ಹಿಂದೂ ಭಯೋತ್ಪಾದನೆ ಸಿದ್ಧಾಂತ: ಕಾಂಗ್ರೆಸ್ ಕ್ಷಮೆಗೆ ಜೇಟ್ಲಿ ಅಗ್ರಹ
ನವದೆಹಲಿ, ಮಾರ್ಚ್ 29: ಸಂಜೋತಾ ಎಕ್ಸ್ಪ್ರೆಸ್ ಸ್ಫೋಟ ಪ್ರಕರಣದಲ್ಲಿ 'ಹಿಂದೂ ಭಯೋತ್ಪಾದನೆ' ಎಂಬ ಸುಳ್ಳು ಸಿದ್ಧಾಂತ ಹರಿಬಿಟ್ಟಿದ್ದ ಕಾಂಗ್ರೆಸ್, ಅದಕ್ಕಾಗಿ ಹಿಂದೂ ಸಮುದಾಯದ ಕ್ಷಮೆ ಕೋರಬೇಕು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಆಗ್ರಹಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ರಾಜಕೀಯ ಲಾಭ ಪಡೆದುಕೊಳ್ಳುವ ಸಲುವಾಗಿ ಕಾಂಗ್ರೆಸ್ 'ಹಿಂದೂ ಭಯೋತ್ಪಾದನೆ'ಯ ಸುಳ್ಳು ಸಿದ್ಧಾಂತವನ್ನು ಹರಿಬಿಟ್ಟಿತು. ಇದರ ಮೂಲಕ ಇಡೀ ಹಿಂದೂ ಸಮುದಾಯಕ್ಕೆ ಕಳಂಕ ತಂದೊಟ್ಟಿತು. ಈಗ ಅದು ಇಡೀ ಹಿಂದೂ ಸಮುದಾಯದ ಕ್ಷಮೆ ಕೋರಬೇಕು ಎಂದು ಜೇಟ್ಲಿ ಒತ್ತಾಯಿಸಿದರು.
ಯುಪಿಎ ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂರು ಅಥವಾ ನಾಲ್ಕು ಅಂತಹ ಸಿದ್ಧಾಂತದ ಪ್ರಕರಣಗಳನ್ನು ಹೆಣೆಯಲಾಗಿತ್ತು. ಆದರೆ, ಅದಾವುದೂ ನ್ಯಾಯಾಲಯದಲ್ಲಿ ಊರ್ಜಿತಗೊಳ್ಳಲಿಲ್ಲ ಎಂದು ಆರೋಪಿಸಿದರು.

ಸಂಜೋತಾ ಎಕ್ಸ್ಪ್ರೆಸ್ ಪ್ರಕರಣದ ವಿಚಾರಣೆ ವೇಳೆ ಯಾವುದೇ ಸಾಕ್ಷ್ಯ ಲಭ್ಯವಿಲ್ಲ ಎಂದು ನ್ಯಾಯಾಲಯದ ತೀರ್ಪು ಸ್ಪಷ್ಟಪಡಿಸಿದೆ. ಅನೇಕ ಜನರು ಮೃತಪಟ್ಟರು. ಇದಕ್ಕೆ ಯಾರು ಹೊಣೆಗಾರಿಕೆ ತೆಗೆದುಕೊಳ್ಳುತ್ತಾರೆ? ಇದಕ್ಕೆ ಯುಪಿಎ ನಾಯಕತ್ವವೇ ಹೊಣೆ. ಹಿಂದೂ ಭಯೋತ್ಪಾದನೆಯ ಸಿದ್ಧಾಂತವನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಯುಪಿಎ ಸರ್ಕಾರವು ತಪ್ಪು ಜನರನ್ನು ಬಂಧಿಸಿತ್ತು ಎಂದರು.
ಸಿದ್ಧಾಂತವನ್ನು ಸೃಷ್ಟಿಸುವ ಸಲುವಾಗಿ ನಕಲಿ ಸಾಕ್ಷ್ಯಗಳ ಆಧಾರದಲ್ಲಿ ಅವರು ಪ್ರಕರಣ ದಾಖಲಿಸಿದ್ದರು. ಆದರೆ, ಕೊನೆಗೆ ಇದನ್ನು ನ್ಯಾಯಾಲಯ ನಿರ್ಧರಿಸಬೇಕಿತ್ತು. ಇದು ಸಾಕ್ಷ್ಯಗಳಿಲ್ಲದ ಪ್ರಕರಣ ಎಂದು ಕೋರ್ಟ್ ಹೇಳಿದೆ. 'ಹಿಂದೂ ಭಯೋತ್ಪಾದನೆ' ಪದ ಟಂಕಿಸಿದವರು ಈಗ ಭಕ್ತಿ ಪ್ರದರ್ಶಿಸುತ್ತಿದ್ದಾರೆ ಎಂದು ಟೀಕಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications