬರೂ ಅಧಿಕಾರಿಗಳು ಜೂನ್ ಮೂವತ್ತನೇ ತಾರೀಕು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸಮಂತ್ ಗೋಯೆಲ್ ಹಾಗೂ ಅರವಿಂದ್ ಕುಮಾರ್ ಇಬ್ಬರೂ 1984ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಗಳು. 1990ರ ದಶಕದಲ್ಲಿ ಪಂಜಾಬ್ ನಲ್ಲಿ ಭಯೋತ್ಪಾದಕರನ್ನು ನಿಗ್ರಹಿಸಲು ಗೋಯೆಲ್ ಕೆಲಸ ಮಾಡಿದ್ವರು. ದುಬೈ ಹಾಗೂ ಲಂಡನ್ ನಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ದುಬೈ ಹಾಗೂ ಲಂಡನ್ ರಾಯಭಾರ ಕಚೇರಿಯಲ್ಲಿ ಉಸ್ತುವಾರಿ ಆಗಿ ನೇಮಕ ಆಗಿದ್ದರು ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಅರವಿಂದ್ ಕುಮಾರ್ ಅವರು ಅಸ್ಸಾಮ್- ಮೇಘಾಲಯ ಕೇಡರ್ ನ ಅಧಿಕಾರಿ. ಬಿಹಾರದಲ್ಲಿ ಸಂಸ್ಥೆ ನೇತೃತ್ವ ವಹಿಸಿದ್ದರು. ಅದಕ್ಕೂ ಮುನ್ನ ದೀರ್ಘ ಕಾಲ ಆಡಳಿತ ಹಾಗೂ ವಿಚಾರಣೆ ಶಾಖೆಗಳಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications